ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಉತ್ತರಾಖಂಡ

Date:

ಉತ್ತರಾಖಂಡ ಇಂದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಿದ್ದು, ಎಲ್ಲಾ ನಾಗರಿಕರಿಗೆ ಏಕರೂಪ ವಿವಾಹ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಚೌಕಟ್ಟನ್ನು ರೂಪಿಸಲಿದೆ. ಗೋವಾದ ನಂತರ ನಾಗರಿಕರಿಗೆ ಏಕರೂಪ ಕಾನೂನು ಚೌಕಟ್ಟನ್ನು ಹೊಂದಿರುವ ಎರಡನೇ ರಾಜ್ಯ ಇದಾಗಲಿದೆ.

ಉತ್ತರಾಖಂಡ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಲ್ಪಟ್ಟ ಸುಮಾರು ಒಂದು ವರ್ಷದ ನಂತರ ಈ ಸಂಹಿತೆ ಜಾರಿಗೆ ಬಂದಿದೆ. ಇದು 2022ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.

ಇದನ್ನು ಓದಿದ್ದೀರಾ? ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುತ್ವ ವಿರೋಧಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಕ್ಕೆ ಪ್ರಬಲ ಪ್ರತಿರೋಧ ವ್ಯಕ್ತವಾಗಿದೆ. ಏಕರೂಪ ನಾಗರಿಕ ಸಂಹಿತೆಯಿಂದಾಗಿ ಭಾರತದ ವಂಚಿತ ಜನವರ್ಗಗಳು ಅಸಮಾನತೆ ಮತ್ತು ಅರಾಜಕತೆಗಳಿಗೆ ಬಲಿಪಶುಗಳಾಗುವ ಅಪಾಯವಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಆದರೆ ಇದೀಗ ಈ ಸಂಹಿತೆಯನ್ನು ಉತ್ತರಾಖಂಡದಲ್ಲಿ ಜಾರಿಗೊಳಿಸಲಾಗಿದೆ.

ಇನ್ನು ಈ ಸಂಹಿತೆಯಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಲೀವ್‌-ಇನ್ ಸಂಬಂಧದಲ್ಲಿದ್ದರೆ ಲೀವ್‌-ಇನ್ ಸಂಬಂಧಕ್ಕೆ ಕಡ್ಡಾಯ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಹಾಗೆಯೇ ಪೋಷಕರ ಒಪ್ಪಿಗೆಯನ್ನು ಕೂಡಾ ಪಡೆಯಬೇಕಾಗುತ್ತದೆ. ಈ ನಿಯಮವು ಉತ್ತರಾಖಂಡ ಯಾವುದೇ ನಿವಾಸಿಗಳಿಗೆ, ಹೊರಗಿನ ರಾಜ್ಯದವರಿಗೆ ಅನ್ವಯವಾಗುತ್ತದೆ.

ಇದನ್ನು ಓದಿದ್ದೀರಾ? ಉತ್ತರಾಖಂಡ | ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಲೀವ್‌-ಇನ್ ಸಂಬಂಧವನ್ನು ಘೋಷಿಸಿದಿದ್ದರೆ, ರಿಜಿಸ್ಟ್ರೇಷನ್ ಮಾಡುವಲ್ಲಿ ವಿಫಲವಾದರೆ ಅಥವಾ ಸುಳ್ಳು ಮಾಹಿತಿಯನ್ನು ಒದಗಿಸಿದರೆ, ಮೂರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ನೋಂದಣಿಯಲ್ಲಿ ಒಂದು ತಿಂಗಳ ವಿಳಂಬವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ, 10,000 ರೂ. ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಏಕರೂಪ ನಾಗರಿಕ ಸಂಹಿತೆ ಹೇಳುತ್ತದೆ.

ಹಾಗೆಯೇ ವಿವಾಹವನ್ನು ಕೂಡಾ ಕಡ್ಡಾಯವಾಗಿ ನೋಂದಾಯಿಸಬೇಕಾಗುತ್ತದೆ. ವಿವಾಹದ ಕನಿಷ್ಠ ವಯಸ್ಸು ಪುರುಷರಿಗೆ 21 ವರ್ಷಗಳು ಮತ್ತು ಮಹಿಳೆಯರಿಗೆ 18 ವರ್ಷವಾಗಿದೆ. ಲಿವ್-ಇನ್ ಸಂಬಂಧಗಳಿಂದ ಜನಿಸಿದ ಮಕ್ಕಳನ್ನು ದಂಪತಿಯ ಕಾನೂನುಬದ್ಧ ಮಗು ಎಂದು ಯುಸಿಸಿ ಗುರುತಿಸುತ್ತದೆ. ಆನುವಂಶಿಕವಾಗಿ ಸಮಾನ ಹಕ್ಕುಗಳನ್ನು ಅವರಿಗೆ ಅನ್ವಯವಾಗುತ್ತದೆ.

ಇದನ್ನು ಓದಿದ್ದೀರಾ? ಕೇಂದ್ರದ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

ಬಹುಪತ್ನಿತ್ವ, ಬಾಲ್ಯವಿವಾಹ, ತ್ರಿವಳಿ ತಲಾಖ್ ನಿಷೇಧ ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆಯನ್ನು ವಿಧಿಸಲಾಗುತ್ತದೆ. ಈ ಸಂಹಿತೆಯು ಪರಿಶಿಷ್ಟ ಪಂಗಡಗಳಿಗೆ ಅನ್ವಯಿಸುವುದಿಲ್ಲ. ಇನ್ನು ಏಕರೂಪ ನಾಗರಿಕ ಸಂಹಿತೆಯು ಮಹಿಳೆ ತನ್ನ ಗಂಡನನ್ನು ಕಳೆದುಕೊಂಡಾಗ ಅಥವಾ ವಿಚ್ಛೇದನ ಪಡೆದಾಗ ನಿಕಾಹ್ ಹಲಾಲಾ ಮತ್ತು ಇದ್ದತ್ ಸೇರಿದಂತೆ ಮುಸ್ಲಿಮರ ಕೆಲವು ವಿಭಾಗಗಳು ಅನುಸರಿಸುವ ಪದ್ಧತಿಗಳನ್ನು ನಿಷೇಧಿಸುತ್ತದೆ.

ಈ ನಡುವೆ ಪ್ರಧಾನಿ ನರೇಂದ್ರಮೋದಿ ಅವರು ಏಕರೂಪ ನಾಗರಿಕ ಸಂಹಿತೆಗಾಗಿ ಒತ್ತಾಯಿಸುತ್ತಿದ್ದಾರೆ ಮತ್ತು ಈ ವಿಷಯದ ಬಗ್ಗೆ ಮುಸ್ಲಿಮರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆಂದು ಪ್ರತಿಪಕ್ಷಗಳನ್ನು ದೂಷಿಸುತ್ತಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್ ಯುಸಿಸಿ ಎಲ್ಲ ಭಾರತೀಯರ ಮೇಲೆ ಪರಿಣಾಮ ಬೀರಬಹುದೆಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...