ಅವಶೇಷಗಳು ಸುರಂಗದೊಳಗೆ ಬಿದ್ದಾಗ ಏನಾಯಿತು?: ಘಟನೆ ಬಿಚ್ಚಿಟ್ಟ ಸಿಲುಕಿಕೊಂಡಿದ್ದ ಕಾರ್ಮಿಕ

Date:

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾದಲ್ಲಿ ಸುರಂಗ ಕುಸಿದು ಆತಂಕ ಸೃಷ್ಟಿಯಾಗಿದ್ದು ಕೊನೆಗೂ ನಿವಾರಣೆಯಾಗಿದೆ. ಕಳೆದ 17 ದಿನಗಳಿಂದ ಸುರಂಗದ ಒಳಗೆ ಸಿಲುಕಿಕೊಂಡಿದ್ದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ನ.28ರ ರಾತ್ರಿ 8.30 ಸುಮಾರಿಗೆ ಹೊರಗೆ ಬಂದಿದ್ದಾರೆ.

ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಕ್ಲಿಷ್ಟಕರ ಮಾತ್ರವಲ್ಲದೆ ಸವಾಲಿನದ್ದಾಗಿತ್ತು. ಚೂರು ಎಡವಿದರೂ ಮತ್ತಷ್ಟು ಭೂಕುಸಿತ ಉಂಟಾಗಿ, ಕಾರ್ಮಿಕರ ಜೊತೆ ರಕ್ಷಣಾ ತಂಡಗಳೂ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿತ್ತು.

ಸುರಂಗದ ಒಳಗಿನ ಕತ್ತಲಿನಲ್ಲಿ ಹಾಗೂ ಸಣ್ಣ ಜಾಗದಲ್ಲಿ, ಆತಂಕದೊಂದಿಗೆ 17 ದಿನಗಳನ್ನು ಕಳೆದಿರುವುದಕ್ಕೆ ಕಾರ್ಮಿಕರ ಮಾನಸಿಕ ಧೈರ್ಯವನ್ನು ಮೆಚ್ಚಲೇಬೇಕು. ಸುರಂಗ ಕುಸಿದಾಗ ಒಳಗೆ ಏನೇನಾಯಿತು ಎಂಬುದರ ಬಗ್ಗೆ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರಲ್ಲಿ ಒಬ್ಬರಾದ ವಿಶ್ವಜೀತ್ ಕುಮಾರ್ ವರ್ಮಾ ಎಂಬ ಕಾರ್ಮಿಕರೊಬ್ಬರು ಘಟನೆಯ ಬಗ್ಗೆ ಮಾಧ್ಯಮವೊಂದಕ್ಕೆ ತಮಗಾದ ಅನುಭವಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಕುಸಿತ ಸಂಭವಿಸಿದ್ದರಿಂದ 41 ಕಾರ್ಮಿಕರು ನಿರ್ಮಾಣ ಹಂತದ ಸುರಂಗದಲ್ಲಿನ 4.5-ಕಿಲೋಮೀಟರ್ (2.8-ಮೈಲಿ) ಒಳಗೆ ಸಿಲುಕಿದ್ದೆವು. ಪ್ರವೇಶದ್ವಾರದಿಂದ ಸುಮಾರು 200 ಮೀಟರ್ (650 ಅಡಿ) ದೂರದಲ್ಲಿ ಭೂಕುಸಿತ ಉಂಟಾಗಿತ್ತು. ಅವಶೇಷಗಳು ಮೇಲಿಂದ ಸುರಂಗದೊಳಗೆ ಕುಸಿದಾಗ ನಾವೆಲ್ಲರೂ ಸಿಲುಕಿಕೊಂಡಿದ್ದೇವೆ ಎಂಬುದು ನಮಗೆ ತಿಳಿದಿತ್ತು” ಎಂದು ವಿಶ್ವಜೀತ್ ಕುಮಾರ್ ವರ್ಮಾ ಹೇಳಿದರು.

“ಸಿಕ್ಕಿಬಿದ್ದ ಮೊದಲ 10-15 ಗಂಟೆಗಳ ಕಾಲ ನಾವು ತುಂಬ ಕಷ್ಟವನ್ನು ಎದುರಿಸಿದೆವು. ಆದರೆ ನಂತರ, ಪೈಪ್‌ ಮೂಲಕ ಅಕ್ಕಿ, ಬೇಳೆ ಮತ್ತು ಒಣ ಹಣ್ಣುಗಳೊಂದಿಗೆ ಸುರಂಗದೊಳಗೆ ಆಹಾರವನ್ನು ಒದಗಿಸಲಾಯಿತು. ನಂತರ ಮೈಕ್ ಅನ್ನು ಅಳವಡಿಸಲಾಯಿತು. ಅನಂತರದಲ್ಲಿ ನಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡಲು ಸಾಧ್ಯವಾಯಿತು. ನಾನು ಈಗ ಸಂತೋಷವಾಗಿದ್ದೇನೆ, ಆಗ ದೀಪಾವಳಿ ಆಚರಿಸಲು ಸಾಧ್ಯವಾಗಲಿಲ್ಲ ಈಗ ದೀಪಾವಳಿಯನ್ನು ಆಚರಿಸುತ್ತೇವೆ” ಎಂದು ವಿಶ್ವಜೀತ್ ಕುಮಾರ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 17 ದಿನಗಳ ಕಾರ್ಯಾಚರಣೆ ಯಶಸ್ವಿ: ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ

