ವಿಡಿಯೋ ವೈರಲ್ | ಹಿಮ್ಮುಖವಾಗಿ ಬಸ್‌ ಚಲಾಯಿಸಿದ ಚಾಲಕ; ಹಲವು ವಾಹನಗಳಿಗೆ ಢಿಕ್ಕಿ

Date:

ಮಹಾರಾಷ್ಟ್ರದ ಪುಣೆಯಲ್ಲಿ ಪುಣೆ ಮಹಾನಗರ ಪರಿವಾಹನ್ ಮಹಾಮಂಡಲ್ ಲಿಮಿಟೆಡ್ (ಪಿಎಂಪಿಎಂಎಲ್)ನ ಬಸ್ ಚಾಲಕನೊಬ್ಬ ಅಜಾರೂಕತೆಯಿಂದ ಬಸ್ ಚಾಲನೆ ಮಾಡಿದ್ದಾರೆ. ಹಿಮ್ಮುಖವಾಗಿ ಬಸ್ ಅನ್ನು ಚಲಾಯಿಸಿದ್ದು, ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾರೆ. ಬೇಜವಬ್ದಾರಿತನದಿಂದ ಬಸ್ ಚಾಲನೆ ಮಾಡಿರುವ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪುಣೆಯ ಸೇನಾಪತಿ ಬಾಪಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಾಲಕ ಬಸ್ ಚಾಲನೆ ಮಾಡುವ ವೇಳೆ, ಬಸ್‌ನಲ್ಲಿದ್ದ ಪ್ರಯಾಣಿಕರು ಚೀರಾಟ ನಡೆಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಸಾರಿಗೆ ಸಂಸ್ಥೆಯು ಬಸ್ ಚಾಲನೆ ಮಾಡಲು ಖಾಸಗಿ ಗುತ್ತಿಗೆದಾರರನ್ನು ಚಾಲಕನಾಗಿ ನೇಮಿಸಿಕೊಂಡಿದೆ ಎಂದು ಪಿಎಂಪಿಎಂಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

MH 14 HU 5725 ನೋಂದಣಿ ಸಂಖ್ಯೆಯ ಬಸ್ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಿಂಚ್ವಾಡ್ ಗಾಂವ್ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಚಾಲಕ ನಾಲ್ಕಾರು ವಾಹನ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಸ್ ತೆರಳುತ್ತಿದ್ದ ಮಾರ್ಗದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿತ್ತು. ಬಸ್ ಚಾಲಕ ರಸ್ತೆಯ ಹಂಪ್ ಅನ್ನು ತಪ್ಪಿಸಲು ಅಡ್ಡಾದಿಡ್ಡಿ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ಪಕ್ಕದಲ್ಲಿಯೇ ಇದ್ದ ಕಾರ್‌ಗಳಿಗೆ ಬಸ್ ಢಿಕ್ಕಿ ಹೊಡೆದಿದೆ. ಕಾರು ಚಾಲಕ ಬಸ್ ಅನ್ನು ನಿಲ್ಲಿಸಲು ಹೇಳಿದ್ದಾನೆ. ಅವರಿಂದ ತಪ್ಪಿಸಿಕೊಳ್ಳಲು ಆತ ಬಸ್ಅನ್ನು ಹಿಮ್ಮುಖವಾಗಿ ಚಲಾಯಿಸಿದ್ದಾನೆ ಎಂದು ತಿಳಿದುಬಂದಿದೆ.

“ಬಸ್ ಹಿಮ್ಮುಖವಾಗಿ ಚಲಿಸುವಾಗ ಹಿಂಬದಿಯಲ್ಲಿದ್ದ ಕೆಲವು ವಾಹನಗಳಿಗೂ ಢಿಕ್ಕಿ ಹೊಡೆದಿದೆ. ಬಳಿಕ, ಬಸ್ ಅನ್ನು ಮುಂದೆ ಚಾಲನೆ ಮಾಡಿದ್ದಾನೆ. ಈ ವೇಳೆ, ಕೆಲವರು ಬಸ್ ಚಾಲಕನನ್ನು ಬಲವಂತವಾಗಿ ನಿಲ್ಲಿಸಿದ್ದಾರೆ. ಚಾಲಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ” ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಕೋಲಿ ತಿಳಿಸಿದ್ದಾರೆ.

“ಪಿಎಂಪಿಎಂಎಲ್ ಬಸ್ ಚಾಲಕನನ್ನು ವಾರ್ಜೆ ಮಾಳವಾಡಿಯ ಅತುಲ್ನಗರ ನಿವಾಸಿ ನೀಲೇಶ್ ಜ್ಞಾನೇಶ್ವರ್ ಸಾವಂತ್ (31) ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಿ ನರಹತ್ಯೆಗೆ ಪ್ರಯತ್ನ, ದುಡುಕಿನ ಚಾಲನೆ ಮತ್ತು ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯ ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿ; ಬಯಲಾಯ್ತು ನಕಲಿ ಕಾರ್ಡ್‌ ಜಾಲ

“ಬಸ್ ಹಿಮ್ಮುಖ ದಿಕ್ಕಿನಲ್ಲಿ ಚಲಿಸುವಾಗ ಕನಿಷ್ಠ ಮೂರು ವಾಹನಗಳಿಗೆ ಢಿಕ್ಕಿ ಹೊಡೆದು ಹಾನಿಗೊಳಗಾದ ಬಗ್ಗೆ ನಮಗೆ ಮಾಹಿತಿ ಇದೆ. ಗಾಯಗೊಂಡಿರುವವರ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದಾಗ್ಯೂ, ಅಜಾಗರೂಕ ಕೃತ್ಯವು ಸಾವುನೋವುಗಳಿಗೆ ಕಾರಣವಾಗಬಹುದಾಗಿತ್ತು. ಅದು ಅಪರಾಧಿ ನರಹತ್ಯೆಗೆ ಸಂಬಂಧಿಸಿದ ನಿಬಂಧನೆಯನ್ನು ಅನ್ವಯಿಸಲಾಗಿದೆ” ಎಂದು ಚತುಶ್ರುಂಗಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಂಕುಶ್ ಚಿಂತಾಮನ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...