ಲೋಕಸಭಾ ಚುನಾವಣೆಗೂ ಮುನ್ನ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿಗೆ ನಾಗರಿಕ ಸಂಘಟನೆಗಳ ಆಗ್ರಹ

Date:

ಮಣಿಪುರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಲ್ಲಿನ ನಾಗರಿಕ ಸಂಘ ಸಂಸ್ಥೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದವು.

ಈ ಸಂದರ್ಭದಲ್ಲಿ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲು ಸಂಸತ್ತಿನಲ್ಲಿ ಕಾಂಗ್ರೆಸ್ ಒತ್ತಾಯಿಸುವಂತೆ ಸಂಘಟನೆಗಳು ಒತ್ತಾಯಿಸಿದವು.

ಯುವಕರು, ನಾಗರಿಕ ಸಂಘಸಂಸ್ಥೆಯ ಸದಸ್ಯರು ಹಾಗೂ ಸಮುದಾಯ ಸಂಘಟನೆಗಳು ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ ಕಳೆದ ಎಂಟು ತಿಂಗಳಿಂದ ಭೇಟಿ ಮಾಡದ ಪ್ರಧಾನಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದ ಜೈರಾಮ್ ರಮೇಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀವ ಮತ್ತು ಆಸ್ತಿಪಾಸ್ತಿ ನಾಶವಾಗಿರುವ ಈ ಸಂದರ್ಭದಲ್ಲಿ ನಮಗೆ ರಾಜ್ಯದಲ್ಲಿ ಸೂಕ್ಷ್ಮ, ಜವಾಬ್ದಾರಿಯುತ ಹಾಗೂ ಪಾರದರ್ಶಕ ಸರ್ಕಾರದ ಅಗತ್ಯವಿದೆ ಎಂದು ಸಂಘಟನೆಗಳು ರಾಹುಲ್‌ ಅವರಿಗೆ ತಿಳಿಸಿವೆ ಎಂದು ಜೈರಾಮ್‌ ರಮೇಶ್ ಹೇಳಿದರು.

ಈ ಮೊದಲು ಮಣಿಪುರಕ್ಕೆ ಭೇಟಿ ನೀಡುವಾಗ ಇಲ್ಲಿನ ಸಂಘ ಸಂಸ್ಥೆಗಳನ್ನು ಭೇಟಿಯಾಗುತ್ತಿದ್ದೆವು. ಆದರೆ ಈಗ ಅವರೊಂದಿಗೆ ಸಭೆ ನಡೆಸಿದ್ದೇವೆ. ಎಲ್ಲರೂ ಶಾಂತಿಗಾಗಿ ಬೇಡಿಕೆಯಿಡುತ್ತಿದ್ದಾರೆ. ಇಬ್ಬರು ರಾಜ್ಯ ಸಚಿವರು ನಾಪತ್ತೆಯಾಗಿದ್ದು, ಕೇವಲ ಆನ್‌ಲೈನ್‌ ಮೂಲಕ ಮಾತ್ರ ವ್ಯವಹರಿಸುತ್ತಿದ್ದಾರೆ. ಪ್ರಧಾನಿ ಕೂಡ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಅವರನ್ನು ಭೇಟಿ ಮಾಡದೆ ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಸ್ವಾಗತಿಸುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಇಲ್ಲಿನ ಸಂಸದರು ಅಥವಾ ಮಣಿಪುರದ ಸಚಿವರು ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಇತ್ತೀಚಿಗೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಿಜೋರಾಂಗೆ ಪ್ರಚಾರ ಕೈಗೊಂಡಿದ ಸಂದರ್ಭದಲ್ಲಿ ಪಕ್ಕದ ಹಿಂಸಾಪೀಡಿತ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ ಎಂದು ಜೈರಾಮ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಅವರು ಮಣಿಪುರದ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಬಿಹಾರ ಮೂಲದ ಕಿರಾಣಿ ಅಂಗಡಿಯವರು ಹಾಗೂ ಟ್ರಕ್‌ ಚಾಲಕರನ್ನು ಭೇಟಿ ಮಾಡಿ ಅವರ ಕಷ್ಟಸುಖಗಳನ್ನು ಆಲಿಸಿದರು.

ಕಾಂಗ್ರೆಸ್ ನಾಯಕ ಕನ್ನಯ್ಯ ಕುಮಾರ್ ಮಾತನಾಡಿ, ಮೇ ತಿಂಗಳಲ್ಲಿ ಮಣಿಪುರದ ಮುಖ್ಯಮಂತ್ರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರುವುದನ್ನು ಹೊರತುಪಡಿಸಿ ಪ್ರಧಾನಿ ಇಲ್ಲಿಯವರೆಗೂ ಎಂದಿಗೂ ಮಣಿಪುರದ ಹೆಸರನ್ನು ಬಳಸಲಿಲ್ಲ. ಪ್ರಧಾನಿ ಎರಡು ಚುನಾವಣೆಗಳನ್ನು ಗೆದ್ದಿದ್ದಾರೆ. ಅವರ ಬಳಿ ವಿಮಾನವಿದೆ, ಕಾರುಗಳಿವೆ, ಎಸ್‌ಪಿಜಿ ಕಮಾಂಡೋಗಳಿದ್ದಾರೆ. ಆದರೆ ಮಣಿಪುರಕ್ಕೆ ಮಾತ್ರ ಭೇಟಿ ನೀಡಿಲ್ಲ ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...