ಪಾನಿಪುರಿ ಕಡಿಮೆ ನೀಡಿದ್ದಕ್ಕೆ ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಮಹಿಳೆ: ವಿಡಿಯೋ ವೈರಲ್

Date:

ಇಪ್ಪತ್ತು ರೂಪಾಯಿಗೆ ಆರು ಪಾನಿಪುರಿ ನೀಡುವ ಬದಲು ಬರೀ ನಾಲ್ಕು ಪಾನಿಪುರಿ ನೀಡಿದ್ದಕ್ಕೆ ನೊಂದ ಮಹಿಳೆಯೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ವಡೋದರಾದಲ್ಲಿ ನಡೆದಿದೆ. ಮಹಿಳೆ ರಸ್ತೆ ಮಧ್ಯೆ ಅಳುತ್ತಾ ಕುಳಿತಿದ್ದರಿಂದ ವಾಹನ ಸವಾರರು ಬೇರೆ ಲೇನ್‌ನಲ್ಲಿ ಸಾಗಬೇಕಾದ ಸ್ಥಿತಿ ಉಂಟಾಗಿತ್ತು. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಹಿಳೆ ರಸ್ತೆ ಮಧ್ಯೆ ಕುಳಿತು ಅಳುತ್ತಿರುವುದು, “20 ರೂಪಾಯಿಗೆ ಬರೀ ನಾಲ್ಕು ಪಾನಿ ಪುರಿ ನೀಡಲಾಗಿದೆ, ಆರು ಪಾನಿಪುರಿ ನೀಡಬೇಕಾಗಿತ್ತು. ಈ ಅಂಗಡಿಯನ್ನೇ ಮುಚ್ಚಿಸಬೇಕು” ಎಂದು ಮಹಿಳೆ ಆಗ್ರಹಿಸಿರುವುದು ವಿಡಿಯೋದಲ್ಲಿ ಕಾಣಬಹುದು. ವಡೋದರಾ ಪೊಲೀಸರು ಈ ಸಮಸ್ಯೆಯನ್ನು ಪರಿಹರಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಪಾನಿಪುರಿ ವ್ಯಾಪಾರಿಗಳಿಗೂ ಜಿಎಸ್‌ಟಿ; ಕೇಂದ್ರದ ವಿರುದ್ಧ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆ ರಸ್ತೆಯಲ್ಲಿ ಕುಳಿತು ಅಳಲು ಪ್ರಾರಂಭಿಸಿದರು. ವಡೋದರಾ ಪೊಲೀಸರು ಸಮಸ್ಯೆಯನ್ನು ಪರಿಹರಿಸಿದರು. ಸುರ್‌ಸಾಗರ್‌ ಬಳಿ ಈ ಘಟನೆ ನಡೆದಿದೆ” ಎಂದು ವಿಡಿಯೋ ಪೋಸ್ಟ್‌ ಮಾಡಿದ ಸಾಗರ್ ಪಟೋಲಿಯಾ ಎಕ್ಸ್‌ ಖಾತೆಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೋರ್ವರು “ವಡೋದರಾ ಪೊಲೀಸರು ಮಧ್ಯಪ್ರವೇಶಿಸಿ ಈ ಪಾನಿಪುರಿ ಬಿಕ್ಕಟ್ಟನ್ನು ತ್ವರಿತವಾಗಿ ಪರಿಹರಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಪಾನಿಪುರಿ ಪ್ರತಿಭಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು “ಈ ವಿಚಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಬೇಕಾಗಿದ್ದು” ಎಂದು ವ್ಯಂಗ್ಯವಾಡಿದ್ದಾರೆ. “ಪಾವತಿಸಿದ ಹಣಕ್ಕೆ ಸರಿಯಾಗಿ ಪಾನಿಪುರಿ ಸಿಕ್ಕಿದೆಯೇ ಎಂದು ಕೇಳುವ ಹಕ್ಕು ಇದೆ” ಎಂದು ಕೆಲವು ನೆಟ್ಟಿಗರು ಹೇಳಿದರೆ, “ಪ್ರತಿಭಟಿಸುವಷ್ಟು, ಮಾರ್ಗಗಳನ್ನು ನಿರ್ಬಂಧಿಸುವಷ್ಟು ದೊಡ್ಡ ಕಾರಣ ಇದಲ್ಲ. ಇದು ಮೂರ್ಖತನ” ಎಂದು ಇನ್ನು ಕೆಲವು ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

“ಪಾನಿಪುರಿ ಭೈಯ್ಯ ಅವರಿಗೆ 20 ರೂಪಾಯಿಗೆ ಆರು ಪಾನಿಪುರಿ ನೀಡುವ ಬದಲಾಗಿ ಕೇವಲ ನಾಲ್ಕು ಪಾನಿಪುರಿಗಳನ್ನು ನೀಡಿದರು. ಅದರ ವಿರುದ್ದ ಪ್ರತಿಭಟಿಸಲು ಮಹಿಳೆ ರಸ್ತೆಯ ಮಧ್ಯದಲ್ಲಿ ಕುಳಿತರು. ರಾಹುಲ್ ಗಾಂಧಿಯವರು ಮತ ಕಳ್ಳತನದ ಬಗ್ಗೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಆದರೆ ಜನರಿಗೆ ಪಾನಿಪುರಿ ಪ್ರತಿಭಟನೆಯೇ ಅತಿ ಗಂಭೀರವಾಗಿದೆ” ಎಂದು ಇನ್ನೋರ್ವರು ಕಾಮೆಂಟ್ ಮಾಡಿದ್ದಾರೆ.

“ಪಾನಿಪುರಿ ವಿಷಯದಲ್ಲಿ ನಡೆದ ಅನ್ಯಾಯವು ನಗುವ ವಿಷಯವಲ್ಲ. ಇದನ್ನು ನೋಡಿ ನಗುವವರಿಗೆ ನಾಚಿಕೆಯಾಗಬೇಕು. ಪಾನಿ ಪುರಿ ಎಂದರೆ ಉತ್ಸಾಹ, ಭಾವನೆ, ಬಯಕೆ. ಒಂದು ತಟ್ಟೆಯಲ್ಲಿ ಆರಕ್ಕಿಂತ ಕಡಿಮೆ ಪಾನಿಪುರಿ ಇದ್ದರೆ ಅದನ್ನು ಒಪ್ಪಲಾಗದು” ಎಂದೂ ನೆಟ್ಟಗರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...