ಕೇದಾರನಾಥ | ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಹೆಲಿಕಾಪ್ಟರ್‌: ಪಾರಾದ ಯಾತ್ರಿಕರು; ವಿಡಿಯೋ ವೈರಲ್‌

Date:

ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್, ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಘಟನೆ ನಡೆದಿದೆ. ಎಲ್ಲ 6 ಪ್ರಯಾಣಿಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಲ್ಯಾಂಡಿಂಗ್ ಮಾಡುವ ಮೊದಲು ಹೆಲಿಕಾಪ್ಟರ್ ಗಿರಗಿರನೆ ತಿರುಗಿತು. ಈ ವೇಳೆ ಹೆಲಿಪ್ಯಾಡ್‌ನಲ್ಲಿ ನಿಂತಿದ್ದ ಸಿಬ್ಬಂದಿ ಹೆದರಿ ಹಿಂದಕ್ಕೆ ಓಡುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

ಸಿರ್ಸಿಯ ಹೆಲಿಪ್ಯಾಡ್‌ನಿಂದ ಪೈಲಟ್‌ ಸೇರಿ 7 ಮಂದಿಯನ್ನು ಹೊತ್ತು ಕೇದಾರನಾಥ ಧಾಮಕ್ಕೆ ಬರುತ್ತಿದ್ದ ಕೆಸ್ಟ್ರೆಲ್‌ ಏವಿಯೇಷನ್‌ ಕಂಪನಿಯ ಹೆಲಿಕಾಪ್ಟರ್‌ ತಾಂತ್ರಿಕ ಸಮಸ್ಯೆಯಿಂದಾಗಿ ಬೆಳಗ್ಗೆ 7:05ರ ಸುಮಾರಿಗೆ ತುರ್ತು ಭೂಸ್ಪರ್ಶ ಮಾಡಿತು. ಘಟನೆಯ ದೃಶ್ಯವು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಕೇದಾರನಾಥ ಬೇಸ್‌ಕ್ಯಾಂಪ್‌ನಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ದೃಶ್ಯ ಸೆರೆಯಾಗಿದೆ. ಕಾಪ್ಟರ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪೈಲಟ್ ತಾಳ್ಮೆ ಕಳೆದುಕೊಳ್ಳಲಿಲ್ಲ ಮತ್ತು ಬುದ್ಧಿವಂತಿಕೆಯನ್ನು ತೋರಿಸಿದರು ಮತ್ತು ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಿದರು” ಎಂದು ರುದ್ರಪ್ರಯಾಗ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ.ಸೌರಭ್ ಗಹರ್ವಾರ್ ಹೇಳಿದರು.

ಹೆಲಿಕಾಪ್ಟರ್‌ನಲ್ಲಿ ಕಂಡುಬಂದಿರುವ ತಾಂತ್ರಿಕ ದೋಷದ ಕಾರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕೇದಾರನಾಥದಲ್ಲಿ 2022ರ ಅಕ್ಟೋಬರ್‌ನಲ್ಲಿ, ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಆರು ಭಕ್ತರು ಮತ್ತು ಪೈಲಟ್ ಸಾವನ್ನಪ್ಪಿದ್ದರು. ಅಪಘಾತದ ನಂತರ, ಈ ಪ್ರದೇಶದಲ್ಲಿ ಹೆಲಿ ಸೇವೆಗಳ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಕೇದಾರನಾಥದಲ್ಲಿ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯನ್ನು ಸ್ಥಾಪಿಸುವಂತೆ ಯುಸಿಎಡಿಎ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದಿತ್ತು. ಕೇದಾರನಾಥದಲ್ಲಿ, ಚಾರ್ ಧಾಮ್ ಯಾತ್ರೆಯ ಸಮಯದಲ್ಲಿ, ಹೆಲಿಕಾಪ್ಟರ್‌ಗಳು ಪ್ರತಿದಿನ ಸರಾಸರಿ 400 ಬಾರಿ ಪ್ರಯಾಣಿಸುತ್ತವೆ.

ಚಾರ್ ಧಾಮ್ ಯಾತ್ರೆಯು ಮೇ 10 ರಂದು ಆರಂಭವಾಗಿದ್ದು, ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ಸೇರಿದಂತೆ ಮೂರ್ನಾಲ್ಕು ದೇವಾಲಯಗಳನ್ನು ತೆರೆಯಲಾಗಿದೆ. ಮೇ 12 ರಂದು ಬದರಿನಾಥದ ಬಾಗಿಲು ತೆರೆಯಲಾಗಿದೆ. ಚಾರ್ ಧಾಮ್ ಯಾತ್ರೆಯು ಸಾಮಾನ್ಯವಾಗಿ ಏಪ್ರಿಲ್-ಮೇ ನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯುತ್ತದೆ.

ಯಾತ್ರಿಕರ ನೂಕುನುಗ್ಗಲು ಕಾರಣ, ಉತ್ತರಾಖಂಡ ಸರ್ಕಾರವು ಚಾರ್‌ ಧಾಮ್‌ ಯಾತ್ರೆಗೆ ಬರುವ ಎಲ್ಲಾ ಯಾತ್ರಾರ್ಥಿಗಳಿಗೆ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಹರಿದ್ವಾರ ಮತ್ತು ಋಷಿಕೇಶದಲ್ಲಿ ಆಫ್‌ಲೈನ್ ನೋಂದಣಿಯನ್ನು ನಿಲ್ಲಿಸಲಾಗಿದ್ದು, ಭಕ್ತರು ಆನ್‌ಲೈನ್ ನೋಂದಣಿ ನಂತರವೇ ಚಾರ್‌ ಧಾಮ್‌ ಯಾತ್ರೆಗೆ ಬರಬೇಕು ಎಂದು ಆದೇಶ ಹೊರಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...