ಉತ್ತರಪ್ರದೇಶ | ಹೋಳಿ ಆಚರಣೆ ವೇಳೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ; ನಾಲ್ವರ ಬಂಧನ

Date:

ಮಾರ್ಚ್‌ 25ರಂದು ಹೋಳಿ ಹಬ್ಬ ನಡೆಯುತ್ತಿದ್ದು, ಎಲ್ಲೆಡೆ ಜನರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ ವೇಳೆ ಗುಂಪೊಂದು ಮುಸ್ಲಿಂ ಯುವಕ ಮತ್ತು ಇಬ್ಬರು ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ, ಬಿಜ್ನೋರ್‌ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ, ‘ಹೋಳಿ ಆಚರಣೆ ವೇಳೆ ಯಾರಿಗೂ ಕಿರುಕುಳ ನೀಡಬೇಡಿ’ ಎಂದು ಬಿಜ್ನೋರ್ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಮೂವರು ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹೋಳಿ ಆಡುತ್ತಿದ್ದ ಯುವಕರ ಗುಂಪೊಂದು ಅವರನ್ನು ಸುತ್ತಿವರಿದಿದೆ. ಬಳಿಕ, ಮಹಿಳೆಯರ ಮೇಲೆ ಪೈಪ್‌ ಹಾಗೂ ಬಕೆಟ್‌ಗಳ ಮೂಲಕ ನೀರು ಎರಚಿದ್ದಾರೆ. ಬಲವಂತವಾಗಿ ಮೂವರ ಮೇಲೆ ಬಣ್ಣ ಎರಚಿದ್ದಾರೆ. ಇದಕ್ಕೆ ಮಹಿಳೆಯರು ಪ್ರತಿರೋಧ ವ್ಯಕ್ತಪಡಿಸದ್ದಾರೆ. ಆದರೂ ಆ ಗುಂಪು ಕಿರುಕುಳ ನೀಡುವುದನ್ನು ಮುಂದುವರೆಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆದ ಕೂಡಲೇ ಬಿಜ್ನೋರ್ ಪೊಲೀಸ್ ಮುಖ್ಯಸ್ಥ ನೀರಜ್ ಕುಮಾರ್ ಜದೌನ್ ಸ್ಥಳೀಯ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಧಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ವೈರಲ್ ವಿಡಿಯೋವನ್ನು ಸ್ಕ್ಯಾನ್ ಮಾಡಿ ಅದರಲ್ಲಿ ಭಾಗಿಯಾದವರನ್ನು ಗುರುತಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ದೂರು ದಾಖಲು

ದುರ್ವರ್ತನೆ, ಸ್ವಯಂಪ್ರೇರಣೆಯಿಂದ ಮಹಿಳೆಗೆ ನೋವುಂಟು ಮಾಡುವುದು ಹಾಗೂ ಹಲ್ಲೆ ಸೇರಿದಂತೆ ಹಲವು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿ ಅನಿರುದ್ಧ್ ಹಾಗೂ ಮೂವರು ಅಪ್ರಾಪ್ತರನ್ನು ಬಂಧಿಸಿದ್ದಾರೆ.

ಬಿಜ್ನೋರ್ ಹಿರಿಯ ಪೊಲೀಸ್ ಅಧಿಕಾರಿ ನೀರಜ್ ಜಾದೌನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಹೋಳಿ ಸಮಯದಲ್ಲಿ ಜನರು ಯಾರಿಗೂ ಕಿರುಕುಳ ನೀಡಬಾರದು. ದಯವಿಟ್ಟು ಬಲವಂತವಾಗಿ ಜನರಿಗೆ ಬಣ್ಣ ಹಚ್ಚಬೇಡಿ. ಯಾರೇ ಕಾನೂನನ್ನು ಉಲ್ಲಂಘಿಸಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...