ಅವಧೇಶ್‌ ರಾಯ್‌ ಹತ್ಯೆ ಪ್ರಕರಣ | ಮುಖ್ತಾರ್‌ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಾರಾಣಸಿ ಕೋರ್ಟ್‌

Date:

  • 1991ರಲ್ಲಿ ಅವಧೇಶ್ ರಾಯ್‌ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ
  • ಅಜಯ್ ರಾಯ್ ಅವರ ನಿವಾಸದ ಎದುರು ಅವಧೇಶ್‌ ರಾಯ್‌ ಹತ್ಯೆ

ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ದೋಷಿ ತೀರ್ಮಾನಿಸಿರುವ ವಾರಾಣಸಿ ಸಂಸದರು ಶಾಸಕರ ನ್ಯಾಯಾಲಯ ಸೋಮವಾರ (ಜೂನ್ 5) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮೂವತ್ತು ವರ್ಷಗಳಿಂದ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

1991ರ ಆಗಸ್ಟ್ 3 ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ಅವರನ್ನು ವಾರಾಣಸಿಯ ಅವರ ಲಾಹುರಬೀರ್ ನಿವಾಸದ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮುಖ್ತಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು.

“ಮುಖ್ತಾರ್ ಅನ್ಸಾರಿ ಅವರನ್ನು 1991ರ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಲಾಗಿದೆ. ದಿನದ ಬಳಿಕ ನ್ಯಾಯಾಲಯ ಪ್ರಕರಣದ ತೀರ್ಪು ಪ್ರಕಟಿಸಲಿದೆ” ಎಂದು ವಾರಾಣಸಿಯಲ್ಲಿ ವಕೀಲರೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗೃಹ ಸಚಿವ ಅಮಿತ್ ಶಾ ಭೇಟಿಯಾದ ಕುಸ್ತಿಪಟುಗಳು | ತ್ವರಿತ ಕ್ರಮ, ನಿಷ್ಪಕ್ಷಪಾತ ತನಿಖೆಗೆ ಆಗ್ರಹ

“ಹಲವು ವರ್ಷಗಳ ನಮ್ಮ ಕಾಯುವಿಕೆ ಇಂದು ಕೊನೆಗೊಂಡಿದೆ. ನ್ಯಾಯಕ್ಕಾಗಿ ನಾನು, ನನ್ನ ತಂದೆ ತಾಯಿ, ಅವಧೇಶನ ಮಗಳು ಮತ್ತು ಇಡೀ ಕುಟುಂಬ ತಾಳ್ಮೆಯಿಂದ ಕಾಯುತ್ತಿದ್ದೆವು. ಸರ್ಕಾರಗಳು ಬಂದವು, ಹೋದವು, ಆದರೆ ಮುಖ್ತಾರ್ ಗೆ ಶಿಕ್ಷೆಯಾಗಲಿಲ್ಲ” ಎಂದು ಅಜಯ್ ರಾಯ್ ಹೇಳಿದರು.

“ಆದರೆ ನಾವು ಧೃತಿಗೆಡಲಿಲ್ಲ. ನಮ್ಮ ವಕೀಲರ ಸತತ ಪ್ರಯತ್ನದಿಂದ ಇಂದು ನನ್ನ ಸಹೋದರನ ಹತ್ಯೆ ಪ್ರಕರಣದಲ್ಲಿ ಮುಖ್ತಾರ್ ಅನ್ಸಾರಿ ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿರುವುದು ಸಂತಸವಾಗಿದೆ” ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಮುಖ್ತಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಅವಧೇಶ್‌ ರಾಯ್‌ ಕುಟುಂಬ ಸ್ವಾಗತಿಸಿದೆ. “ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರಬೇಕು. ಈಗ ನಮಗೆ ನ್ಯಾಯ ದೊರಕಿದೆ. ಅಪರಾಧಿಗೆ ಶಿಕ್ಷೆ ದೊರೆತಿದೆ ಇದಕ್ಕೆ ನ್ಯಾಯಾಲಯ ಮತ್ತು ನಮ್ಮ ಪರವಾಗಿ ಹೋರಾಡಿದ ವಕೀಲರಿಗೆ ಧನ್ಯವಾದ” ಎಂದು ಅಜಯ್‌ ರಾಯ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...