ಎಲ್ಲ ಕಾರ್ಮಿಕರ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿದೆ. ಪೈಪ್ ಮೂಲಕ ಸೋಮವಾರ ಅವರಿಗೆ ಬ್ಯಾಟ್, ಚಂಡು, ಚೆಸ್ ಕಿಟ್‌ಗಳನ್ನು ಕಳುಹಿಸಲಾಗಿತ್ತು. ಒಳಗೆ ಅವರು ಕ್ರಿಕೆಟ್, ಚೆಸ್ ಆಡಿದ್ದಾರೆ. ಎಲ್ಲರೂ ಸಂತಸದಿಂದ ಇದ್ದರು ಎಂದು  ಫೋನ್ ಮೂಲಕ ತಿಳಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಸುರಂಗದಿಂದ ರಕ್ಷಿಸಿದ ಕೂಡಲೇ, ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಮನೆಗೆ ಕಳುಹಿಸುವ ಮೊದಲು ಅಲ್ಲಿ ಅವರನ್ನು ನಿಗಾ ಘಟಕದಲ್ಲಿ ಇರಿಸಲಾಗಿದೆ.

ರ‍್ಯಾಟ್ ಹೋಲ್ ಪರಿಣಿತರಿಗೆ ಸಾಧನೆಗೆ ಶ್ಲಾಘನೆ

ವಿದೇಶಿ ಹೈಟೆಕ್ ಯಂತ್ರಗಳು ಅಥವಾ ಆಗರ್‌ಗಳು ಸುಮಾರು 60 ಮೀಟರ್ ಬಂಡೆಯನ್ನು ಕೊರೆಯಲು ವಿಫಲವಾದ ನಂತರ, ರ್‍ಯಾಟ್ ಹೋಲ್ ತಂತ್ರದ ಮೂಲಕ ಸುರಂಗ ಕೊರೆದು ಕಾರ್ಮಿಕರನ್ನು ರಕ್ಷಿಸಲಾಯಿತು.
ಅಂತಿಮ ಹಂತದಲ್ಲಿ ಕಾರ್ಮಿಕರನ್ನು ರಕ್ಷಿಸಲು ಅಳವಡಿಸಿಕೊಂಡ ಯೋಜನೆ ರ್‍ಯಾಟ್ ಹೋಲ್ ತಂತ್ರ. ಫಿರೋಝ್, ರಶೀದ್, ಇರ್ಶಾದ್, ನಸೀಮ್, ಮೋನು, ನಾಸೀ‌ರ್, ಅಂಕು‌ರ್, ಜತಿನ್, ಸೌರಭ್, ವಕೀಲ್ ಹಸನ್ ಮತ್ತು ದೇವೇಂದರ್ ಈ ತಂಡದಲ್ಲಿದ್ದ ಕಾರ್ಮಿಕರು. ರ‍್ಯಾಟ್ ಹೋಲ್ ಮೈನರ್ ಅಥವಾ ಇಲಿ ರಂಧ್ರ ಗಣಿಗಾರರು ಎಂದು ಕರೆಯಲ್ಪಡುವ ಇವರ ಕಾರ್ಯಕ್ಕೆ ದೇಶಾದ್ಯಂತ ಭರಪೂರ ಪ್ರಶಂಸೆಗಳು ವ್ಯಕ್ತವಾಗಿದ್ದು, ಯಂತ್ರ ಮಾಡದಿದ್ದ ಕಾರ್ಯವನ್ನು ಈ ಕಾರ್ಮಿಕರು ನೆರವೇರಿಸಿ 41 ಮಂದಿಯ ಪ್ರಾಣ ಉಳಿಸಿದ ನಿಜವಾದ ನಾಯಕರಾಗಿದ್ದಾರೆ.
ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಕಾರ್ಮಿಕರು ಬರೋಬ್ಬರಿ 17 ದಿನಗಳಿಂದ ಸುರಂಗದೊಳಗೆ ಸಿಲುಕಿದ್ದರು. ಅಗರ್‌ ಯಂತ್ರದ ಬ್ಲೇಡುಗಳು ಮುರಿದ ನಂತರ ಕೈಯ್ಯಲ್ಲಿ ಹಿಡಿಯುವ ರ್‍ಯಾಟ್ ಯಂತ್ರಗಳಿಂದಲೇ ಕೊರೆಯುವ ಕಾರ್ಯವನ್ನು ನಡೆಸಲಾಯಿತು.
41 ಕಾರ್ಮಿಕರನ್ನು ರಕ್ಷಿಸುವ ಭಾರತೀಯ ಸೇನಾ ಕಾರ್ಯಾಚರಣೆಗೆ ಉತ್ತರ ಪ್ರದೇಶದ ಝಾನ್ಸಿಯ ಆರು ಮಂದಿ ‘ರ‍್ಯಾಟ್ ಹೋಲ್’ ಗಣಿ ಕುಶಲಕಾರ್ಮಿಕರ ತಂಡ ಕೈಜೋಡಿಸಿತ್ತು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...