ಫೋರಂ ಶಾಪಿಂಗ್‌ ಅವಕಾಶ ನೀಡುವುದಿಲ್ಲ ಎಂದ ಸಿಜೆಐ; ಏನಿದು ಅನುಚಿತ ಅಭ್ಯಾಸ?

Date:

ಸುಪ್ರೀಂ ಕೋರ್ಟ್ ಅನೇಕ ಬಾರಿ ಟೀಕಿಸಿದ್ದರೂ, ಇಂದಿಗೂ ಬಹುತೇಕರು ನ್ಯಾಯಾಲಯಗಳಲ್ಲಿ ಫೋರಂ ಶಾಪಿಂಗ್‌ ಮಾಡಲು ಪ್ರಯತ್ನಿಸುತ್ತಾರೆ. ಏನಿದು ಫೋರಂ ಶಾಪಿಂಗ್?

ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್ ಅವರು ಫೋರಂ ಶಾಪಿಂಗ್‌ ಬಗ್ಗೆ ಉಲ್ಲೇಖಿಸಿ, ಅಂತಹ ಅಭ್ಯಾಸವನ್ನು ಟೀಕಿಸಿದ್ದಾರೆ. “ನಾನು ಫೋರಂ ಶಾಪಿಂಗ್‌ಗೆ ಅವಕಾಶ ಕೊಡುವುದಿಲ್ಲ” ಎಂದು ಅವರು ಮೇ 19ರಂದು ತಮ್ಮ ಮುಂದೆ ವಿಚಾರಣೆಗೆ ಬಂದ ಅರ್ಜಿದಾರರಿಗೆ ಹೇಳಿದ್ದರು. ಏನಿದು ಫೋರಂ ಶಾಪಿಂಗ್?

ಅರ್ಜಿದಾರನು ಸಿಜೆಐ ಮುಂದೆ ವಿಚಾರಣೆಗಾಗಿ ಪ್ರಸ್ತಾಪಿಸಿದ ಪ್ರಕರಣವನ್ನು ಒಂದು ದಿನದ ಹಿಂದೆ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಮುಂದೆಯೂ ಉಲ್ಲೇಖಿಸಿದ್ದರು. ಇದೇ ವಿಚಾರವಾಗಿ ಸಿಜೆಐ ಫೋರಂ ಶಾಪಿಂಗ್ ನನಗಿಷ್ಟವಿಲ್ಲ ಎಂದು ಖಡಾಖಂಡಿತವಾಗಿ ಉತ್ತರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯಗಳಲ್ಲಿ ಫೋರಂ ಶಾಪಿಂಗ್ ಅಭ್ಯಾಸ

ಅರ್ಜಿದಾರರು ಅಥವಾ ವಕೀಲರು ತಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆಯಲ್ಲಿ ಉದ್ದೇಶಪೂರ್ವಕವಾಗಿ ತಮ್ಮ ಪ್ರಕರಣವನ್ನು ನಿರ್ದಿಷ್ಟ ನ್ಯಾಯಾಧೀಶರು ಅಥವಾ ನ್ಯಾಯಪೀಠದ ಮುಂದೆ ವಿಚಾರಣೆಗೆ ತರುವುದನ್ನೇ ನ್ಯಾಯಾಲಯದ ಭಾಷೆಯಲ್ಲಿ ‘ಫೋರಂ ಶಾಪಿಂಗ್’ ಎಂದು ಹೇಳಲಾಗುತ್ತದೆ.

ತಮ್ಮ ಅರ್ಜಿ ಹಾಕುವ ಕಾರ್ಯಯೋಜನೆಯಲ್ಲಿ ವಕೀಲರು ಯಾವ ವೇದಿಕೆಯಲ್ಲಿ ಪ್ರಕರಣ ಇಡಬೇಕು ಎಂದು ಯೋಜಿಸುತ್ತಾರೆ. ಉದಾಹರಣೆಗೆ, ಕೆಲವರು ನೇರವಾಗಿ ಹೈಕೋರ್ಟ್‌ ಬದಲಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ತಮ್ಮ ಪ್ರಕರಣ ಇಟ್ಟು ಪ್ರಚಾರ ಪಡೆಯುತ್ತಾರೆ. ಆದರೆ, ಹಿನ್ನೆಲೆಯಲ್ಲಿ ನಿರ್ದಿಷ್ಟ ನ್ಯಾಯಾಧೀಶರ ಮುಂದೆ ತಮ್ಮ ಪ್ರಕರಣ ಹೋಗದಂತೆ ಅವರು ತಡೆಯುತ್ತಾರೆ. ಇಂತಹ ಸಂದರ್ಭದಲ್ಲಿ ಪ್ರತಿವಾದಿಗೆ ತಾರತಮ್ಯವಾಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ನ್ಯಾಯಾಲಯಗಳಲ್ಲಿ ಪ್ರಕರಣಗಳ ಹೊರೆ ಅಧಿಕವಾಗುವುದು, ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಿದಂತೆಯೂ ಆಗುತ್ತದೆ.

