WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

Date:

ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)-2024ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡವು ಭರ್ಜರಿ ಗೆಲುವು ಸಾಧಿಸಿ, ಕಪ್‌ ಪಡೆದುಕೊಂಡಿದೆ. ಆರ್‌ಸಿಬಿ ಗೆಲುತ್ತಿದ್ದಂತೆ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿರುವ ವಿಜಯ್ ಮಲ್ಯ ಪ್ರತ್ಯಕ್ಷವಾಗಿದ್ದಾರೆ. ಮಹಿಳಾ ತಂಡವನ್ನು ಅಭಿನಂದಿಸಿ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿದ್ದಾರೆ.

ಆರ್‌ಸಿಬಿ ಪುರುಷ ತಂಡವು ಈವರೆಗೂ ಐಪಿಎಲ್‌ನಲ್ಲಿ ಕಪ್ ಗೆದ್ದಿಲ್ಲ. ಆದರೆ, ಮಹಿಳಾ ತಂಡವು ಎರಡನೇ ಸೀಸನ್‌ನಲ್ಲೇ ‘ಈ ಸಲ ಕಪ್‌ ನಮ್ದೇ’ ಎಂದಿದ್ದು, ಗೆದ್ದು ಬೀಗಿದ್ದಾರೆ. ಸ್ಮೃತಿ ಮಂದಣ್ಣ ನಾಯಕತ್ವದ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಎದುರು ಭರ್ಜರಿ ಜಯ ಸಾಧಿಸುತ್ತಿದ್ದಂತೆ ಆರ್‌ಸಿಬಿ ಪುರುಷ ತಂಡದ ಈ ಹಿಂದಿನ ಮಾಲೀಕ ವಿಜಯ್ ಮಲ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ತಂಡಕ್ಕೆ ಅಭಿನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಬ್ಲ್ಯೂಪಿಎಲ್‌ ಗೆದ್ದ ಆರ್‌ಸಿಬಿ ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಐಪಿಎಲ್‌ನಲ್ಲಿ ಆರ್‌ಸಿಬಿ ಪುರುಷರ ತಂಡವೂ ಕೂಡಾ ಗೆಲುವು ಸಾಧಿಸಿದ್ದರೆ ಡಬಲ್ ಗೆಲುವಾಗುತ್ತಿತ್ತು. ಶುಭವಾಗಲಿ” ಎಂದು ಉದ್ಯಮಿ ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.

ವಿಜಯ್ ಮಲ್ಯ ಟ್ವೀಟ್ ಮಾಡುತ್ತಿದ್ದಂತೆ ನೆಟ್ಟಿಗರು ಹಾಸ್ಯಾಸ್ಪದವಾಗಿ ಕಾಮೆಂಟ್ ಮಾಡಿದ್ದಾರೆ. “ಆರ್‌ಸಿಬಿ ಪುರುಷರ ತಂಡವು 2024ರ ಸೀಸನ್‌ನಲ್ಲಿ ಗೆಲುವು ಸಾಧಿಸಿದರೆ ನೀವು ಭಾರತಕ್ಕೆ ವಾಪಾಸ್ ಬರುವುದಾಗಿ ನಾವು ಒಪ್ಪಂದ ಮಾಡಿಕೊಳ್ಳೋಣ” ಎಂದು ನೆಟ್ಟಿಗರು ಛೇಡಿಸಿದ್ದಾರೆ.

ಇನ್ನೋರ್ವ ನೆಟ್ಟಿಗ, “ಮಲ್ಯ ಬರೀ ರಜಾದಿನಗಳಲ್ಲಿ ಟ್ವೀಟ್ ಮಾಡುತ್ತಾರೆ” ಎಂದು ಹೇಳಿದರೆ, ಅಧೀರ ಎಂಬವರು, “ಹಾಯ್ ಮಲ್ಯ ಅಂಕಲ್, ಇಂದು ಭಾನುವಾರ ‘ಬ್ಯಾಂಕ್‌’ ರಜೆ” ಎಂದು ಬ್ಯಾಂಕುಗಳಿಗೆ ಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ತೊರೆದು ಹೋದ ವಿಜಯ್ ಮಲ್ಯ ಕಾಳೆದಿದ್ದಾರೆ.

ತಾನು ಕಿಂಗ್‌ಫಿಷರ್‌ನ ಮಾಜಿ ಉದ್ಯೋಗಿ ಎಂದು ಹೇಳಿಕೊಂಡಿರುವ ನೆಟ್ಟಿಗರೊಬ್ಬರು, “ನಿಮಗೆ ಒಳ್ಳೆಯದಾಗಲಿ ಸರ್. ನನ್ನ ಬಾಕಿ ವೇತನಕ್ಕಾಗಿ ನಾನು ಈಗಲೂ ಕಾಯುತ್ತಿದ್ದೇನೆ. ಇಂತೀ ನಿಮ್ಮ ಕಿಂಗ್‌ಫಿಷರ್‌ ಏರ್‌ಲೈನ್ಸ್‌ನ ಮಾಜಿ ಉದ್ಯೋಗಿ” ಎಂದಿದ್ದಾರೆ.

ಭಾರತದಲ್ಲಿ ಆರ್ಥಿಕ ಅಪರಾಧಿಯಾಗಿರುವ ವಿಜಯ್ ಮಲ್ಯ ಭಾರತದಿಂದ ಪಲಾಯನವಾಗಿ ಯುಕೆಯಲ್ಲಿದ್ದಾರೆ. 2012 ರಿಂದ ಹಣಕಾಸಿನ ಹಗರಣಗಳನ್ನು ನಡೆಸಿರುವ ವಿಜಯ್ ಮಲ್ಯ ಸಾಲವಿದ್ದರೂ ಐಷಾರಾಮಿ ಜೀವನ ನಡೆಸುತ್ತಿದ್ದು, ಭಾರತದ ಬ್ಯಾಂಕ್‌ಗಳಿಗೆ ವಂಚಿಸಿ ಪರಾರಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...