ಮತಪತ್ರ ವ್ಯವಸ್ಥೆಗೆ ಹಿಂತಿರುಗಬೇಕಾಗುತ್ತದೆ: ಸುಪ್ರೀಂ ಕೋರ್ಟ್

Date:

ವಿದ್ಯುನ್ಮಾನ ಮತ ಯಂತ್ರ ವ್ಯವಸ್ಥೆಯ ವಿವಿಪ್ಯಾಟ್ ಮೂಲಕ ಮತಚೀಟಿ ಕಲ್ಪಿಸುವ ಅರ್ಜಿ ಹಾಗೂ ಗುಪ್ತ ಮತಪತ್ರ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.

“60ರ ದಶಕದಲ್ಲಿ ಇದ್ದ ನಮಗೆ ಮತಪತ್ರ ವ್ಯವಸ್ಥೆಯಿಂದ ಏನು ಉಂಟಾಗಿತ್ತು ಎಂಬುದು ಗೊತ್ತಿದೆ. ನಿಮಗೂ ಗೊತ್ತಿರಬಹುದು ಆದರೆ ನಾವು ಅದನ್ನು ಮರೆತಿಲ್ಲ” ಎಂದು ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಅರ್ಜಿದಾರರ ಮನವಿಗೆ ತೀಕ್ಷವಾಗಿ ಪ್ರತಿಕ್ರಿಯೆ ನೀಡಿದರು.

“ನಾವು ಮತಪತ್ರ ವ್ಯವಸ್ಥೆಗೆ ಮರಳಬೇಕಾಗುತ್ತದೆ. ಇನ್ನೊಂದು ಆಯ್ಕೆ ಎಂದರೆ ಮತದಾರರ ಕೈಗೆ ವಿವಿಪ್ಯಾಟ್‌ ಮೂಲಕ ಮತಚೀಟಿಯನ್ನು ನೀಡಬೇಕಾಗುತ್ತದೆ. ಇಲ್ಲದಿದ್ದರೆ ಚೀಟಿಯು ಯಂತ್ರದೊಳಗೆ ಬೀಳುತ್ತದೆ ಅದನ್ನು ಮತದಾರರಿಗೆ ನೀಡಿ ಅವರು ಮತ್ತೆ ಮತಯಂತ್ರಕ್ಕೆ ಹಾಕಬೇಕಾಗುತ್ತದೆ” ಎಂದು ನ್ಯಾಯಮೂರ್ತಿಗಳು ಮುಂದಿನ ವ್ಯವಸ್ಥೆಯ ಗಂಭೀರತೆಯ ಬಗ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

ಅರ್ಜಿದಾರರೊಬ್ಬರು ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ 1ರಂದು ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿತ್ತು.

ವಿವಿಧ ರಾಜಕೀಯ ಪಕ್ಷಗಳು ಹಾಗೂ ಕಾರ್ಯಕರ್ತರು ಎತ್ತಿರುವ ಗಂಭೀರ ಕಾಳಜಿಯು ಭವಿಷ್ಯದ ಚುನಾವಣೆಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಹಾದಿಗೆ ಸುಗಮವಾಗಲಿದೆ. ಮತದಾರರು ಪರಿಶೀಲಿಸುವ ಮತ್ತು ಮತ ಎಣಿಸುವ ಹಾದಿಯಲ್ಲಿನ ಬದಲಾವಣೆಗಳಿಗೆ ಗಮನಾರ್ಹ ಫಲಿತಾಂಶ ದೊರಕಿಸುವುದು ಈ ಅರ್ಜಿಯ ಉದ್ದೇಶವಾಗಿದೆ.

ಸ್ವಯಂ ಸೇವಾ ಸಂಸ್ಥೆ ಎಡಿಆರ್, ನಾಗರಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್‌ವಾಲ್‌ ವಿವಿಪ್ಯಾಟ್ ಚೀಟಿಗಳು ಮತದಾರರ ಕೈಗೆ ತಲುಪಿಸುವ ವ್ಯವಸ್ಥೆ ಮತಯಂತ್ರದಲ್ಲಿ ದೊರಕಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಂದಿನ ವಿಚಾರಣೆಯನ್ನು ಗುರುವಾರ(ಏ.18)ಕ್ಕೆ ಮುಂದೂಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...