ಭಾನುವಾರವೂ ಸೇರಿ ವಾರಕ್ಕೆ 90 ಗಂಟೆ ಕೆಲಸ ಮಾಡಿ: ಎಲ್ ಆ್ಯಂಡ್ ಟಿ ಮುಖ್ಯಸ್ಥ

Date:

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿದ ವಾರಕ್ಕೆ 70 ಗಂಟೆಗಳ ಕೆಲಸ ಅವಧಿಯ ಚರ್ಚೆಯ ಕಾವು ಆರುವ ಮುನ್ನವೇ, ವಾರಕ್ಕೆ 90 ಗಂಟೆಗಳ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಲಾರ್ಸೆನ್ ಆ್ಯಂಡ್ ಟೂಬ್ರೊ ಮುಖ್ಯಸ್ಥ ಎಸ್ ಎನ್ ಸುಬ್ರಮಣ್ಯ ಮತ್ತೊಂದು ಸುತ್ತಿನ ಚರ್ಚೆಗೆ ನಾಂದಿ ಹಾಡಿದ್ದಾರೆ.

ಭಾನುವಾರ ಸಹ ಕೆಲಸ ಮಾಡಬೇಕು ಎಂದು ತಮ್ಮ ಉದ್ಯೋಗಿಗಳಿಗೆ ಸಲಹೆ ನೀಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ, “ಎಷ್ಟು ಕಾಲ ನೀವು ನಿಮ್ಮ ಪತ್ನಿಯ ಮುಖವನ್ನೇ ದಿಟ್ಟಿಸುತ್ತಾ ಕೂರುತ್ತೀರಿ?” ಎಂದು ಸುಬ್ರಮಣ್ಯ ತಮ್ಮ ಉದ್ಯೋಗಿಗಳನ್ನು ಪ್ರಶ್ನಿಸುತ್ತಿರುವುದು ಸೆರೆಯಾಗಿದೆ. ನೀವು ಮನೆಯಲ್ಲಿ ಕಡಿಮೆ ಸಮಯ ಕಳೆದು, ಕಚೇರಿಯಲ್ಲಿ ಹೆಚ್ಚು ಸಮಯ ವ್ಯಯಿಸಿ ಎಂದು ಅವರು ಕರೆ ನೀಡುತ್ತಿರುವುದೂ ಆ ವಿಡಿಯೋದಲ್ಲಿ ಸೆರೆಯಾಗಿದೆ.

ಇದಕ್ಕೂ ಮುನ್ನ, ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಸಲಹೆ ನೀಡಿ, ಉದ್ಯೋಗ ಮತ್ತು ಜೀವನ ಸಮತೋಲನದ ಕುರಿತ ಚರ್ಚೆಗೆ ನಾಂದಿ ಹಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ

ಇದರ ಬೆನ್ನಿಗೇ ಲಾರ್ಸೆನ್ ಆ್ಯಂಡ್ ಟೂಬ್ರೊ ಮುಖ್ಯಸ್ಥ ಸುಬ್ರಮಣ್ಯ ಅವರು, “ನಾನು ನಿಮಗೆ ಭಾನುವಾರ ಕೆಲಸ ಮಾಡಿಸಲಾಗದ್ದಕ್ಕೆ ವಿಷಾದಿಸುತ್ತೇನೆ. ನೀವು ನಿಮ್ಮ ಕೆಲಸಗಳನ್ನು ಭಾನುವಾರ ಮಾಡುವುದು ಸಾಧ್ಯವಾದರೆ, ನಾನು ಬಹಳ ಸಂತೋಷ ಪಡುತ್ತೇನೆ. ಯಾಕೆಂದರೆ, ನಾನು ಭಾನುವಾರ ಸಹ ಕೆಲಸ ಮಾಡುತ್ತೇನೆ” ಎಂದು ಅವರು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈ ಹೇಳಿಕೆ ನಂತರ ಲಾರ್ಸೆನ್ ಆ್ಯಂಡ್ ಟೂಬ್ರೊ ಸಮಜಾಯಿಷಿ ನೀಡಿದೆ. “ದೇಶಕ್ಕಾಗಿ ಅಸಾಧಾರಣ ಸಾಧನೆ ಮಾಡಲು ಅಸಾಧಾರಣ ಪ್ರಯತ್ನಗಳ ಅಗತ್ಯವಿದೆ ಎಂಬ ಹಿನ್ನೆಲೆಯಲ್ಲಿ ಅವರು ಇಂತಹ ಹೇಳಿಕೆ ನೀಡಿದ್ದಾರೆ” ಎಂದು ತಿಳಿಸಿದೆ.

“ಈ ದಶಕ ಭಾರತದ ದಶಕ ಎಂದು ನಾವು ನಂಬಿದ್ದೇವೆ. ಈ ಸಮಯ ಒಗ್ಗಟ್ಟಾದ ಸಮರ್ಪಣಾ ಮನೋಭಾವವನ್ನು ಬಯಸುತ್ತಿದ್ದು, ಪ್ರಗತಿಯತ್ತ ಪ್ರಯತ್ನವನ್ನು ಬೇಡುತ್ತಿದೆನಮ್ಮ ದೇಶದ ಪ್ರಗತಿಶೀಲ ದೇಶವಾಗಲು ನಮ್ಮಲ್ಲಿ ದೃಷ್ಟಿಕೋನಗಳ ವಿನಿಮಯ ಅಗತ್ಯ ಎಂಬುದನ್ನು ಮನವರಿಕೆ ಮಾಡಿಸುತ್ತಿದೆ” ಎಂದು ಲಾರ್ಸೆನ್ ಆ್ಯಂಡ್ ಟೂಬ್ರೊ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...