ಏನಿದೆ ಪುರಾವೆ?: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕಠಿಣ ಪ್ರಶ್ನೆ

Date:

ಅದಾನಿ ಸಮೂಹವನ್ನು ಗುರಿಯಾಗಿಸಿಕೊಂಡು ಜಾರ್ಜ್ ಸೊರೊಸ್ ಬೆಂಬಲಿತ ಸಮೂಹ ಯೋಜನೆ ವರದಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಅರ್ಜಿದಾರರ ವಿರುದ್ಧ ಕಠಿಣ ಪ್ರಶ್ನೆಗಳನ್ನು ಕೇಳಿದೆ.

“ನಾವು ವಿದೇಶಿ ವರದಿಗಳನ್ನು ಏಕೆ ಸತ್ಯವೆಂದು ತೆಗೆದುಕೊಳ್ಳಬೇಕು? ನಾವು ವರದಿಯನ್ನು ತಿರಸ್ಕರಿಸುತ್ತಿಲ್ಲ, ಆದರೆ ನಮಗೆ ಪುರಾವೆ ಬೇಕು. ಹಾಗಾದರೆ ಅದಾನಿ ಸಮೂಹದ ವಿರುದ್ಧ ನಿಮ್ಮ ಬಳಿ ಏನು ಪುರಾವೆ ಇದೆ?” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಕಠಿಣ ಪ್ರಶ್ನೆಗಳನ್ನು ಕೇಳಿದರು.

ಜಾರ್ಜ್ ಸೊರೊಸ್ ಹಾಗೂ ರಾಕೆಟ್ ಫೆಲ್ಲರ್ ಬ್ರದರ್ಸ್ ಫಂಡ್ ಅನುದಾನಿತ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ(ಒಸಿಸಿಆರ್ ಪಿ)ಯು ಇಬ್ಬರು ವಿದೇಶಿ ಹೂಡಿಕೆದಾರರ ಮೂಲಕ ಅದಾನಿ ಸಮೂಹ ಆಂತರಿಕ ವಹಿವಾಟು ಮಾಡುತ್ತಿದೆ ಎಂದು ಆರೋಪಿಸಿದೆ. ಈ ಆರೋಪವನ್ನು ಅದಾನಿ ಸಮೂಹ ಯಾವುದೇ ಆಧಾರವಿಲ್ಲ ಎಂದು ಅಲ್ಲಗಳೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೆ ಮಾರಾಟ ಮಾಡಿದ ದಂಪತಿ

“ನಾವು ಅಂತಹ ವರದಿಗಳ ಮೇಲೆ ಕ್ರಮ ಕೈಗೊಂಡರೆ ನಮ್ಮ ಏಜೆನ್ಸಿಗಳು ಏನು ಮಾಡುತ್ತವೆ? ವಿದೇಶಿ ವರದಿಗಳಿಂದ ಭಾರತೀಯ ನೀತಿಗಳ ಮೇಲೆ ಪ್ರಭಾವ ಬೀರುವ ಹೊಸ ಪ್ರವೃತ್ತಿ ಇದಾಗಿದೆ” ಎಂದು ಭಾರತೀಯ ಷೇರುಪೇಟೆಯ ನಿಯಂತ್ರಣ ಪ್ರಾಧಿಕಾರ (ಸೆಬಿ) ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಅದಾನಿ ಹಗರಣವು ಭಾರತದ ಒಕ್ಕೂಟ ಸರ್ಕಾರದಲ್ಲಿ ಮೋದಿ ಹಿಡಿತವನ್ನು ದುರ್ಬಲಗೊಳಿಸಲಿದೆ ಮತ್ತು ಬಹು ಅಪೇಕ್ಷಿತ ಸಾಂಸ್ಥಿಕ ಸುಧಾರಣೆಗೆ ಕಾರಣವಾಗಲಿದೆ. ಅದಾನಿಯ ಅವರ ವ್ಯವಹಾರದ ತೊಂದರೆಗಳಿಂದ ಪ್ರಧಾನಿ ಮೋದಿ ದುರ್ಬಲರಾಗುತ್ತಾರೆ ಎಂದು ಅಮೆರಿಕಾದ ಕೋಟ್ಯಾಧಿಪತಿ 92 ವರ್ಷದ ಜಾರ್ಜ್ ಸೊರೊಸ್ ಈ ವರ್ಷದ ಫೆಬ್ರವರಿಯಲ್ಲಿ ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಭದ್ರತಾ ಸಮ್ಮೇಳನದಲ್ಲಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...