ನಿಮ್ಮ ತಂಗಿಗೆ ಬೆಂಕಿ ಹಚ್ಚಿದ್ದೇವೆ ಎಂದು ಮಹಿಳೆಯ ತವರು ಮನೆಯವರಿಗೆ ಕರೆ ಮಾಡಿದರು

Date:

ಮಹಿಳೆಗೆ ಬೆಂಕಿ ಹಚ್ಚಿದ ನಂತರ ಆಕೆಯ ತವರು ಮನೆಗೆ ಕರೆ ಮಾಡಿದ ಗಂಡನ ಮನೆಯವರು ನಿಮ್ಮ ಸಹೋದರಿಗೆ ಬೆಂಕಿ ಹಚ್ಚಿದ್ದೇವೆ ಎಂದು ತಿಳಿಸಿದ್ದಾರೆ. ಘಟನೆಯು ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಧೋಧರ್ ಗ್ರಾಮದಲ್ಲಿ ನಡೆದಿದೆ.

ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ನಂತರ ನಿರ್ಮಲಾ ಎಂಬ ಮಹಿಳೆ ತೀವ್ರ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಕೌಟುಂಬಿಕ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆಯ ಪತಿಯ ಸಹೋದರ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಪತಿ ಪ್ರಕಾಶ್ ಆರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ. ಪ್ರಕಾಶ್ ಅವರ ಹಿರಿಯ ಸಹೋದರ ಸುರೇಶ್ ತನ್ನ ಅತ್ತಿಗೆ ನಿರ್ಮಲಾ ಅವರಿಂದಾಗಿಯೇ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸದಾ ಕೆಂಡಕಾರುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತಿಯ ಮರಣದ ನಂತರ ನಿರ್ಮಲಾ ತನ್ನ ಇಬ್ಬರು ಮಕ್ಕಳೊಂದಿಗೆ ಅತ್ತೆಯ ಮನೆಯಲ್ಲಿ ವಾಸವಾಗಿದ್ದರು. ಆದಾಗ್ಯೂ, ಆಕೆಯ ಭಾವ ತನ್ನ ಸಹೋದರನ ಸಾವಿಗೆ ಅವಳೇ ಕಾರಣ ಎಂದು ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಶನಿವಾರ ಮಹಿಳೆ ಮೇಲೆ ಸುರೇಶ್ ಹಲ್ಲೆ ನಡೆಸಿ ಮನೆಯಿಂದ ಹೊರಗೆಳೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಆಕೆಯ ಸಹೋದರನಿಗೆ ಕರೆ ಮಾಡಿ ನಿಮ್ಮ ತಂಗಿಗೆ ಬೆಂಕಿ ಹಚ್ಚಿದ್ದೇವೆ ಎಂದು ಸುರೇಶ್‌ ತಿಳಿಸಿದ್ದ. ‘ಆತನ ಸಹೋದರನ ಸಾವಿಗೆ ನನ್ನ ತಂಗಿಯೇ ಕಾರಣ ಎಂದು ಅವರು ಆರೋಪಿಸುತ್ತಿದ್ದರು. ಕೊಲೆ ಬೆದರಿಕೆ ಹಾಕುತ್ತಿದ್ದರು’ ಎಂದು ನಿರ್ಮಲಾ ಸಹೋದರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಅವರು ನಮ್ಮ ತಂಗಿಯನ್ನು ಕೊಂದಿದ್ದಾರೆ ಎಂದು ನನಗೆ ಕರೆ ಮಾಡಿದ ದಿನವೇ ನಾನು ಆಕೆಯನ್ನು ಕರೆದುಕೊಂಡು ಬರಲು ಹೋಗಿದ್ದೆ” ಎಂದು ಸಹೋದರ ತಿಳಿಸಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...