ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ವಿ.ಸಿ.; ವಿದ್ಯಾರ್ಥಿಗಳ ಧರಣಿ

Date:

ಪೂರ್ವಸೂಚನೆ ಇಲ್ಲದೆ ಏಕಾಏಕಿ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ ಉಪಕುಲಪತಿಯ ನಡೆಯ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ಸಿಡಿದಿದೆ. ಪಂಜಾಬಿನ ಪಟಿಯಾಲದ ರಾಜೀವಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಜೈಶಂಕರ್ ಸಿಂಗ್ ವಿರುದ್ಧ ವಿದ್ಯಾರ್ಥಿಗಳು ಕಳೆದ ಎಂಟು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

ಉಪಕುಲಪತಿಯು ಈ ಹಿಂದೆ ನೀಡುತ್ತ ಬಂದಿರುವ ಸ್ತ್ರೀದ್ವೇಷಿ ಹೇಳಿಕೆಗಳು, ವಿಶ್ವವಿದ್ಯಾಲಯದ ಕ್ಯಾಂಪಸ್ ನ ಕುಂದು ಕೊರತೆಗಳ ವಿರುದ್ಧ ವಿದ್ಯಾರ್ಥಿಗಳ ಅಸಮಾಧಾನ ಹೆಪ್ಪುಗಟ್ಟುತ್ತ ಬಂದಿತ್ತು. ಉಪಕುಲಪತಿ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ ನಡೆ ಈ ಅಸಮಾಧಾನದ ಆಸ್ಫೋಟಕ್ಕೆ ದಾರಿ ಮಾಡಿದೆ.

ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ವಿಶ್ವವಿದ್ಯಾಲಯದ ಪುರುಷ ಸಿಬ್ಬಂದಿಗೆ ಪ್ರವೇಶವಿಲ್ಲ. ಈ ಕುರಿತು ನಿಯಮವನ್ನೇ ಮಾಡಲಾಗಿದೆ. ಪೋಷಕರನ್ನು ಕೂಡ ಹಾಸ್ಟೆಲ್ ಒಳಗೆ ಬಿಡುವುದಿಲ್ಲ. ಉಪಕುಲಪತಿ ಹೀಗೆ ನುಗ್ಗಿರುವುದು ನಮ್ಮ ಖಾಸಗಿತನ ಮತ್ತು ಖಾಸಗಿ ಆವರಣದ (ಪ್ರೈವೆಸಿ) ಮೇಲೆ ನಡೆದಿರುವ ಆಕ್ರಮಣ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಉಪಕುಲಪತಿಯವರ ಈ ಅನುಚಿತ ನಡೆ ಇದೇ ಮೊದಲನೆಯದೇನೂ ಅಲ್ಲ. ಕಳೆದ ಮಾರ್ಚ್ ತಿಂಗಳಿನಲ್ಲಿ ನೇಮಕ ಆದಾಗಿನಿಂದ ಲೈಂಗಿಕ ಪೂರ್ವಗ್ರಹದ ಮತ್ತು ಸಂವೇದನಾಶೂನ್ಯ ಹೇಳಿಕೆಗಳನ್ನು ಹಲವಾರು ಸಲ ಮಾಡಿದ್ದಾರೆ. ‘ನೈತಿಕ ಪೊಲೀಸುಗಿರಿ’ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ ನಂತರ ನಾವು ಆಕ್ಷೇಪಣೆ ಎತ್ತಿದ ನಂತರವೇ ಚೀಫ್ ವಾರ್ಡನ್ ಮತ್ತು ಮಹಿಳಾ ಸೆಕ್ಯೂರಿಟಿ ಗಾರ್ಡ್ ಅವರನ್ನು ಕರೆಯಿಸಲಾಯಿತು ಎಂದಿದ್ದಾರೆ ವಿದ್ಯಾರ್ಥಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಹುಡುಗಿಯಾಗಿ ಯಾಕೆ ಇಂತಹ ಹೊಸ ಮತ್ತು ಜಟಿಲ ವಿಷಯಗಳನ್ನು ಯಾಕೆ ಆರಿಸಿಕೊಂಡಿದ್ದೀ. ಕೌಟುಂಬಿಕ ಹಿಂಸೆ ಅಥವಾ ವಿವಾಹ ಕಾಯಿದೆ ಕುರಿತು ಮನೆಯಿಂದಲೇ ಕೋರ್ಸ್ ಮಾಡು’ ಎಂದು ವಿ.ಸಿ. ವಿದ್ಯಾರ್ಥಿನಿಯರಿಗೆ ಹೇಳಿದ್ದುಂಟು. ವಿದ್ಯಾರ್ಥಿನಿಯರು ತೊಡುವ ಉಡುಪನ್ನು ಕುರಿತೂ ಟೀಕೆ ಟಿಪ್ಪಣಿ ಮಾಡಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯದ ಪದನಿಮಿತ್ತ  ಕುಲಾಧಿಪತಿಯೂ ಆಗಿರುವ ಪಂಜಾಬ್-ಹರಿಯಾಣ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರಿಗೆ ದೂರು ಸಲ್ಲಿಸಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ವಿದ್ಯಾರ್ಥಿನಿಯರ ಚಲನವಲನದ ಮೇಲೆ ಹೇರಿದ್ದ ನಿರ್ಬಂಧಗಳನ್ನು ರದ್ದು ಮಾಡಬೇಕು, ಹಾಸ್ಟೆಲ್ ಊಟದ ಗುಣಮಟ್ಟ ಸುಧಾರಿಸಬೇಕು, ಕ್ಯಾಂಪಸ್ ನ ಮುಖ್ಯದ್ವಾರದಲ್ಲಿ ಸಿಸಿ ಟಿವಿ ಕ್ಯಾಮೆರಾ ಹಾಗೂ ಸಾಕಷ್ಟು ಬೆಳಕಿನ ವ್ಯವಸ್ಥೆ ಆಗಬೇಕು ಎಂಬುದು ವಿದ್ಯಾರ್ಥಿಗಳ ಇತರೆ ಅಹವಾಲುಗಳು.

