ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಕೇರಳದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸದ್ಯ ವಯನಾಡ್ ಭೂಕುಸಿತ ಘಟನೆಯ ಬಳಿಕ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಸೇರಿದಂತೆ ಹಲವು ಏಜೆನ್ಸಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ವಯನಾಡು ಜಿಲ್ಲೆಯಲ್ಲಿ 116 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವರ ಕಚೇರಿ ತಿಳಿಸಿದೆ. ಇನ್ನು ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕಾಂಗ್ರೆಸ್ ನಾಯಕ ಮತ್ತು ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ, ಈ ದುರಂತದಿಂದ ತೀವ್ರವಾಗಿ ನೋವಾಗಿದೆ ಎಂದು ಹೇಳಿದ್ದು ತಮ್ಮ ಕುಟುಂಬವನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಭೂಕುಸಿತದಲ್ಲಿ ಸಿಲುಕಿರುವವರನ್ನು ಶೀಘ್ರದಲ್ಲೇ ಸುರಕ್ಷಿತ ಸ್ಥಳಕ್ಕೆ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ” ಎಂದು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ವಯನಾಡ್ ಭೂಕುಸಿತ | ಮೃತರ ಸಂಖ್ಯೆ 43ಕ್ಕೆ ಏರಿಕೆ; ನೂರಾರು ಮಂದಿ ಸಿಲುಕಿರುವ ಶಂಕೆ
“ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ. ಯಾವುದೇ ಸಹಾಯ ಬೇಕಾದಲ್ಲಿ ನಮಗೆ ತಿಳಿಸುವಂತೆ ನಾವು ಅವರಿಗೆ ವಿನಂತಿಸಿದ್ದೇವೆ” ಎಂದು ಹೇಳಿರುವ ರಾಹುಲ್ ಗಾಂಧಿ ರಕ್ಷಣಾ ಕಾರ್ಯದಲ್ಲಿ ಸರ್ಕಾರದ ಜೊತೆ ಕೈಜೋಡಿಸಲು ಯುಡಿಎಫ್ ಕಾರ್ಯಕರ್ತರಿಗೆ ಕರೆ ನೀಡಿದರು.
I am deeply anguished by the massive landslides near Meppadi in Wayanad. My heartfelt condolences go out to the bereaved families who have lost their loved ones. I hope those still trapped are brought to safety soon.
— Rahul Gandhi (@RahulGandhi) July 30, 2024
I have spoken to the Kerala Chief Minister and the Wayanad…
ಇನ್ನು ರಾಜ್ಯ ಆರೋಗ್ಯ ಇಲಾಖೆ ಕಂಟ್ರೋಲ್ ರೂಂ ತೆರೆದಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ತುರ್ತು ಸಹಾಯದ ಅಗತ್ಯವಿರುವವರು ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ವಿಪತ್ತಿನ ಮಧ್ಯೆ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
🚨 #WayanadLandslide
— ராவணன் (@imissakii) July 30, 2024
Wayanad – Before and After landslide
Nature is the strongest force. 💔💔
As per reports over 80 bodies have been recovered till now. Many are still trapped 💔 #Wayanad #WayanadRains #Kerala #Keralarains #Keralalandslide pic.twitter.com/LEp3azZyiw
This image says it all about the Wayanad landslide. #Wayanad pic.twitter.com/YtwROr1LjN
— Tribal Army (@TribalArmy) July 30, 2024




