ಕುವೈತ್ ಭೇಟಿಗೆ ಕೇಂದ್ರದಿಂದ ಅವಕಾಶ ನಿರಾಕರಣೆ: ಕೇರಳ ಸಚಿವೆ ವೀಣಾ ಜಾರ್ಜ್ ಆರೋಪ

Date:

ಕುವೈತ್‌ನ ಬೆಂಕಿ ದುರಂತದಲ್ಲಿ ಮೃತರು ಹಾಗೂ ಗಾಯಗೊಂಡ ಕೇರಳ ಮೂಲದವರ ಭೇಟಿಗೆ ತೆರಳುತ್ತಿದ್ದ ತನ್ನನ್ನು ಕೇಂದ್ರ ವಿದೇಶಾಂಗ ಇಲಾಖೆ ರಾಜಕೀಯ ಕ್ಲಿಯರೆನ್ಸ್‌ ನೀಡದೆ ನಿರಾಕರಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಆರೋಪಿಸಿದ್ದಾರೆ.

ವೀಣಾ ಜಾರ್ಜ್‌ ಅವರು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುವೈತ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸಲು ಗುರುವಾರ ಸಂಜೆ ತೆರಳಿದ್ದರು. ಆದರೆ ವಿದೇಶಾಂಗ ಇಲಾಖೆ ಕ್ಲಿಯರೆನ್ಸ್‌ ನಿರಾಕರಿಸಿದ ಕಾರಣ ಕುವೈತ್‌ಗೆ ತೆರಳಲು ಸಾಧ್ಯವಾಗಲಿಲ್ಲ ಎಂದು ಸಚಿವೆ ತಿಳಿಸಿದ್ದಾರೆ.

ಈ ಬಗ್ಗೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿನ ಪರಿಸ್ಥಿತಿ, ದುರಂತ ಹಾಗೂ ನೋವನ್ನು ಅನುಭವಿಸುತ್ತಿರುವ ಮಲಯಾಳಿ ಸಮುದಾಯಕ್ಕೆ ಕೇಂದ್ರ ಕೈಗೊಂಡ ನಿರ್ಧಾರ ‘ತಪ್ಪು ಹಾಗೂ ಅತ್ಯಂತ ದುರಾದೃಷ್ಟಕರವಾಗಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀಣಾ ಜಾರ್ಜ್‌ ಅವರು ರಾಜ್ಯ ಮಿಷನ್‌ ನಿರ್ದೇಶಕರಾದ ಜೀವನ್‌ ಬಾಬು ಅವರೊಂದಿಗೆ ತೆರಳಿದ್ದರು. ಕೇರಳ ಸರ್ಕಾರ ಕೂಡ ಕುವೈತ್‌ಗೆ ತೆರಳಲು ವೀಣಾ ಅವರನ್ನು ಅಧಿಕೃತ ಪ್ರತಿನಿಧಿಯಾಗಿ ಆದೇಶ ಹೊರಡಿಸಿತ್ತು. ಆದರೆ ಕೇಂದ್ರ ವಿದೇಶಾಂಗ ಇಲಾಖೆ ರಾಜಕೀಯ ಕ್ಲಿಯರೆನ್ಸ್‌ ನೀಡಲಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಕುವೈತ್‌ನ ಬೆಂಕಿ ದುರಂತದಲ್ಲಿ 23 ಮಂದಿ ಮಲಯಾಳಿಗರು ಮೃತಪಟ್ಟಿದ್ದಾರೆ.ಗಾಯಗೊಂಡ ಹಲವರನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಕೆಲವರು ಐಸಿಯುನಲ್ಲಿದ್ದಾರೆ. ಸಂತ್ರಸ್ತರ ಜೊತೆ ಅವರ ಕುಟುಂಬದವರಿಲ್ಲ.ಮೃತಪಟ್ಟ ಪ್ರತಿಯೊಬ್ಬರ ಜೀವನವು ದುಃಖಕರವಾಗಿದೆ. ಮಲಯಾಳಿಗಳು ಹೆಚ್ಚು ತೊಂದರೆಗೊಳಗಾಗಿದ್ದಾರೆ ಎಂದು ವೀಣಾ ಜಾರ್ಜ್‌ ತಿಳಿಸಿದ್ದಾರೆ.

ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಮೃತ ಭಾರತೀಯರಲ್ಲಿ, 23 ಕೇರಳದಿಂದ, ಏಳು ತಮಿಳುನಾಡಿನಿಂದ, ತಲಾ ಇಬ್ಬರು ಆಂಧ್ರಪ್ರದೇಶ ಮತ್ತು ಒಡಿಶಾದಿಂದ ಹಾಗೂ ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...