ಕೇಸರಿ ಬಣ್ಣಕ್ಕೆ ತಿರುಗಿದ ‘ವಂದೇ ಭಾರತ್‌ ಎಕ್ಸ್‌ಪ್ರೆಸ್ ‘ ರೈಲು!

Date:

  • ತ್ರಿವರ್ಣ ಧ್ವಜದಿಂದ ಸ್ಫೂರ್ತಿ ಪಡೆಯಲಾಗಿದೆ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
  • ಈ ಮೊದಲು ಬಿಳಿ ಹಾಗೂ ನೀಲಿ ಬಣ್ಣವನ್ನು ಹೊಂದಿದ್ದ ‘ವಂದೇ ಭಾರತ್‌’ ಬೋಗಿ

‘ಮೇಕ್ ಇನ್ ಇಂಡಿಯಾ’ದ ಭಾಗವಾಗಿ ಭಾರತದಲ್ಲಿಯೇ ನಿರ್ಮಾಣವಾಗುತ್ತಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ಹೈ ಸ್ಪೀಡ್ ರೈಲು ಇನ್ನು ಮುಂದೆ ಕೇಸರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಫೆ.15,2019ರಲ್ಲಿ ಮೊದಲಿಗೆ ದೆಹಲಿ-ವಾರಣಾಸಿ ನಡುವಿನ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾಗಿನಿಂದ ಇದುವರೆಗೆ ರೈಲುಗಳು ಬಿಳಿ ಹಾಗೂ ನೀಲಿ ಬಣ್ಣವನ್ನು ಹೊಂದಿದ್ದವು. ಈಗ 28ನೇ ಆವೃತ್ತಿಯ ಹೊಸ ರೈಲು ಬಿಳಿ ಮತ್ತು ಕೇಸರಿ ಬಣ್ಣವನ್ನು ಹೊಂದಿರಲಿದೆ.

ಹೊಸ ಕೇಸರಿ ಬಣ್ಣದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇನ್ನೂ ಕಾರ್ಯಾಚರಣೆಗೆ ಇಳಿದಿಲ್ಲ. ಅದು ಪ್ರಸ್ತುತ ವಂದೇ ಭಾರತ್ ರೈಲುಗಳು ತಯಾರಾಗುವ ತಮಿಳುನಾಡಿನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ಐಸಿಎಫ್) ಸಿದ್ಧವಾಗಿ ನಿಂತಿದೆ ಎಂದು ವರದಿಯಾಗಿದೆ. ಆದರೆ ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಣ್ಣ ಬದಲಾವಣೆ ಬಗ್ಗೆ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ನಮ್ಮ ದೇಶದ ತಂತ್ರಜ್ಞಾನವನ್ನು ಬಳಸಿ ವಂದೇ ಭಾರತ್ ರೈಲನ್ನು ತಯಾರಿಸಲಾಗುತ್ತಿದೆ. ಹೀಗಾಗಿ, ಹೊಸ ಬಣ್ಣವು ಭಾರತದ ತ್ರಿವರ್ಣ ಧ್ವಜದಿಂದ ಸ್ಫೂರ್ತಿ ಪಡೆದಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ’ ಸಂಪಾದಕೀಯ | ಮೈಸೂರು, ಬೆಂಗಳೂರು ಪಾಲಿಕೆಗಳ ‘ಕ್ಯೂಆರ್ ಕೋಡ್’ ನಡೆ ರಾಜ್ಯ ಸರ್ಕಾರಕ್ಕೆ ಮೇಲ್ಪಂಕ್ತಿಯಾಗಲಿ

ಈ ಹೇಳಿಕೆಯನ್ನು ಖಂಡಿಸಿರುವ ಹಲವು ನೆಟ್ಟಿಗರು, ತ್ರಿವರ್ಣ ಧ್ವಜದಲ್ಲಿ ಕೇಸರಿ, ಬಿಳಿ ಮಾತ್ರ ಇರೋದಾ? ಹಸಿರು ಕೂಡ ಸೇರಿಸಿ. ಅದನ್ನು ಸೇರಿಸಿದರೆ ದೇಶವನ್ನು ಇನ್ನಷ್ಟು ಅಂದವಾಗಿ ಪ್ರತಿನಿಧಿಸಿದಂತಾಗುತ್ತದೆ ಎಂದು ಪಾಠ ಮಾಡಿದ್ದಾರೆ.

ದೇಶಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ 50ರ ಗಡಿ ತಲುಪಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...