‘ಮಣಿಪುರದ ಹಿಂಸಾಚಾರ ದುರದೃಷ್ಟಕರ’; 28 ತಿಂಗಳ ಬಳಿಕ ಮೋದಿ ಭೇಟಿ

Date:

“ಮಣಿಪುರದ ಜನರೊಂದಿಗೆ ಸರ್ಕಾರ ಇದೆ. ರಾಜ್ಯವನ್ನು ಶಾಂತಿ ಮತ್ತು ಸಮೃದ್ಧಿಯ ಸಂಕೇತವನ್ನಾಗಿ ಮಾಡಲು ಸರ್ಕಾರ ಬಯಸಿದೆ. ಹಿಂಸಾಚಾರವನ್ನು ಮಣಿಪುರದ ಜನತೆ ದೂರ ಇಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

2023ರ ಮೇ 3ರಂದು ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಶುರುವಾದ ಕಲಹದಿಂದಾಗಿ ಮಣಿಪುರ ಎರಡು ಇಬ್ಭಾಗವಾಗಿ 28 ತಿಂಗಳಾದ ಬಳಿಕ, ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದಾರೆ.

ಕುಕಿ ಪ್ರಾಬಲ್ಯದ ಚೂರಾಚಾಂದ್ಪುರ ಜಿಲ್ಲೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಶಾಂತಿಗಾಗಿ ಕೇಂದ್ರ ಸರ್ಕಾರ ನಡೆಸುತ್ತಿರುವ ನಿರಂತರ ಪ್ರಯತ್ನಗಳು ಎರಡೂ ಕಡೆಯ ನಡುವೆ ಮಾತುಕತೆಗೆ ಕಾರಣವಾಯಿತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿ ಹಿಂಸಾಚಾರ ನಡೆದಿರುವುದು ದುರದೃಷ್ಟಕರ. ಇಂದು, ಭಾರತ ಸರ್ಕಾರ ನಿಮ್ಮೊಂದಿಗಿದೆ. ನಾನು ನಿಮ್ಮೊಂದಿಗಿದ್ದೇನೆ ಎಂದು ಭರವಸೆ ನೀಡಲು ಬಯಸುತ್ತೇನೆ” ಎಂದಿದ್ದಾರೆ. “ಶಾಂತಿಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲು ಎಲ್ಲ ಗುಂಪುಗಳು ಮತ್ತು ಸಂಸ್ಥೆಗಳಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ಅಭಿವೃದ್ಧಿಗಾಗಿ ಶಾಂತಿ ಅತ್ಯಂತ ಮುಖ್ಯ. ಕೇಂದ್ರ ಸರ್ಕಾರ ಶಾಂತಿಯನ್ನು ಸಾಧಿಸಲು ಬದ್ಧವಾಗಿದೆ. ರಾಜ್ಯದಲ್ಲಿ ರೈಲ್ವೆ ಮತ್ತು ರಸ್ತೆ ಸಂಪರ್ಕ ಯೋಜನೆಗಳಿಗೆ ಕೇಂದ್ರವು ಬಜೆಟ್ ಹಂಚಿಕೆಯನ್ನು ಹೆಚ್ಚಿಸಿದೆ ಎಂದು ವಿವರಿಸಿದ್ದಾರೆ.

“ಮಣಿಪುರದಲ್ಲಿ ಸಂಪರ್ಕವನ್ನು ಸುಧಾರಿಸಲು ನಾನು 2014ರಿಂದಲೂ ವಿಶೇಷ ಒತ್ತು ನೀಡಿದ್ದೇನೆ. ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅಭಿವೃದ್ಧಿಯ ಫಲಗಳು ದೇಶದ ಮೂಲೆ ಮೂಲೆಗೂ ತಲುಪುವಂತೆ ನೋಡಿಕೊಳ್ಳಲು ನಾನು ಬಯಸುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

ಮಣಿಪುರವನ್ನು ಧೈರ್ಯ ಮತ್ತು ಶೌರ್ಯದ ಭೂಮಿ ಎಂದು ಶ್ಲಾಘಿಸಿದ ಪ್ರಧಾನಿ, “ಇಂಫಾಲ್‌ನಿಂದ ಚೂರಾಚಾಂದ್ಪುರಕ್ಕೆ ರಸ್ತೆ ಮೂಲಕ ಹೋಗುವ ದಾರಿಯಲ್ಲಿ ನನಗೆ ದೊರೆತ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಬಣ್ಣಿಸಿದ್ದಾರೆ.

“ನಿರಾಶ್ರಿತ ಜನರೊಂದಿಗೆ ಮಾತನಾಡಿದೆ. ಮಣಿಪುರ ಹೊಸ ಉದಯದತ್ತ ನೋಡುತ್ತಿದೆ ಎಂದು ನಾನು ಹೇಳಬಲ್ಲೆ. ಜನರು ಶಾಂತಿಯ ಹಾದಿಯನ್ನು ಆರಿಸಿಕೊಂಡಿದ್ದಾರೆ. ಇಲ್ಲಿ ಅನಾವರಣಗೊಳಿಸಿದ ಯೋಜನೆಗಳು ಮೂಲಸೌಕರ್ಯ ಮತ್ತು ಆರೋಗ್ಯ ರಕ್ಷಣೆಯ ವಿಷಯದಲ್ಲಿ ಜನರ ಜೀವನವನ್ನು ಸುಧಾರಿಸುತ್ತವೆ” ಎಂದು ಭರವಸೆ ನೀಡಿದ್ದಾರೆ.

7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಮಣಿಪುರದಲ್ಲಿ ಚಾಲನೆ ನೀಡಲಾಗಿದೆ. “ಈ ಯೋಜನೆಗಳು ಮಣಿಪುರದ ಜನರ, ವಿಶೇಷವಾಗಿ ಬೆಟ್ಟಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜೀವನವನ್ನು ಮತ್ತಷ್ಟು ಸುಧಾರಿಸುತ್ತವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...