ಏನು ಉಡುಪು ಧರಿಸಬೇಕೆನ್ನುವುದು ನಿಮ್ಮ ನಿರ್ಧಾರ: ಹಿಜಾಬ್ ಪರ ರಾಹುಲ್ ಮಾತು

Date:

ಹಿಜಾಬ್ ಒಳಗೊಂಡಂತೆ ಮಹಿಳೆಯರ ಆಯ್ಕೆಯ ಉಡುಪುಗಳನ್ನು ಗೌರವಿಸಬೇಕು ಹಾಗೂ ವ್ಯಕ್ತಿ ಧರಿಸುವ ಉಡುಪುನ ಬಗ್ಗೆ ಯಾರೂ ನಿರ್ದೆಶಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಅಲಿಘಡ ಮುಸ್ಲಿಂ ವಿವಿಯ ಮಹಿಳಾ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದರು.

ಸಂವಾದದ ಸಂದರ್ಭದಲ್ಲಿ ಇತ್ತಿಚಿಗೆ ಕರ್ನಾಟಕದಲ್ಲಿ ಉಂಟಾದ ಹಿಜಾಬ್‌ ವಿವಾದದ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿನಿ, ನೀವು ಒಂದು ವೇಳೆ ಪ್ರಧಾನಿಯಾಗಿದ್ದರೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆ ಏನು ಬೇಕೊ ಅದನ್ನು ಧರಿಸುವುದು ಅವರ ಆಯ್ಕೆ. ಅವರಿಗೆ ಅನುಮತಿಸಬೇಕು. ಇದು ನನ್ನ ಅಭಿಪ್ರಾಯ. ನೀವು ಏನು ಧರಿಸುತ್ತೀರೋ ಅದು ನಿಮ್ಮ ಜವಾಬ್ದಾರಿ. ನೀವು ಏನು ಧರಿಸುತ್ತೀರೋ ಅದು ನಿಮ್ಮ ನಿರ್ಧಾರ. ನೀವು ಏನು ಧರಿಸುತ್ತೀರೋ ಎಂಬುದನ್ನು ಬೇರೆಯವರು ನಿರ್ಧರಿಸುತ್ತಾರೆ ಎಂಬುದನ್ನು ನಾನು ಭಾವಿಸುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ಹಿಜಾಬ್‌ ಧರಿಸಿ ಶಾಲೆಗೆ ಹೋಗಲು ಕರ್ನಾಟಕ ಸರ್ಕಾರ ಅನುಮತಿಸಿತ್ತು. ರಾಜ್ಯ ಸರ್ಕಾರ ನೀಡಿದ ಅನುಮತಿಯು 2022ರಲ್ಲಿ ಉಂಟಾದ ಹಿಜಾಬ್‌ ವಿವಾದದ ಬಗ್ಗೆ ಮತ್ತೆ ಚರ್ಚೆಗೆ ಆಸ್ಪದ ನೀಡಿತ್ತು.

2022ರ ಜನವರಿಯಲ್ಲಿ ಕರ್ನಾಟಕದ ಉಡುಪಿಯ ಪಿಯುಸಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಕಾಲೇಜಿನ ಏಕರೂಪ ನೀತಿಯ ಉಲ್ಲಂಘನೆಯಂದು ಕಾಲೇಜಿಗೆ ಒಳಗೆ ಬರಲು ಅನುಮತಿಸಿರಲಿಲ್ಲ. ಈ ಘಟನೆಯು ಪರ ಹಾಗೂ ವಿರೋಧದ ಬೃಹತ್ ಪ್ರತಿಭಟನೆಗೆ ಪ್ರಚೋದಿಸಿತ್ತು.

ಅಂದಿನ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿತ್ತು. ರಾಜ್ಯ ಹೈಕೋರ್ಟ್ ನಿಷೇಧವನ್ನು ಎತ್ತಿ ಹಿಡಿದಿದ್ದರೆ, ಸುಪ್ರೀಂ ಕೋರ್ಟ್ ಎರಡು ರೀತಿಯ ಭಿನ್ನ ತೀರ್ಪು ನೀಡಿತ್ತು. ಒಬ್ಬರು ನ್ಯಾಯಾಧೀಶರು ಪರವಾಗಿ ತೀರ್ಪು ನೀಡಿದರೆ, ಮತ್ತೊಬ್ಬರು ವಿರೋಧ ವ್ಯಕ್ತಪಡಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...