ಮಣಿಪುರ | ಮೂರು ಐಇಡಿ ಸ್ಫೋಟ; ಇಬ್ಬರಿಗೆ ಗಾಯ, ಗ್ರಾಮಸ್ಥರ ಪ್ರತಿಭಟನೆ

Date:

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಮೈತೇಯಿ, ಕುಕಿ ಸಮುದಾಯದ ನಡುವೆ ಘರ್ಷಣೆ ಉಂಟಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮೂರು ಐಇಡಿ ಸ್ಫೋಟಗೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದನ್ನು ಕುಕಿ ಬುಡಕಟ್ಟು ಜನಾಂಗದ ಸದಸ್ಯರು ಐಇಡಿಗಳನ್ನು ಇಟ್ಟಿದ್ದಾರೆ ಎಂದು ಮೈತೇಯಿ ಸಮುದಾಯದವರು ದೂರಿದ್ದು, ಪ್ರತಿಭಟಿಸಿದ್ದಾರೆ.

ಬೆಳಿಗ್ಗೆ 5ರಿಂದ ಬೆಳಿಗ್ಗೆ 6ರ ನಡುವೆ ಪಾಳು ಬಿದ್ದಿದ್ದ ಮನೆಯಲ್ಲಿ ಮೊದಲು ಸ್ಫೋಟ ಸಂಭವಿಸಿದೆ. ಅದಾದ ಬಳಿಕ ಬಿಷ್ಣುಪುರದ ಸೈಟನ್ ಗ್ರಾಮದಲ್ಲಿ ಮನೆಯೊಂದರ ಸುಮಾರು 200 ಮೀಟರ್ ದೂರದಲ್ಲಿ ನಡೆದ ಎರಡನೇ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಒಂದರ ನಂತರ ಒಂದರಂತೆ ಸ್ಫೋಟಗಳು ಸಂಭವಿಸಿವೆ ಎಂದು ಗ್ರಾಮಸ್ಥರು ಆ ಪ್ರದೇಶದಲ್ಲಿ ನಿಯೋಜಿಸಲಾದ ಕೇಂದ್ರ ಭದ್ರತಾ ಪಡೆಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ | 40 ಕೆಜಿ ಸ್ಫೋಟಕ ಹೊಂದಿರುವ ಸುಧಾರಿತ ರಾಕೆಟ್ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಸ್ಫೋಟದಲ್ಲಿ ಗಾಯಗೊಂಡ ಇಬ್ಬರನ್ನು ಸೋಯಿಬಮ್ ಸನತೊಂಬ ಸಿಂಗ್(52) ಮತ್ತು ನೊಂಗ್ಥೊಂಬಮ್ ಇಂದುಬಾಲಾ ದೇವಿ (37) ಎಂದು ಗುರುತಿಸಲಾಗಿದೆ. ಇಬ್ಬರನ್ನು ಬಿಷ್ಣುಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಮನೆ 70 ವರ್ಷದ ಸಲಾಮ್ ಮಣಿ ಸಿಂಗ್ ಎಂಬವರಿಗೆ ಸೇರಿದ್ದು, 2023ರ ಮೇ ತಿಂಗಳಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದಾಗಿನಿಂದ ಪಾಳು ಬಿದ್ದಿದೆ. ಸಲಾಮ್ ಸಿಂಗ್ ಇಂದಿಗೂ ನಿರಾಶ್ರಿತರ ಶಿಬಿರದಲ್ಲಿ ವಾಸಿಸುತ್ತಿದ್ದಾರೆ.

ಮೈತೇಯಿ ಸಮುದಾಯದ ಗ್ರಾಮಸ್ಥರು ಕುಕಿ ಬುಡಕಟ್ಟು ಜನಾಂಗದ ಸದಸ್ಯರು ಐಇಡಿಗಳನ್ನು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪದೇ ಪದೇ ದಾಳಿ ನಡೆಯುತ್ತಿದ್ದರೂ ಕೇಂದ್ರ ಪಡೆಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಹೇಳಿ ಪ್ರತಿಟಿಸಿದ್ದಾರೆ.

2023ರಲ್ಲಿ ಆರಂಭವಾದ ಹಿಂಸಾಚಾರವನ್ನು ಬಿಜೆಪಿ ಸರ್ಕಾರ ವಿಫಲವಾಗುತ್ತಿದ್ದಂತೆ ಅಂದಿನ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅದಾದ ಬಳಿಕ 2025ರ ಫೆಬ್ರವರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿದೆ. ಮೊದಲು ಆರು ತಿಂಗಳು ರಾಷ್ಟ್ರಪತಿ ಆಳ್ವಿಕೆ ಎಂದು ಹೇಳಲಾಗಿತ್ತು, ಆದರೆ ಮತ್ತೆ ಆರು ತಿಂಗಳು ವಿಸ್ತರಿಸಲಾಯಿತು.

ರಾಷ್ಟ್ರಪತಿ ಆಳ್ವಿಕೆಯನ್ನು ಪ್ರತಿ ಬಾರಿ 6 ತಿಂಗಳವರೆಗೆ ವಿಸ್ತರಿಸಬಹುದು. ಹೀಗೆ ಸಂಸತ್ತಿನ ಅನುಮೋದನೆಯೊಂದಿಗೆ ಗರಿಷ್ಠ 3 ವರ್ಷಗಳವರೆಗೆ ರಾಷ್ಟ್ರಪತಿ ಆಡಳಿತ ವಿಸ್ತರಿಸಬಹುದು. ಒಂದು ವರ್ಷಕ್ಕೂ ಅಧಿಕ ಕಾಲ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸಬೇಕಾದರೆ ದೇಶದಾದ್ಯಂತ ಅಥವಾ ಇಡೀ ರಾಜ್ಯದಲ್ಲಿ ಅಥವಾ ಅದರ ಯಾವುದಾದರೂ ಭಾಗದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಜಾರಿಯಲ್ಲಿರಬೇಕು. ಆ ರಾಜ್ಯದಲ್ಲಿ ಚುನಾವಣೆ ನಡೆಸಲು ತೊಂದರೆಗಳಿವೆ ಎಂದು ಚುನಾವಣಾ ಆಯೋಗವು ಪ್ರಮಾಣೀಕರಿಸಿರಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...