ನನ್ನ ಪತಿ ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಿದ್ದರು ಎಂದ ಸುಧಾ ಮೂರ್ತಿಗೆ ಹಾಸ್ಯದ ಮೂಲಕ ಶಾದಿ ಡಾಟ್ ಕಾಂ ಸಂಸ್ಥಾಪಕನ ಉತ್ತರ

Date:

ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆಯನ್ನು ಪತ್ನಿ ಸುಧಾ ಮೂರ್ತಿ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ ಸುಧಾ ಮೂರ್ತಿ, ನಾರಾಯಣ ಮೂರ್ತಿ ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

“ಅವರು ವಾರಕ್ಕೆ 80ರಿಂದ 90 ಗಂಟೆ ಕೆಲಸ ಮಾಡಿದ್ದಾರೆ. ಹಾಗಾಗಿ ಅದಕ್ಕಿಂತ ಕಮ್ಮಿ ಏನು ಅನ್ನೋದು ಅವರಿಗೆ ಗೊತ್ತಿಲ್ಲ. ಅವರು ನಿಜವಾದ ದುಡಿಮೆಯನ್ನೇ ನಂಬಿದ್ದಾರೆ, ಅದೇ ರೀತಿ ಬದುಕಿದ್ದಾರೆ. ಹೀಗಾಗಿ ತಮಗೆ ಅನಿಸಿದ್ದನ್ನು ಹೇಳಿದ್ದಾರೆ. ನಮ್ಮ ಪತಿ ತಮ್ಮ ಮಾತಿನಂತೆ ಬದುಕಿದ್ದರು. ಅಲ್ಲದೆ ತಮ್ಮ ಪತಿ ಪ್ಯಾಶನ್‌ ಹಾಗೂ ನಿಜವಾದ ಕಠಿಣ ಪರಿಶ್ರಮವನ್ನು ನಂಬುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

70 ಗಂಟೆ ದುಡಿಮೆಯ ದಂಪತಿಯ ಪ್ರತಿಕ್ರಿಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಪೈಕಿ ಕೆಲವರು ಸಮರ್ಥಿಸಿಕೊಂಡಿದ್ದರೆ ಬಹುತೇಕ ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ನಡುವೆ ಹಾಸ್ಯ ಚಟಾಕಿಯ ಮೂಲಕ ಉತ್ತರ ನೀಡಿರುವ ವೈವಾಹಿಕ ಅಂತರ್ಜಾಲ ಜಾಲತಾಣ ‘ಶಾದಿ ಡಾಟ್‌ ಕಾಂ’ ಸಂಸ್ಥಾಪಕ ಅನುಪಮ್‌ ಮಿತ್ತಲ್, “ಇಷ್ಟು ವರ್ಷಗಳ ನಂತರವೂ ವಾರಕ್ಕೆ 70 ಗಂಟೆ ದುಡಿಯುತ್ತಿದ್ದಾರೆಯೇ” ಎಂದು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲ ಭಯೋತ್ಪಾದಕರೂ ಮುಸ್ಲಿಮರಲ್ಲ ಎನ್ನುವ ಸತ್ಯವನ್ನು ನಂಬದವರು

ಅನುಪಮ್‌ ಮಿತ್ತಲ್ ಪೋಸ್ಟ್‌ಗೆ ನೆಟ್ಟಿಗರೊಬ್ಬರು ಕಮೆಂಟ್ ಮಾಡಿ, “ನೀವು ಉದ್ಯಮಿ, ಅದಕ್ಕಾಗಿಯೇ ಈ ರೀತಿ ಹೇಳುತ್ತಿದ್ದೀರಿ. ಈಗ ಹೇಳಿ, ನೀವು ಇನ್ಫೋಸಿಸ್ ಅಥವಾ ಇನ್ನಾವುದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರೆ, ಕೆಲಸ ಮಾಡಲು ಒಂದೇ ಕಾರಣವೆಂದರೆ ಹಣ. ಇದು ವಾಣಿಜ್ಯೋದ್ಯಮಿ ಮತ್ತು ಉದ್ಯೋಗಿ ನಡುವಿನ ವ್ಯತ್ಯಾಸ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅನುಪಮ್‌, ‘ನಾನು ಒಂದು ಕಾಲದಲ್ಲಿ ಉದ್ಯೋಗಿಯಾಗಿದ್ದೆ. ಆದರೆ ಈಗ ಮಾಡುತ್ತಿರುವಂತೆಯೇ ಆಗಲೂ ನನ್ನ ಉದ್ಯೋಗವನ್ನು ಪ್ರೀತಿಸುತ್ತಿದ್ದೆ’ ಎಂದಿದ್ದಾರೆ.

ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಟಿವಿ ಮೋಹನ್‌ದಾಸ್ ಪೈ ಅವರೊಂದಿಗೆ ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡಿದ್ದ ನಾರಾಯಣ ಮೂರ್ತಿ, ಯುವಕರಿಗೆ 70 ಗಂಟೆಗಳ ಕೆಲಸದ ವಾರಗಳನ್ನು ಸೂಚಿಸಿದ್ದರು. ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಿದೆ ಎಂದು ಹೇಳಿದ್ದರು. ಚೀನಾದಂತಹ ದೇಶಗಳೊಂದಿಗೆ ಸ್ಪರ್ಧಿಸಲು, ಭಾರತದ ಯುವಕರು ಹೆಚ್ಚುವರಿ ಗಂಟೆಗಳ ಕೆಲಸವನ್ನು ಮಾಡಬೇಕಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಜಪಾನ್ ಮತ್ತು ಜರ್ಮನಿ ಮಾಡಿದಂತೆ ಮಾಡಬೇಕಾಗುತ್ತದೆ ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...