ಮುಂಬೈ ಬಿಎಂಸಿಯಿಂದ 90 ವರ್ಷದ ಜೈನ ದೇಗುಲ ಧ್ವಂಸ: ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನಾ ರ್‍ಯಾಲಿ

Date:

ಮುಂಬೈನ ವಿಲೇ ಪಾರ್ಲೆಯಲ್ಲಿರುವ 90 ವರ್ಷ ಹಳೆಯ ಪಾರ್ಶ್ವನಾಥ ದಿಗಂಬರ ಜೈನ ದೇವಾಲಯವನ್ನು ಬಿಎಂಸಿ (ಬೃಹನ್‌ ಮುಂಬೈ ಕಾರ್ಪೊರೇಷನ್) ಬುಧವಾರ ಕೆಡವಿದ್ದರ ವಿರುದ್ಧ ಜೈನ ಸಮುದಾಯದ ಸಾವಿರಾರು ಮಂದಿ ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ದೇವಾಲಯದ ಧ್ವಂಸವನ್ನು ವಿರೋಧಿಸಿ ಶನಿವಾರ ಬೆಳಗ್ಗೆ ಸಮುದಾಯದ ಮುಖಂಡರು ಅಹಿಂಸಾತ್ಮಕ ಬೃಹತ್ ರ್‍ಯಾಲಿಯನ್ನು ನಡೆಸಿದರು. ಸಚಿವ ಮಂಗಲ್‌ಪ್ರಭಾತ್ ಲೋಧಾ, ಶಾಸಕ ಪರಾಗ್ ಅಲ್ವಾನಿ, ಸಂಸದ ವರ್ಷ ಗಾಯಗ್ವಾಡ್ ಮತ್ತು ಜೈನ ಸಮುದಾಯದ ಸಂತರು ಈ ರ್‍ಯಾಲಿಯಲ್ಲಿ ಭಾಗವಹಿಸಿದ್ದರು.

ಎಲ್ಲ ಪಕ್ಷಗಳ ನಾಯಕರು ರ್‍ಯಾಲಿಯಲ್ಲಿ ಪಾಲ್ಗೊಂಡು ಬಿಎಂಸಿಯ ಈ ಕ್ರಮವನ್ನು, ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಖಂಡಿಸಿದರು. ಈ ನಾಯಕರೆಲ್ಲರೂ ಸಭೆ ನಡೆಸಿ ಭವಿಷ್ಯದ ಕಾನೂನು ಹೋರಾಟ ಸೇರಿದಂತೆ ಮುಂತಾದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು. ಬಿಎಂಸಿಯ ಈ ಕ್ರಮದಿಂದ ಜೈನ ಸಮುದಾಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಮುಂಬೈನ ಕಾಂಬ್ಲಿವಾಡಿಯ ನೇಮಿನಾಥ್ ಸಹಕಾರಿ ವಸತಿ ಸೊಸೈಟಿಯ ಒಳಗಿರುವ ದೇವಾಲಯದ (ಚೈತಾಲಯ) ಟ್ರಸ್ಟಿ ಅನಿಲ್ ಶಾ ಮಾತನಾಡಿ, ಏಪ್ರಿಲ್ 16 ರಂದು 90 ವರ್ಷ ಹಳೆಯ ಪಾರ್ಶ್ವನಾಥ ದಿಗಂಬರ ಜೈನ ದೇವಾಲಯವನ್ನು ಯಾವುದೇ ಕಾರಣವಿಲ್ಲದೆ ಕೆಡವಲಾಗಿದೆ. ಈ ದೇಗುಲವನ್ನು 1960ರ ದಶಕದ ಹಿಂದೆಯೇ ನಿರ್ಮಿಸಲಾಗಿದ್ದು, ಬಿಎಂಸಿಯ ಅನುಮತಿಯೊಂದಿಗೆ ನವೀಕರಿಸಲಾಗಿತ್ತು. ದೇಗುಲವನ್ನು ನವೀಕರಿಸಲಾಗಿರುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿತ್ತು. ಆದರೆ ಬಿಎಂಸಿ ಯಾವುದೇ ಕಾರಣ ನೀಡದೆ ದೇಗುಲವನ್ನು ನಾಶಗೊಳಿಸಿದೆ. ಇದರ ವ್ಯಾಜ್ಯ ಕೋರ್ಟ್‌ನಲ್ಲಿರುವಾಗಲೇ ಧ್ವಂಸಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ದೇವಾಲಯದ ಧ್ವಂಸಕ್ಕೆ ಸಂಬಂಧಿಸಿದಂತೆ ಬಿಎಂಸಿ ನಿರ್ವಹಣಾ ಸಮಿತಿಗೆ ನೋಟಿಸ್ ನೀಡಿತ್ತು. ಇದರ ವಿರುದ್ಧ ಜೈನ ಸಮುದಾಯ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ಗುರುವಾರ ನಡೆಯಬೇಕಿತ್ತು, ಆದರೆ ಅದಕ್ಕೂ ಮೊದಲು ಬುಧವಾರ ಬಿಎಂಸಿ ತಂಡ ದೇವಾಲಯವನ್ನು ಕೆಡವಿದೆ.

<blockquote class=”twitter-tweet” data-media-max-width=”560″><p lang=”en” dir=”ltr”>THIS IS MASSIVE 🚨⚡<br><br>Huge protest by Jain community against BJP Govt in Mumbai over the demolition of a sacred temple<br><br>Where are Godi Media &amp; IT cell trolls who cheer bulldozer mafia? <a href=”https://t.co/1eKJxbIvhP”>pic.twitter.com/1eKJxbIvhP</a></p>&mdash; Ankit Mayank (@mr_mayank) <a href=”https://twitter.com/mr_mayank/status/1913534743989420455?ref_src=twsrc%5Etfw”>April 19, 2025</a></blockquote> <script async src=”https://platform.twitter.com/widgets.js” charset=”utf-8″></script>

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...