ಗರಿಷ್ಠ 40 ಡಿಗ್ರಿ ತಾಪಮಾನ; ಪಶ್ಚಿಮ ಬಂಗಾಳ ಶಾಲಾ ಕಾಲೇಜುಗಳಿಗೆ ವಾರದ ರಜೆ ಘೋಷಣೆ

Date:

  • ಪಶ್ಚಿಮ ಬಂಗಾಳ ರಾಜ್ಯದಲ್ಲಿ ಗರಿಷ್ಠ 40 ಡಿಗ್ರಿ ತಾಪಮಾ
  • ಸಂಜೆಯವರೆಗೂ ಹೊರಗೆ ಬರದಂತೆ ಆರೆಂಜ್‌ ಅಲರ್ಟ್‌

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ.

ರಾಜ್ಯದಲ್ಲಿ ಏಪ್ರಿಲ್‌ 17ರಿಂದ ವಾರದ ಮಟ್ಟಿಗೆ ಎಲ್ಲ ಶಾಲಾ ಕಾಲೇಜುಗಳಿಗೆ ಸರ್ಕಾರ ಭಾನುವಾರ (ಏಪ್ರಿಲ್ 16) ರಜೆ ಘೋಷಿಸಿದೆ.

ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿ ಶಾಖದ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮುಂದಿನ ಆದೇಶದವರೆಗೂ ರಜೆ ಮುಂದುವರಿಯಲಿದೆ ಎಂದು ಬಂಗಾಳ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಖದ ಅಲೆಗಳ ಪರಿಣಾಮ ಏಪ್ರಿಲ್‌ 19ರವರೆಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮುಂದುವರಿಯಲಿದೆ.

ಕೋಲ್ಕತ್ತದಲ್ಲಿ ಭಾನುವಾರ (ಏಪ್ರಿಲ್‌ 16) ಕನಿಷ್ಠ 29.6 ಡಿಗ್ರಿ ಸೆಲ್ಸಿಯಸ್‌ ಮತ್ತು ಗರಿಷ್ಠ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

“ಈಗಿರುವ ಶಾಖದ ಅಲೆಗಳ ಪರಿಸ್ಥಿತಿ ಪರಿಗಣಿಸಿ ಏಪ್ರಿಲ್ 17ರಿಂದ ಅನ್ವಯವಾಗುವಂತೆ ವಾರದ ಮಟ್ಟಿಗೆ ರಾಜ್ಯದಲ್ಲಿರುವ ಎಲ್ಲ ಸ್ವಾಯತ್ತ, ರಾಜ್ಯ, ಕೇಂದ್ರ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಸರ್ಕಾರ ನಿರ್ಧರಿಸಲಾಗಿದೆ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ಡಾರ್ಜಲಿಂಗ್‌ ಮತ್ತು ಕಾಲೀಮ್‌ಜಂಗ್‌ ಜಿಲ್ಲೆಗಳ ಬೆಟ್ಟ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳಿಗೆ ಇದು ಅನ್ವಯವಾಗುವುದಿಲ್ಲ” ಎಂದು ಬಂಗಾಳ ಸರ್ಕಾರ ಹೊರಡಿಸಿದ ಅಧಿಸೂಚನೆ ಹೇಳಿದೆ.

“ಶಾಲೆಗಳು ಪುನರಾರಂಭ ಆಗುವವರೆಗೂ ಬೋಧಕ ಮತ್ತು ಬೋಧಕೇತರ ವರ್ಗದವರಿಗೂ ರಜೆ ಇರಲಿದೆ” ಎಂದು ಆದೇಶ ಹೇಳಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ ಶಿಕ್ಷಣ ಸಂಸ್ಥೆಗಳ ಮುಚ್ಚುವ ಬಗ್ಗೆ ನಿರ್ಧರಿಸಿದ್ದರು.

“ಪ್ರಸ್ತುತ ಸ್ಥಿತಿಯಲ್ಲಿ ಜನರು ಶಾಖದ ಅಲೆಗಳ ಬಗ್ಗೆ ಹೆಚ್ಚು ನಿಗಾವಹಿಸಬೇಕಿದೆ. ಬಿಸಿಲಿನ ತಾಪ ಹೆಚ್ಚಿರುವ ಮಧ್ಯಾಹ್ನದಿಂದ ಸಂಜೆ 4 ಗಂಟೆಗಳವರೆಗೂ ಜನರು ಮನೆಯಿಂದ ಹೊರಗೆ ಬರುವುದನ್ನು ತಪ್ಪಿಸಬೇಕು” ಎಂದು ಅವರು ಹೇಳಿದರು.

ರಾಜ್ಯದಲ್ಲಿ ಆರೆಂಜ್‌ ಅಲರ್ಟ್

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ (ಏಪ್ರಿಲ್ 17) ಆರೆಂಜ್ ಅಲರ್ಟ್ ಘೋಷಿಸಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಐಎಂಡಿ ಶಾಖದ ಅಲೆಗಳ ಎಚ್ಚರಿಕೆ ನೀಡಿದೆ.

“ದೇಶದ ವಾಯುವ್ಯ ಭಾಗದ ರಾಜ್ಯಗಳಲ್ಲಿ ತಾಪಮಾನ ಹೆಚ್ಚಳದ ಹಿನ್ನೆಲೆ ಇನ್ನು ಎರಡು ದಿನ ಶಾಖದ ಅಲೆಗಳ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ” ಎಂದು ಐಎಂಡಿ ಅಧಿಕಾರಿ ನರೇಶ್ ಕುಮಾರ್ ಹೇಳಿದರು.

“ಭಾರತದ ವಾಯುವ್ಯ ಮತ್ತು ಪೂರ್ವ ಭಾಗ ಹಾಗೂ ಮಧ್ಯಪ್ರದೇಶದಲ್ಲಿ ಗರಿಷ್ಠ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ” ಎಂದು ಐಎಂಡಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಸಾವು

“ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ಭಾರತದಲ್ಲಿ ಇನ್ನು ನಾಲ್ಕು ದಿನ ಶಾಖದ ಅಲೆಗಳ ಸ್ಥಿತಿ ಇರಲಿದೆ. ಅದಕ್ಕಾಗಿ ರಾಜ್ಯದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ” ಎಂದು ಐಎಂಡಿ ತಿಳಿಸಿದೆ.

ಬಿಹಾರದ ಬಹುತೇಕ ಜಿಲ್ಲೆಗಳು ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಲಿವೆ. ಏಪ್ರಿಲ್ 19 ಮತ್ತು 20 ತಾಪಮಾನ ಗರಿಷ್ಠ 42-44 ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...