ಉತ್ತರ ಪ್ರದೇಶ | ಅಮೇಥಿಯಲ್ಲಿ ಅಡ್ಡಗೋಡೆಯಿಲ್ಲದೆ ಶೌಚಾಲಯ ನಿರ್ಮಾಣ; ವಿಡಿಯೋ ವೈರಲ್

Date:

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ ಯಾವುದೇ ಅಡ್ಡ ಗೋಡೆ ನಿರ್ಮಿಸದೆ ಒಂದರ ಪಕ್ಕ ಒಂದರ ಹಾಗೆ ನಾಲ್ಕು ಸಾರ್ವಜನಿಕ ಶೌಚಾಲಯ ನಿರ್ಮಿಸಿರುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯು ಅಮೇಥಿಯ ಜಗದೀಶು‌ ಬ್ಲಾಕ್‌ನ ಕಟೇ ಗ್ರಾಮದಿಂದ ವರದಿಯಾಗಿದ್ದು, ಇಲ್ಲಿನ ಸಾರ್ವಜನಿಕ ಶೌಚಾಲಯವನ್ನು ಭಾರೀ ಮೊತ್ತ ವ್ಯಯಿಸಿ ನಿರ್ಮಿಸಲಾಗಿದೆ. ಈ ಸಾರ್ವಜನಿಕ ಶೌಚಾಲಯವನ್ನು ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದರೂ, ಈ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿನ ಎಲ್ಲ ನಾಲ್ಕು ಶೌಚಾಸನಗಳಲ್ಲಿ ಕಸ ಮೆತ್ತಿಕೊಂಡಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ, ಈ ವಿಚಿತ್ರ ಸಾರ್ವಜನಿಕ ಶೌಚಾಲಯವನ್ನು ಯಾಕೆ ವಿಶ್ವದ 8ನೇ ಅದ್ಭುತವೆಂದು ಘೋಷಿಸಬಾರದು ಎಂದು ಅಮೇಥಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾಡಿದೆ. ಈ ಘಟನೆಗೆ ಉತ್ತರದಾಯಿತ್ವವನ್ನು ಆಗ್ರಹಿಸಿರುವ ಕಾಂಗ್ರೆಸ್ ಈ ಲೋಪಕ್ಕೆ ಗುತ್ತಿಗೆದಾರ, ಅಧಿಕಾರಿಗಳು ಅಥವಾ ಕೇಂದ್ರ ಸಚಿವರೇ ಕಾರಣವೇ ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ್ ಯಾದವ್, ಈ ಸಾರ್ವಜನಿಕ ಶೌಚಾಲಯಗಳು ಹಳತಾಗಿದ್ದು, ಹೊಸ ಸಾರ್ವಜನಿಕ ಶೌಚಾಲಯವನ್ನು ಗ್ರಾಮದ ಬೇರೆ ಕಡೆ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಹಳತಾದ ಸಾರ್ವಜನಿಕ ಶೌಚಾಲಯದಿಂದ ಶೌಚಾಸನಗಳನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದ್ದರೂ, ಯೋಜನೆಯಂತೆ ಈ ಆದೇಶ ಕಾರ್ಯಗತವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...