ಸುರಂಗ ದುರಂತ: 8ನೇ ದಿನವಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ, ಆಪತ್ತಿನಲ್ಲಿ 41 ಮಂದಿ

Date:

ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಸುರಂಗ ಕುಸಿಯುವ ಭೀತಿಯಿಂದ ಪ್ರಸ್ತುತ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಉತ್ತರಾಖಂಡದ ಸುರಂಗದಲ್ಲಿ 170 ಗಂಟೆಗಳ ಕಾಲ ಸಿಲುಕಿ ಹಾಕಿಕೊಂಡಿರುವ ಕಾರ್ಮಿಕರ ರಕ್ಷಣೆಗೆ ನಡೆಯುತ್ತಿರುವ ಕಾರ್ಯಾಚರಣೆಗೆ ಕೊರೆಯುವ ಯಂತ್ರದಲ್ಲಿನ ದೋಷ ಮತ್ತೆ ತಡೆಯೊಡ್ಡಿದ್ದು, ಕಾರ್ಮಿಕರ ಕುಟುಂಬಗಳ ಆತಂಕ ಹೆಚ್ಚಿದೆ.

ಯಂತ್ರದಿಂದ ದಿಢೀರನೇ ದೊಡ್ಡ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಯಂತ್ರವನ್ನು ಸ್ಥಗಿತಗೊಳಿಸಲಾಗಿತ್ತು. ಎರಡನೇ ಅಧಿಕ ಸಾಮರ್ಥ್ಯದ ಕೊರೆಯುವ ಯಂತ್ರವನ್ನು ದುರಂತ ಸ್ಥಳಕ್ಕೆ ತರಲಾಗಿದ್ದು,ಕಾರ್ಯಾಚರಣೆ ಸದ್ಯದಲ್ಲೇ ಮರು ಆರಂಭವಾಗಲಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಭಾನುವಾರ ನಿರ್ಮಾಣ ಹಂತದ ಸುರಂಗ ಕುಸಿದು 41 ಮಂದಿ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಕೊಳವೆಗಳ ಮೂಲಕ ಆಹಾರ ಮತ್ತು ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕಾರಿಗಳು ಮತ್ತು ಸ್ಳಳದಲ್ಲಿರುವ ತಜ್ಞರ ತಂಡವು 41 ಜನರನ್ನು ರಕ್ಷಿಸಲು ಕೇವಲ ಒಂದು ಯೋಜನೆಗೆ ಬದಲಾಗಿ ಐದು ಯೋಜನೆಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡಲು ನಿರ್ಧರಿಸಿದೆ.

ದುರಂತ ನಡೆದ ಸ್ಥಳಕ್ಕೆ ಆಗಮಿಸಿರುವ ಕಾರ್ಮಿಕರ ಕುಟುಂಬಗಳು ಆತಂಕದಲ್ಲಿವೆ. ಸಿಲುಕಿಕೊಂಡಿರುವ ಕಾರ್ಮಿಕರ ಆರೋಗ್ಯ ಸ್ಥಿತಿ ಹದಗೆಡುವ ಮುನ್ನ ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಿಲುಕಿಕೊಂಡಿರುವ ಕಾರ್ಮಿಕನ ಸಹೋದರರೊಬ್ಬರು ಹೇಳಿದ್ದಾರೆ.

ನಿರ್ಮಾಣ ಹಂತದ ಸಿಲ್ಕ್ಯಾತ್ರಾ ಸುರಂಗ ನವೆಂಬರ್ 12ರಂದು ಕುಸಿದು 41 ಮಂದಿ ಸಿಲುಕಿಕೊಂಡಿದ್ದರು. ರಂಧ್ರಗಳನ್ನು ಕೊರೆದು ಅವರನ್ನು ಸುರಕ್ಷಿತವಾಗಿ ಹೊರತರುವ ನಡೆಯುತ್ತಿರುವ ನಡುವೆಯೇ ಮತ್ತೆ ಮತ್ತೆ ಕುಸಿತಗಳು ಸಂಭವಿಸುತ್ತಿರುವುದು ಕಾರ್ಯಾಚರಣೆಗೆ ತಡೆಯಾಗಿದೆ. ಈ ಹಿನ್ನೆಲೆಯಲ್ಲಿ ರಂಧ್ರ ಕೊರೆದು ದೊಡ್ಡ ಪೈಪ್‌ಗಳ ಮೂಲಕ ಕಾರ್ಮಿಕರನ್ನು ಹೊರತರುವ ಪ್ರಯತ್ನ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...