ಉತ್ತರ ಪ್ರದೇಶ | ಸುಲಿಗೆ ಪ್ರಕರಣದಲ್ಲಿ ವಿಎಚ್‌ಪಿ ನಾಯಕ ಬಂಧನ; ಮೇಲಧಿಕಾರಿಗಳ ಭೇಟಿ ಬಳಿಕ ಹಲವು ಸೆಕ್ಷನ್‌ಗಳನ್ನು ಕೈಬಿಟ್ಟ ಪೊಲೀಸರು

Date:

ಸುಲಿಗೆ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ನಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಯ ಬೆಂಬಲಿಗರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದ ಬಳಿಕ, ಆರೋಪಿಯ ವಿರುದ್ಧ ದಾಖಲಾಗಿದ್ದ ಗಂಭೀರ ಸೆಕ್ಷನ್‌ಗಳನ್ನು ಪೊಲೀಸರು ಕೈಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಇದು, ಭಾರೀ ವಿವಾದಕ್ಕೆ ಕಾರಣವಾಗಿದೆ.

ವಿಎಚ್‌ಪಿ ನಾಯಕ ಪ್ರಿನ್ಸ್‌ ಗೌರ್ ಬಂಧಿತ ಆರೋಪಿ. ಆತನ ವಿರುದ್ಧ ಉತ್ತರ ಪ್ರದೇಶದ ಪಿಲಿಭಿತ್‌ ಹೆಚ್ಚುವರಿ ಜಿಲ್ಲಾಧಿಕಾರಿ ರಿತು ಪುನಿಯಾ ಅವರು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಿನ್ಸ್‌ ಗೌರ್ ತಮ್ಮ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ್ದಾನೆಂದು ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಿನ್ಸ್‌ ಗೌರ್‌ನನ್ನು ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಬಿಎನ್‌ಎಸ್ ಸೆಕ್ಷನ್‌ ಗಳು 132(2), 336(3), 338, 340(2), 308(5) ಹಾಗೂ 351(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಆದರೆ, ವಿಎಚ್‌ಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರು ಜಿಲ್ಲಾಧಿಕಾರಿ ಜ್ಞಾನೇಂದ್ರ ಸಿಂಗ್ ಮತ್ತು ಎಸ್‌ಪಿ ವಿಕ್ರಮ್ ದಹಿಯಾ ಅವರನ್ನು ಭೇಟಿ ಮಾಡಿದ್ದರು. ತಮ್ಮ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆನ್ನಲ್ಲೇ, ಆರೋಪಿ ವಿರುದ್ಧ ದಾಖಲಾಗಿದ್ದ ಸೆಕ್ಷನ್‌ಗಳಲ್ಲಿ 338 (ಜೀವಾವಧಿ ಶಿಕ್ಷೆ) ಹಾಗೂ 308(5) (ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ) ಸೆಕ್ಷನ್‌ಗಳನ್ನು ಕೈಬಿಡಲಾಗಿದೆ. ಬದಲಾಗಿ, ಕೇವಲ ಏಳು ವರ್ಷಗಳ ಶಿಕ್ಷೆ ವಿಧಿಸುವ 308(4) ಸೇರಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಮುಂದುವರೆದ ಮೋದಿ ಮುಸ್ಲಿಂ ದ್ವೇಷ ಭಾಷಣ; ವಿಪಕ್ಷಗಳ ಟೀಕೆಗೆ ರಾಮನ ಎಳೆದುತಂದ ಮೋದಿ

“ನಿಖಾ ಅಧಿಕಾರಿ ಸತೀಶ್ ಕುಮಾರ್ ಅವರು ಸಿಜೆಎಂ ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ಮೂಲಕ ಕೆಲವು ಸೆಕ್ಷನ್‌ಗಳನ್ನು ತೆಗೆದುಹಾಕಲಾಗಿದೆ ಮತ್ತು ಬದಲಿಸಲಾಗಿದೆ” ಎಂದು ಆರೋಪಿ ಪರ ವಕೀಲ ಅಶ್ವನಿ ಅಗ್ನಿಹೋತ್ರಿ ಹೇಳಿರುವುದಾಗಿ ‘ಟಿಓಐ’ ವರದಿ ಮಾಡಿದೆ.

“ವಸತಿ ನಿಲಯ ಅಭಿವೃದ್ಧಿ ಪ್ರಕರಣದಲ್ಲಿ ಆರೋಪಿಯು ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದಿದ್ದಾನೆ. ನನಗೆ ಕಿರುಕುಳ ನೀಡಿರುವುದು ಮಾತ್ರವಲ್ಲದೆ, ಹಣಕ್ಕೆ ಬೇಡಿಕೆ ಇಟ್ಟು, ಸುಲಿಗೆ ಮಾಡಲು ಯತ್ನಿಸಿದ್ದಾನೆ” ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಿತು ಪುನಿಯಾ ಆರೋಪಿಸಿದ್ದಾರೆ.

“ವಿಎಚ್‌ಪಿ ನಾಯಕರಿಗೆ ತಮ್ಮ ಆಕ್ಷೇಪಣೆಗಳನ್ನು ಲಿಖಿತವಾಗಿ ನೀಡುವಂತೆ ಸೂಚಿಸಲಾಗಿದೆ. ತನಿಖೆ ಸಂಪೂರ್ಣ ಪಾರದರ್ಶಕ ಮತ್ತು ಕಾನೂನಿನ ಪ್ರಕಾರ ನಡೆಯಲಿದೆ” ಎಂದು ಪಿಲಿಭಿತ್ ಜಿಲ್ಲಾಧಿಕಾರಿ ಜ್ಞಾನೇಂದ್ರ ಸಿಂಗ್ ಹೇಳಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...