ಸೇವಕನನ್ನು ಟ್ರಂಪ್‌ ಆಹ್ವಾನಿಸಿರುವುದು ಪ್ರಧಾನಿಗೆ ದೊಡ್ಡ ಅಪಮಾನ: ಸುಬ್ರಮಣಿಯನ್ ಸ್ವಾಮಿ

Date:

ಡೊನಾಲ್ಡ್‌ ಟ್ರಂಪ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಭಾರತದ ನಾಯಕರನ್ನು ಔಪಚಾರಿಕ ಆಹ್ವಾನಿಸಲಾಗಿದೆ ಎಂದು ಭಾರತದ ಮಾಧ್ಯಮಗಳು ಮಾಡಿರುವ ಸುದ್ದಿಯನ್ನು ನೋಡಿ ಅಮೆರಿಕದಲ್ಲಿ ನನ್ನ ಸ್ನೇಹಿತರು ನಗುತ್ತಿದ್ದಾರೆ. ಸಮಾರಂಭಕ್ಕೆ ಸೇವಕನನ್ನು (ಜೈಶಂಕರ್) ಆಹ್ವಾನಿಸಲಾಗಿದೆಯೇ ಹೊರತು ಪ್ರಧಾನಿಯವರನ್ನಲ್ಲ (ಮೋದಿ). ಇದು ದೊಡ್ಡ ಅವಮಾನವಲ್ಲವೇ ? ಆಹ್ವಾನ ಸ್ವೀಕರಿಸಿದ್ದಕ್ಕಾಗಿ ಸೇವಕನನ್ನು ವಜಾಗೊಳಿಸಿ’ ಎಂದು ಸ್ವಾಮಿ ಆರೋಪಿಸಿದ್ದಾರೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಇದೇ 20ರಂದು ಅಧಿಕಾರ ಸ್ವೀಕರಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಭಾರತದ ಪ್ರತಿನಿಧಿಯಾಗಿ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಇತ್ತೀಚಿಗೆ ಮೋದಿ ಅವರು ಸೇವಕನನ್ನು (ಜೈಶಂಕರ್) ಅಮೆರಿಕಕ್ಕೆ ಕಳುಹಿಸಿದ್ದರು. ಜತೆಗೆ, ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಮೋದಿ ಅವರಿಗೆ ಆಹ್ವಾನ ನೀಡುವಂತೆ ಹೇಳಿ ಬರುವಂತೆಯೂ ಜೈಶಂಕರ್‌ಗೆ ಸೂಚಿಸಲಾಗಿತ್ತು. ಅದರಂತೆಯೇ ಜೈಶಂಕರ್ ನಡೆದುಕೊಂಡಿದ್ದರು. ಇಲ್ಲದಿದ್ದರೆ ಅವರು (ಜೈಶಂಕರ್) ತಮ್ಮ ಹುದ್ದೆಯನ್ನು ಕಳೆದುಕೊಳ್ಳುತ್ತಿದ್ದರು’ ಎಂದು ಸ್ವಾಮಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಸದ್ಯ ಡೊನಾಲ್ಡ್ ಟ್ರಂಪ್ ಅವರು ಮೋದಿಯನ್ನು ಆಹ್ವಾನಿಸುವ ಮನಸ್ಥಿತಿಯಲ್ಲಿಲ್ಲ. 2023ರಲ್ಲಿ ಟ್ರಂಪ್ ಅವರ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಮೋದಿ ಘೋಷಿಸಿದ್ದರು. ಮೋದಿ ಅವರು ಆಹ್ವಾನವನ್ನು ತಿರಸ್ಕರಿಸುವ ಮೂಲಕ ಟ್ರಂಪ್‌ಗೆ ನೋವುಂಟು ಮಾಡಿದ್ದರು ಎಂದೂ ಸ್ವಾಮಿ ಹೇಳಿದ್ದಾರೆ.

ಜೈಶಂಕರ್ ಅವರು ಡಿಸೆಂಬರ್ 24ರಿಂದ 29ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಗಾಗಲೇ ನೇಮಕ ಮಾಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ವೃದ್ಧಿ ಹಾಗೂ ಪ್ರಸಕ್ತ ಜಾಗತಿಕ ವಿಷಯಗಳ ಕುರಿತು ಈ ಇಬ್ಬರೂ ನಾಯಕರು ಚರ್ಚಿಸಿದ್ದರು. ಚುನಾಯಿತ ಅಧ್ಯಕ್ಷ ಟ್ರಂಪ್ ಅವರ ಮುಂದಿನ ಆಡಳಿತದ ಉನ್ನತಾಧಿಕಾರಿಯ ಜತೆಗೆ ಭಾರತದ ಸಚಿವರು ನಡೆಸಿದ ಮೊದಲ ಸಭೆ ಇದಾಗಿತ್ತು.

https://twitter.com/Swamy39/status/1878440701144252795?ref_src=twsrc%5Etfw%7Ctwcamp%5Etweetembed%7Ctwterm%5E1878440701144252795%7Ctwgr%5E916ee26faf2b9ccf4027f76960cc02fce2604aee%7Ctwcon%5Es1_&ref_url=https%3A%2F%2Fwww.deccanherald.com%2F%2Findia%2Fwaiter-invited-but-pm-was-not-subramanian-swamy-on-s-jaishankar-going-for-trumps-swearing-in-3352555
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...