ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದ ವಿರಾಟ್‌ ಕೊಹ್ಲಿ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪು

Date:

ತಮ್ಮ ಬಾಲ್ಯದ ಕ್ರಿಕೆಟ್ ದಿನಗಳನ್ನು ಮೆಲುಕು ಹಾಕಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ತಮ್ಮ ನಾಯಕತ್ವದಡಿ ಕ್ರಿಕೆಟ್‌ ಆಡಿದ್ದರು ಎಂದು ಹೇಳಿದ್ದಾರೆ.

ಮಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ತೇಜಸ್ವಿ ಯಾದವ್‌, ಸ್ಥಳೀಯ ಮಟ್ಟದಲ್ಲಿ ಈಗಿನ ಭಾರತ ತಂಡದ ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದರು. ನನ್ನ ತಂಡದಲ್ಲಿ ಸ್ಟಾರ್ ಆಟಗಾರರಿದ್ದರೂ ನನ್ನ ಕ್ರಿಕೆಟ್ ಜೀವವವನ್ನು ಮುಂದುವರೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ತಮ್ಮ ಎರಡೂ ಕಾಲುಗಳಿಗೆ ಗಾಯವಾದ ಕಾರಣ ಕ್ರಿಕೆಟ್‌ಗೆ ವಿದಾಯ ಹೇಳಬೇಕಾಯಿತು ಎಂದು ತಿಳಿಸಿದ್ದಾರೆ.

ಭಾರತ ತಂಡದಲ್ಲಿ ಆಡಿರುವ ಬಹುತೇಕ ಸ್ಟಾರ್‌ ಆಟಗಾರರು ನನ್ನ ಕ್ರಿಕೆಟ್ ಸಹಪಾಠಿಗಳು. ನಾನು ಕ್ರಿಕೆಟಿಗನಾಗಿದ್ದರೂ ಹಾಗೂ ವಿರಾಟ್‌ ನನ್ನ ತಂಡದಲ್ಲಿ ಆಡಿದ್ದರೂ ಯಾರೊಬ್ಬರು ಈ ಬಗ್ಗೆ ಮಾತನಾಡುವುದಿಲ್ಲ. ಕ್ರಿಕೆಟ್ ವೃತ್ತಿಪರನಾಗಿ ನಾನು ಉತ್ತಮವಾಗಿ ಕ್ರಿಕೆಟ್ ಆಡುತ್ತಿದೆ. ದೆಹಲಿಯ ಅಂಡರ್-15 ಮತ್ತು ನಂತರ ಅಂಡರ್-17 ತಂಡದಲ್ಲಿ ಆಡಿದ ಸಮಯ ಇದು. ಆ ದಿನಗಳಲ್ಲಿ ವಿರಾಟ್ ಕೊಹ್ಲಿ ತೇಜಸ್ವಿ ನಾಯಕತ್ವದಲ್ಲಿ ಆಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ    

ತೇಜಸ್ವಿ ಯಾದವ್ ದೆಹಲಿಯ ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರ ಕ್ರಿಕೆಟ್ ವೃತ್ತಿಜೀವನವು ಅವರ ಶಾಲಾ ದಿನಗಳಿಂದಲೇ ಪ್ರಾರಂಭವಾಯಿತು. 13 ನೇ ವಯಸ್ಸಿನಲ್ಲಿ ಅವರು ದೆಹಲಿಯ ಅಂಡರ್-15 ತಂಡಕ್ಕೆ ಆಯ್ಕೆಯಾದರು. ಯಾದವ್ ತಮ್ಮ ವೃತ್ತಿಪರ ಕ್ರಿಕೆಟ್ ವೃತ್ತಿಜೀವನದಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಕೇವಲ ಒಂದು ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದರು. ಅದರಲ್ಲಿ ಅವರು 3 ರನ್ ಗಳಿಸಲು ಸಾಧ್ಯವಾಯಿತು. ಇದಲ್ಲದೆ, ಅವರು ತಮ್ಮ ಲಿಸ್ಟ್ ಎ ವೃತ್ತಿಜೀವನದಲ್ಲಿ 2 ಪಂದ್ಯಗಳನ್ನು ಮತ್ತು ಒಂದು ಪ್ರಥಮ ದರ್ಜೆ ಪಂದ್ಯವನ್ನೂ ಆಡಿದ್ದಾರೆ. ಅವರು ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಆಡಿದ 7 ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆದಿದ್ದಾರೆ.

ಐಪಿಎಲ್ 2008 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡಕ್ಕೆ 8 ಲಕ್ಷ ರೂ.ಗೆ ಹಾರಾಜಾಗಿದ್ದರು. ನಾಲ್ಕು ಆವೃತ್ತಿಗಳಲ್ಲಿ ಅವರು ದೆಹಲಿ ತಂಡದ ಭಾಗವಾಗಿದ್ದರು. ಆದರೆ ಅವರಿಗೆ ಆಡಲು ಅವಕಾಶ ಸಿಗಲಿಲ್ಲ. 2011ರಲ್ಲಿ ಒಂದು ಆವೃತ್ತಿಗೆ ಅವರ ವೇತನ 8 ಲಕ್ಷದಿಂದ 10 ಲಕ್ಷಕ್ಕೆ ಏರಿಕೆಯಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...