ಮಧ್ಯಪ್ರದೇಶ | ಹುಟ್ಟುಹಬ್ಬದಂದು ಜೀವಂತ ಹಾವನ್ನೇ ಕುತ್ತಿಗೆಗೆ ಸುತ್ತಿಕೊಂಡ ಕಾಂಗ್ರೆಸ್ ಶಾಸಕ

Date:

ಮಧ್ಯಪ್ರದೇಶ ಶಿಯೋಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಾಬು ಜಂಡೆಲ್ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು ಸುದ್ದಿಯಾಗಿದ್ದಾರೆ.

ತನ್ನ ಬೆಂಬಲಿಗರು ನೀಡುವ ಸಾಂಪ್ರದಾಯಿಕ ಹೂಮಾಲೆಗಳನ್ನು ಸ್ವೀಕರಿಸಲು ನಿರಾಕರಿಸಿದ ಬಾಬು ಜೀವಂತ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಲ್ಲಿ ಕುತ್ತಿಗೆಗೆ ಹಾವು ಸುತ್ತಿಕೊಂಡಿರುವ ಬಾಬು ಜಂಡೆಲ್ ತನ್ನ ಬೆಂಬಲಿಗರನ್ನು ಯಾವುದೇ ಭಯವಿಲ್ಲದೆ ಸ್ವಾಗತಿಸುತ್ತಿರುವುದನ್ನು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧ್ಯಮದವರೊಂದಿಗೆ ಮಾತನಾಡಿದ ಬಾಬು ಜಂಡೇಲ್, “ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದೇನೆ. ಪ್ರಾಣಿಗಳು ನನ್ನ ಸ್ನೇಹಿತರಂತೆ, ನನ್ನ ಹಿತ್ತಲಿನಲ್ಲಿ ಮಲ್ಲಿಗೆ ಗಿಡವಿದೆ. ರಾತ್ರಿ ವೇಳೆ ಹಾವುಗಳು ಆಗಾಗ ಬರುತ್ತವೆ. ಹಾವು ಶಿವನನ್ನು ಪ್ರತಿನಿಧಿಸುತ್ತದೆ. ಹಾಗಾಗಿ ನನ್ನ ಜನ್ಮದಿನದ ಸಂದರ್ಭದಲ್ಲಿ ನಾನು ದೇವರ ಮೇಲಿನ ಭಕ್ತಿಯ ರೂಪವಾಗಿ ಅದನ್ನು ನನ್ನ ಕುತ್ತಿಗೆಗೆ ಸುತ್ತಿಕೊಂಡೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವ ಇಲ್ಲದ ರಾಷ್ಟ್ರಗಳಲ್ಲಿ ಇವೆಲ್ಲ ನಡೆಯಲು ಸಾಧ್ಯ: ಖರ್ಗೆ ಆಹ್ವಾನಿಸದ್ದಕ್ಕೆ ಕಾಂಗ್ರೆಸ್ ವಾಗ್ದಾಳಿ

ಶಾಸಕರ ಜನ್ಮದಿನದಂದು ಅವರ ಮನೆಯಲ್ಲಿ ನೆರೆದಿದ್ದ ಬೆಂಬಲಿಗರ ಗುಂಪಿನಲ್ಲಿ, ಹಾವಾಡಿಗ ಕೂಡ ಇದ್ದನು. ಜಂಡೆಲ್ ಹಾವನ್ಮು ಹಾವನ್ನು ಪೆಟ್ಟಿಗೆಯಿಂದ ಹೊರತೆಗೆದು ನಂತರ ಅವರ ಕುತ್ತಿಗೆಗೆ ಹಾಕಿಕೊಂಡರು.

ಶಾಸಕ ಬಾಬು ಜಂಡೆಲ್ ಈ ಹಿಂದೆ ಕೂಡ ಇಂತಹ ವಿಚಿತ್ರ ವರ್ತನೆಯಿಂದ ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರವಾಹ ವಿಚಾರವಾಗಿ ಕುರ್ತಾ ಹರಿದು ಪ್ರತಿಭಟನೆ ನಡೆಸಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ಕಂಬ ಏರಿದ್ದರು. ಅವರು ಗಾಯಕರಾಗಿ ಮತ್ತು ಕೆಲವೊಮ್ಮೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನೃತ್ಯಗಾರರಾಗಿಯೂ ಕಾಣಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...