ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರ ಒಡೆದು ಹಾಕಿದ ಶಾಸಕ: ಕ್ರಮಕ್ಕೆ ಮುಂದಾದ ಆಯೋಗ

Date:

ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರವನ್ನು ಒಡೆದು ಹಾಕಿದ ಆಂಧ್ರ ಪ್ರದೇಶದ ವೈಎಸ್‌ಆರ್‌ಸಿ ಪಕ್ಷದ ಶಾಸಕ ಪಿ ರಾಮಕೃಷ್ಣ ರೆಡ್ಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದೆ.

ಈ ಘಟನೆಯು ಮೇ 13 ರಂದು ಮಚರಾಲಾ ವಿಧಾನಸಭಾ ಕ್ಷೆತ್ರದ ಮತಗಟ್ಟೆ ಸಂಖ್ಯೆ 202 ಮತ್ತು 7 ರಲ್ಲಿ ಸಂಭವಿಸಿದ್ದು, ಶಾಸಕ ಮಾಡಿದ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚುನಾವಣಾ ಆಯೋಗವು ವಿಡಿಯೋಗಳನ್ನು ರಾಜ್ಯ ಪೊಲೀಸರಿಗೆ ನೀಡಿ ತನಿಖೆ ನಡೆಸುವಂತೆ ಸೂಚಿಸಿದೆ.

“ಹಾಲಿ ಶಾಸಕ ಪಿ ರಾಮಕೃಷ್ಣ ರೆಡ್ಡಿ ಮಚರಾಲಾ ವಿಧಾನಸಭಾ ಕ್ಷೆತ್ರದ ಮತಗಟ್ಟೆ ಸಂಖ್ಯೆ 202 ಮತ್ತು 7 ರಲ್ಲಿ ಇವಿಎಂ ಯಂತ್ರವನ್ನು ಹಾಳು ಮಾಡಿರುವುದು ವೆಬ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಲಾಂಡು ಜಿಲ್ಲೆಯ ಚುನಾವಣಾ ಅಧಿಕಾರಿಗಳು ವಿಡಿಯೋ ದೃಶ್ಯಗಳನ್ನು ಪೊಲೀಸರಿಗೆ ನೀಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ” ಎಂದು ಆಂಧ್ರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಅಧಿಕಾರಿಗಳ ಮಾಹಿತಿಯ ಪ್ರಕಾರ ಮತಯಂತ್ರ ಹಾಳು ಮಾಡಿದ ಪ್ರಕರಣದಲ್ಲಿ ಶಾಸಕನ ಹೆಸರನ್ನು ಸೇರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

“ಚುನಾವಣಾ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು,ಸಿಇಒ ಮುಖೇಶ್ ಕುಮಾರ್ ಮೀನಾ ಅವರು ದುಷ್ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ” ಎಂದು ಆಯೋಗದ ಮೂಲಗಳು ತಿಳಿಸಿವೆ.

“ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದಾರೆ. ವೈಎಸ್‌ಆರ್‌ಸಿ ಪಕ್ಷದ ಶಾಸಕ ಪಿ ರಾಮಕೃಷ್ಣ ರೆಡ್ಡಿ ಇವಿಎಂ ಯಂತ್ರವನ್ನು ನಾಶ ಮಾಡಿದ್ದು, ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸುತ್ತೇನೆ. ವೈಎಸ್‌ಪಿ ಪಕ್ಷದ ಅರಾಜಕತೆ ಜೂ.4 ರಂದು ಅಂತ್ಯವಾಗಲಿದೆ” ಎಂದು ಟಿಡಿಪಿ ನಾಯಕ ನರಾ ಲೋಕೇಶ್ ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಮೇ.13 ರಂದು ವಿಧಾನಸಭೆ ಹಾಗೂ ಲೋಕಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...