ಸಣ್ಣ ದಿನಸಿ ಅಂಗಡಿ ಮಾಲೀಕನಿಗೆ 141 ಕೋಟಿ ರೂಪಾಯಿ ತೆರಿಗೆ ನೋಟಿಸ್‌!

Date:

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸಣ್ಣ ದಿನಸಿ ಅಂಗಡಿಯ ಮಾಲೀಕರೊಬ್ಬರಿಗೆ ಬರೋಬ್ಬರಿ 141 ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ತೆರಿಗೆ ನೋಟಿಸ್ ಬಂದಿದೆ. ಖುರ್ಜಾದ ನಯಗಂಜ್ ಪ್ರದೇಶದ ನಿವಾಸಿ ಸುಧೀರ್ ತಮ್ಮ ಮನೆಯ ಒಂದು ಭಾಗದಲ್ಲಿ ಸಣ್ಣ ದಿನಸಿ ಅಂಗಡಿಯನ್ನು ನಡೆಸುತ್ತಿದ್ದು, ಕೋಟ್ಯಾಂತರ ರೂಪಾಯಿ ತೆರಿಗೆ ನೋಟಿಸ್ ನೋಡಿ ದಂಗಾಗಿದ್ದಾರೆ.

ದೆಹಲಿಯಲ್ಲಿ ಆರು ಕಂಪನಿಗಳನ್ನು ಸ್ಥಾಪಿಸಲು ತಮ್ಮ ಪ್ಯಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು ಇದರಿಂದಾಗಿ ನೋಟಿಸ್ ಬಂದಿದೆ ಎಂದು ಸುಧೀರ್ ಆರೋಪಿಸಿದ್ದಾರೆ. ಹಾಗೆಯೇ 2022ರಲ್ಲಿ ತಮಗೆ ಮೊದಲು ನೋಟಿಸ್ ನೀಡಲಾಗಿತ್ತು. ಈ ವೇಳೆ ತನಗೂ ಕಂಪನಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ತೆರಿಗೆ ಅಧಿಕಾರಿಗಳಿಗೆ ವಿವರಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾರ್ಮಿಕನಿಗೆ 232 ಕೋಟಿ ರೂ. ತೆರಿಗೆ ನೋಟಿಸ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವರ್ಷದ ಜುಲೈ 10ರಂದು ನಾನು 1,41,38,47,126 ರೂ.ಗಳ ಮಾರಾಟವನ್ನು ಮಾಡಿದ್ದೇನೆ ಎಂದು ಹೇಳುವ ಮತ್ತೊಂದು ನೋಟಿಸ್ ಬಂದಿದ್ದು ಅದನ್ನು ನೋಡಿ ನನಗೆ ಆಘಾತವಾಯಿತು. ದೆಹಲಿಯಲ್ಲಿ ಬಹು ಸಂಸ್ಥೆಗಳಿಗೆ ನನ್ನ ಪ್ಯಾನ್ ಅನ್ನು ವಂಚನೆಯಿಂದ ಬಳಸಿರುವುದೇ ಇದಕ್ಕೆ ಕಾರಣ” ಎಂದು ಸುಧೀರ್ ಹೇಳಿದ್ದಾರೆ.

ಸದ್ಯ ಖುರ್ಜಾ ಪೊಲೀಸ್ ಠಾಣೆಯ ಉಸ್ತುವಾರಿ ಪಂಕಜ್ ರೈ ಅವರು ಪ್ರಕರಣ ದಾಖಲಿಸಿ, ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಬ್ಯಾಂಕ್ ಖಾತೆಗಳನ್ನು ತೆರೆಯಲು, ನಕಲಿ ಕಂಪನಿಗಳನ್ನು ರಚಿಸಲು, ಸಾಲಗಳನ್ನು ಪಡೆಯಲು ಅಥವಾ ತೆರಿಗೆಗಳನ್ನು ತಪ್ಪಿಸಲು ಈ ವ್ಯಕ್ತಿಯ ಪ್ಯಾನ್ ವಿವರಗಳನ್ನು ಅಕ್ರಮವಾಗಿ ಬಳಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಸುಧೀರ್‌ಗೆ ಅನಿರೀಕ್ಷಿತವಾಗಿ ತೆರಿಗೆ ನೋಟಿಸ್ ಬಂದಾಗಲೇ ಈ ವಂಚನೆಗಳ ಬಗ್ಗೆ ತಿಳಿದುಬಂದಿದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...