ಉತ್ತರ ಪ್ರದೇಶ | ವಿದ್ಯುತ್‌ ವೈರಿಂಗ್‌ ಪರಿಶೀಲಿಸಿದ್ದಕ್ಕೆ ದಲಿತ ವ್ಯಕ್ತಿಗೆ ಚಪ್ಪಲಿ ನೆಕ್ಕಿಸಿದ ಲೈನ್‌ಮೆನ್

Date:

ದಲಿತ ಸಮುದಾಯದ ವ್ಯಕ್ತಿಯೊಬ್ಬ ವಿದ್ಯುತ್‌ ವೈರಿಂಗ್‌ ಪರಿಶೀಲಿಸಿದ್ದಕ್ಕಾಗಿ ಲೈನ್‌ಮೆನ್‌ ಒಬ್ಬ ಮನಬಂದಂತೆ ಹಲ್ಲೆ ನಡೆಸಿ ತನ್ನ ಚಪ್ಪಲಿ ನೆಕ್ಕಿಸಿದ ಅಮಾನುಷ ಘಟನೆ ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಚಪ್ಪಲಿ ನೆಕ್ಕೆಸಿದ ಆರೋಪಿ ಲೈನ್‌ಮೆನ್ ತೇಜ್ಬಾಲಿ ಸಿಂಗ್‌ ಪಟೇಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವಿಡಿಯೋದಲ್ಲಿರುವಂತೆ ಆರೋಪಿಯು 21 ವರ್ಷದ ದಲಿತ ಸಮುದಾಯದ ವ್ಯಕ್ತಿ ರಾಜೇಂದ್ರ ಚಮರ್‌ ಎಂಬುವವರ ಮೇಲೆ ಹಲ್ಲೆ ನಡೆಸಿ ಚಪ್ಪಲಿ ನೆಕ್ಕಿಸುತ್ತಿದ್ದಾನೆ. ಅಲ್ಲದೆ ಕಿವಿ ಹಿಂಡಿ ಕ್ಷಮೆಯಾಚಿಸು ಎಂದು ಗದರಿಸುತ್ತಿದ್ದಾನೆ.

ಈ ಸುದ್ದಿ ಓದಿದ್ದೀರಾ? ಮಳೆಗೆ ನಲುಗಿದ ಉತ್ತರ ಭಾರತ; ದೆಹಲಿಯಲ್ಲಿ 40 ವರ್ಷದಲ್ಲೇ ದಾಖಲೆ ಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದು ವಿಡಿಯೋದಲ್ಲಿ ಲೈನ್‌ಮೆನ್‌ ಒಳಗೊಂಡಂತೆ ವಿದ್ಯುತ್‌ ಕಾರ್ಮಿಕರು ರಾಜೇಂದ್ರ ಚಮರ್‌ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಿಂದಿಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೈನ್‌ಮೆನ್ ತೇಜ್ಬಾಲಿ ಸಿಂಗ್‌ ಪಟೇಲ್ ಎಂಬಾತನನ್ನು ಪೊಲೀಸರು ಬಂಧಿಸಿ ಶಹಗಂಜ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ನನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದೆ. ವಿದ್ಯುತ್ ತಂತಿಯಲ್ಲಿ ಸ್ವಲ್ಪ ಸಮಸ್ಯೆಯಿದ್ದ ಕಾರಣ ಪರಿಶೀಲಿಸುತ್ತಿದ್ದೆ. ತೇಜ್ಬಾಲಿ ಅಲ್ಲಿಗೆ ಬಂದು ನನ್ನ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಲು ಆರಂಭಿಸಿ ತನ್ನ ಪಾದರಕ್ಷೆಯನ್ನು ನೆಕ್ಕುವಂತೆ ಹೇಳಿದ” ಎಂದು ಚಮರ್ ಘಟನೆಯ ಕುರಿತು ಸುದ್ದಿಗಾರರಿಗೆ ತಿಳಿಸಿದರು.

“ಜುಲೈ 8 ರಂದು, ನಾವು ಸಾಮಾಜಿಕ ಮಾಧ್ಯಮದ ಮೂಲಕ ಎರಡು ವೈರಲ್ ವಿಡಿಯೋಗಳನ್ನು ಸ್ವೀಕರಿಸಿದ್ದೇವೆ. ವಿಡಿಯೋಗಳಲ್ಲಿ, ಲೈನ್‌ಮೆನ್ ತೇಜ್ಬಾಲಿ ಎಂಬಾತ ಚಮರ್ ಅವರ ಮೇಲೆ ಹಲ್ಲೆ ಮಾಡಿ ಚಪ್ಪಲಿ ನೆಕ್ಕಿಸಿದ್ದಾನೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ, ಬೆದರಿಕೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿದ್ದೇವೆ” ಎಂದು ಉತ್ತರ ಪ್ರದೇಶ ಸೋನಭದ್ರಾ ವೃತ್ತದ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...