ಇದಕ್ಕೆ ಮೊದಲು ಅಮೆರಿಕ ಮತ್ತು  ಬ್ರಿಟನ್‌ನಂತಹ ನ್ಯಾಯಾಲಯಗಳೂ ಫೋರಂ ಶಾಪಿಂಗ್ ಅಭ್ಯಾಸದ ಬಗ್ಗೆ ಟೀಕಿಸಿವೆ. ಆದರೆ, ಬಹುತೇಕ ದೇಶಗಳ ನ್ಯಾಯಾಲಯಗಳು ಪ್ರಕರಣಗಳು ಬಂದಾಗ ‘ನ್ಯಾಯಾಲಯದ ವ್ಯಾಪ್ತಿ’ಯನ್ನು ಮುಂದಿಟ್ಟು ಸ್ವೀಕರಿಸದೆ ಇರುವ ಮೂಲಕ ಫೋರಂ ಶಾಪಿಂಗ್ ತಡೆಯುತ್ತವೆ. ಉನ್ನತ ನ್ಯಾಯಾಲಯಗಳು ಪ್ರಕರಣವನ್ನು ಸೂಕ್ತ ನ್ಯಾಯಪೀಠಕ್ಕೆ ತಳ್ಳುವ ಮೂಲಕ ಫೋರಂ ಶಾಪಿಂಗ್ ಪ್ರಯತ್ನಕ್ಕೆ ತಡೆಯೊಡ್ಡುತ್ತಾರೆ.

ಫೋರಂ ಶಾಪಿಂಗ್ ಬಗ್ಗೆ ಸುಪ್ರೀಂ ಕೋರ್ಟ್ ಅಭಿಪ್ರಾಯವೇನು?

ಕಳೆದ ವರ್ಷ ಮಾರ್ಚ್ 22ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರು ‘ವಿಜಯ ಕುಮಾರ್ ಘೈ ವರ್ಸಸ್ ಪಶ್ಚಿಮ ಬಂಗಾಳ ಸರ್ಕಾರ’ ಪ್ರಕರಣದಲ್ಲಿ ಫೋರಂ ಶಾಪಿಂಗ್ ಅನ್ನು, “ಕಾನೂನಿನಲ್ಲಿ ಯಾವುದೇ ಅನುಮತಿ ಮತ್ತು ಪರಮಾಧಿಕಾರಿ ಹೊಂದಿರದ ನ್ಯಾಯಾಲಯಗಳಿಗೆ ಅಪಖ್ಯಾತಿ ತರುವ ಅಭ್ಯಾಸ” ಎಂದು ಜರೆದಿದೆ.

ಈ ಸುದ್ದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ಕೇಜ್ರೀವಾಲ್ ಸರ್ಕಾರದ ವಿರುದ್ಧ ಮೋದಿ ಸೇಡಿನ ಕ್ರಮ

ಅರ್ಜಿದಾರರೊಬ್ಬರು ದೆಹಲಿಯಲ್ಲಿ ಎರಡು ಮತ್ತು ಕೋಲ್ಕತ್ತಾದಲ್ಲಿ ಒಂದು ಸೇರಿ ಒಟ್ಟು ಮೂರು ಅರ್ಜಿಗಳನ್ನು ಹಾಕಿದ್ದರು. ಇಂತಹ ಅಭ್ಯಾಸ ಪ್ರತಿವಾದಿಗಳನ್ನು ಬೆದರಿಸಿ ಹಣ ಖರ್ಚು ಮಾಡಿಸುವ ಪ್ರಯತ್ನ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಮಾರ್ಚ್ 28ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನಲ್ಲಿ ‘ಖೇರ್ ಉನ್ ನಿಸಾ ಮತ್ತು ಇತರರು ವರ್ಸಸ್ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಮತ್ತು ಇತರರು’ ಪ್ರಕರಣದಲ್ಲೂ ನ್ಯಾಯಾಲಯ ಫೋರಂ ಶಾಪಿಂಗ್ ಉಲ್ಲೇಖಿಸಿ ಖಂಡಿಸಿತ್ತು. ನ್ಯಾಯಾಲಯದ ವಿವಿಧ ಶಾಖೆಗಳಲ್ಲಿ ವಿಭಿನ್ನ ಅರ್ಜಿಗಳನ್ನು ಸಲ್ಲಿಸಿರುವುದನ್ನು ಟೀಕಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...