ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ಗೆ ಜಮೀನು ಒತ್ತುವರಿ ತೆರವು ಮಾಡುವಂತೆ ನೋಟಿಸ್ ಜಾರಿ

Date:

  • 15 ದಿನಗಳಲ್ಲಿ ಜಮೀನು ಒತ್ತುವರಿ ತೆರವುಗೊಳಿಸಲು ಆದೇಶ
  • ತೆರವುಗೊಳಿಸದಿದ್ದರೆ ಬಲಪ್ರಯೋಗ ಮಾಡಲಾಗುವುದು ಎಂದು ಸೂಚನೆ

ವಿಶ್ವಭಾರತಿ ವಿಶ್ವವಿದ್ಯಾಲಯವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರಿಗೆ ಜಮೀನು ಒತ್ತುವರಿ ತೆರವು ಆದೇಶ ಜಾರಿಗೊಳಿಸಿದ್ದು, ಅನಧಿಕೃತವಾಗಿ ಬಳಸುತ್ತಿದ್ದಾರೆ ಎನ್ನಲಾದ 13 ದಶಮಾಂಶ ಜಮೀನನ್ನು ಮೇ 6ರೊಳಗೆ ತೆರವುಗೊಳಿಸಬೇಕೆಂದು ಸೂಚಿಸಿದೆ.

“ಅಮರ್ತ್ಯ ಕುಮಾರ್ ಸೇನ್ ಮತ್ತು ಇತರ ಎಲ್ಲ ಸಂಬಂಧಿತರನ್ನು ತೆರವುಗೊಳಿಸಲು ಅಗತ್ಯವಿದ್ದರೆ ಬಲ ಪ್ರಯೋಗ ಮಾಡಲಾಗುವುದು. 13 ದಶಮಾಂಶ ಜಮೀನು 50 ಅಡಿ ಉದ್ದ ಹಾಗೂ 111 ಅಡಿ ಅಗಲದ ವಿಸ್ತೀರ್ಣ ಹೊಂದಿದ್ದು, ವಿವಿಯ ವಾಯುವ್ಯ ಪ್ರದೇಶದಲ್ಲಿದೆ,” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಅಮರ್ತ್ಯ ಸೇನ್ ಕಾನೂನುಬದ್ಧವಾಗಿ 1.25 ಎಕರೆ ಜಮೀನು ಮಾತ್ರ ಹೊಂದಿರಬಹುದಾಗಿದೆ (ಗುತ್ತಿಗೆ ಅವಧಿಯ ಉಳಿದ ಸಮಯಕ್ಕಾಗಿ). ಅವರು ಆ ಜಾಗದಲ್ಲಿ 1.38 ಎಕರೆ ಜಮೀನು ಬಳಸುವಂತಿಲ್ಲ. ಭಾರತ ಸರ್ಕಾರದ ಸುತ್ತೋಲೆಗಳು ಮತ್ತು ಸಿಎಜಿ ವರದಿಗಳ ಪಾಲನೆ ಮಾಡುವ ದೃಷ್ಟಿಯಿಂದ ಈ ಶತಮಾನದಷ್ಟು ಹಳೆಯದಾದ ವಿಶ್ವವಿದ್ಯಾಲಯವು ಒತ್ತುವರಿಗಳನ್ನು ತೆರವುಗೊಳಿಸಿ ಸಚಿವಾಲಯಕ್ಕೆ ವರದಿ ಸಲ್ಲಿಸುವ ಅಗತ್ಯವಿದೆ” ಎಂದು ಜಂಟಿ ರಿಜಿಸ್ಟ್ರಾರ್ ಆಶಿಷ್ ಮಹತೊ ಅವರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 10 ವರ್ಷಗಳ ನಂತರ ಪಾಕ್ ಸಚಿವ ಭಾರತಕ್ಕೆ ಭೇಟಿ; ಜೈಶಂಕರ್‌ ಆಹ್ವಾನ ಹಿನ್ನೆಲೆ ಆಗಮನ

ಸೇನ್ ಅವರ ಪೂರ್ವಜರ ಮನೆ ʻಪ್ರತಿಚಿʼ ಶಾಂತಿನಿಕೇತನದಲ್ಲಿದ್ದು, ಅವರು ಶಾಂತಿನಿಕೇತನಕ್ಕೆ ಬಂದಾಗ ಅಲ್ಲಿಯೇ ಉಳಿದುಕೊಳ್ಳುತ್ತಾರೆ. ಕೆಲ ದಿನಗಳ ಹಿಂದೆ ವಿಶ್ವಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಇದಕ್ಕೆ ಅವರು ನೀಡಿದ್ದ ಉತ್ತರ ಸಮರ್ಪಕವಾಗಿಲ್ಲ ಹಾಗೂ ಈ ಜಮೀನಿನ ಕಾನೂನುಬದ್ಧ ಒಡೆತನ ವಿಶ್ವಭಾರತಿಗೆ ಸೇರಿದ್ದು ಎಂದು ಸಂಸ್ಥೆ ಹೇಳಿದೆ.

ವಿವಿಯ ಆರೋಪವನ್ನು ಅಮರ್ತ್ಯ ಸೇನ್ ನಿರಾಕರಿಸಿದ್ದಾರೆ. 1.25 ಎಕರೆ ಜಮೀನನ್ನು ವಿಶ್ವಭಾರತಿ ಸಂಸ್ಥೆಯು ಅಮರ್ತ್ಯ ಸೇನ್‌ ಅವರ ತಂದೆಗೆ ನಿರ್ದಿಷ್ಟ ಅವಧಿಗೆ ಗುತ್ತಿಗೆ ನೀಡಿದ್ದರೆ, ಈಗ ಪ್ರಸ್ತಾಪಿಸಲಾಗಿರುವ 13 ದಶಮಾಂಶ ಜಮೀನನ್ನು ತಮ್ಮ ತಂದೆ ಖರೀದಿಸಿದ್ದರು. ಇದಕ್ಕೆ ಪೂರಕವಾದ ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...