ಈ ಸಲ ವಿದ್ಯಾರ್ಥಿನಿಯರು ದೊಡ್ಡ ಸಂಖ್ಯೆಯಲ್ಲಿ ಪ್ರವೇಶ ಪಡೆದಿದ್ದು, ವಿದ್ಯಾರ್ಥಿನಿಯರ ಹಾಸ್ಟೆಲ್ ಕಿಕ್ಕಿರಿದು ಮೊದಲನೆಯ ವರ್ಷದ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಮೊದಲ ವರ್ಷದ ವಿದ್ಯಾರ್ಥಿನಿಯರು ಕೊಠಡಿಗಳನ್ನು ಹಂಚಿಕೊಳ್ಳಬೇಕಾಗಿ ಬಂದಿದೆ ಎಂಬ ದೂರು ಬಂದಿತ್ತು. ಪರಿಶೀಲಿಸಲೆಂದು ವಿದ್ಯಾರ್ಥಿನಿಯರ ಆಮಂತ್ರಣದ ಮೇರೆಗೇ ಹೋಗಿದ್ದೆ ಎಂಬುದು ಉಪಕುಲಪತಿಯ ಸಮಜಾಯಿಷಿ.

ವಿದ್ಯಾರ್ಥಿನಿಯರು, ಈ ಸಮಜಾಯಿಷಿ ಸತ್ಯದೂರ ಎಂದು ತಳ್ಳಿ ಹಾಕಿದ್ದಾರೆ. ಉಪಕುಲಪತಿಯವರು ವಿದ್ಯಾರ್ಥಿನಿಯರಿಗಾಗಲಿ, ಹಾಸ್ಟೆಲಿನ ಚೀಫ್ ವಾರ್ಡನ್‌ಗೇ ಆಗಲಿ ತಮ್ಮ ಭೇಟಿ ಕುರಿತು ಪೂರ್ವಸೂಚನೆ ನೀಡಿಲ್ಲ. ಮೊದಲನೆಯ ವರ್ಷದ ವಿದ್ಯಾರ್ಥಿನಿಯರಿಗೆ ತೊಂದರೆಯಾದರೆ, ಉಪಕುಲಪತಿಯವರು ಮೂರನೆಯ ವರ್ಷದ ವಿದ್ಯಾರ್ಥಿನಿಯರ ಕೊಠಡಿಗಳಿಗೂ ನುಗ್ಗಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...