ಭಾರತದ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತ ಎಂದ ವಿಶ್ವ ಆರೋಗ್ಯ ಸಂಸ್ಥೆ

Date:

ವಿಶ್ವದಾದ್ಯಂತ 300ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಭಾರತದ ಹರ್ಯಾಣ ಮತ್ತು ಪಂಜಾಬಿನಲ್ಲಿ ತಯಾರಾಗುತ್ತಿರುವ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತವಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಸಿರಪ್‌ಗಳನ್ನು ಹರಿಯಾಣ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್, ಮರಿಯನ್ ಬಯೋಟೆಕ್ ಮತ್ತು ಕ್ಯೂಪಿ ಫಾರ್ಮಾ ಕಂಪನಿಗಳು ಹಾಗೂ ಪಂಜಾಬಿನ ಫರ್ಮಾಂಚೆ ಸಂಸ್ಥೆ ತಯಾರಿಸುತ್ತಿವೆ. ವಿಷಪೂರಿತವಾಗಿವೆ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದ ವಿಶ್ವ ಆರೋಗ್ಯ ಸಂಸ್ಥೆ, ತನಿಖೆಯನ್ನು ಸಂಪೂರ್ಣಗೊಳಿಸಿದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭಾರತ ಹಾಗೂ ಇಂಡೋನೇಷ್ಯಗಳಲ್ಲಿರುವ 15 ವಿವಿಧ ಕಂಪನಿಗಳು ಉತ್ಪಾದಿಸುತ್ತಿರುವ 20 ಉತ್ಪನ್ನಗಳು ವಿಷಪೂರಿತವಾಗಿದ್ದು ವಿಶ್ವದಾದ್ಯಂತ ಹಲವು ದೇಶಗಳಲ್ಲಿ ಅತೀ ಹೆಚ್ಚು ಸಾವುನೋವುಗಳಿಗೆ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.         

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವ ಸಂಸ್ಥೆ ನೀಡಿರುವ ತನಿಖೆಯಲ್ಲಿ ಈ ಸಿರಪ್‌ಗಳಲ್ಲಿ ಹೆಚ್ಚಿನ ಮಟ್ಟದ ವಿಷಕಾರಿ ಅಂಶಗಳಾದ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾಗಿದೆ. ಇದು ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ನೂರಾರು ಸಾವುಗಳಿಗೆ ಕಾರಣವಾಗಿದೆ. 

ಈ ಸುದ್ದಿ ಓದಿದ್ದೀರಾ? ಮೊಬೈಲ್‌ ಕೊಡದೆ ಕಟ್ಟುನಿಟ್ಟು ಮಾಡಿದ್ದಕ್ಕೆ ತಾಯಿಯನ್ನೇ ಕೊಲ್ಲಲು ಹೊರಟ ಮಗಳು!

ಕೆಮ್ಮು ಸಿರಪ್ ಸೇವನೆಯ ನಂತರ ಆಫ್ರಿಕನ್ ದೇಶಗಳಲ್ಲಿ ಹಲವಾರು ಸಾವುಗಳು ವರದಿಯಾದ ನಂತರ ಭಾರತದಿಂದ ಗುಣಮಟ್ಟವಿಲ್ಲದ ಔಷಧಿಗಳ ಪೂರೈಕೆಯ ಬಗ್ಗೆ ವರದಿ ಬೆಳಕಿಗೆ ಬಂದಿತ್ತು. ಕಳೆದ ವರ್ಷ, ಭಾರತದಲ್ಲಿ ತಯಾರಿಸಿದ ಔಷಧಿಗಳು ಗ್ಯಾಂಬಿಯಾ ದೇಶದಲ್ಲಿ 60 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾಯಿತು ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಸುಮಾರು 20 ಮಕ್ಕಳು ಮೃತಪಟ್ಟಿದ್ದರು. 

ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಮತ್ತು ಗ್ಯಾಂಬಿಯಾದ ಆರೋಗ್ಯ ಅಧಿಕಾರಿಗಳು ನಡೆಸಿದ ಜಂಟಿ ತನಿಖೆಯು ಗ್ಯಾಂಬಿಯಾದಲ್ಲಿ ಅನೇಕ ಮಕ್ಕಳ ಸಾವು ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್‌ಗಳ ಸೇವನೆಯಿಂದ ಆಗಿದೆಯೆಂದು ದೃಢಪಡಿಸಿತ್ತು.

ಇತ್ತೀಚಿಗೆ ಮಧ್ಯ ಆಫ್ರಿಕಾದ ರಾಷ್ಟ್ರ ಕ್ಯಾಮರೂನ್‌ನಲ್ಲೂ ಕೂಡ ವಿಷಪೂರಿತ ಕೆಮ್ಮು ಸಿರಪ್‌ಗಳಿಂದ ಹನ್ನೆರಡು ಮಕ್ಕಳು ಸಾವಿಗೀಡಾಗಿದ್ದರು. ಇದಕ್ಕೆ ಭಾರತದ ಇಂದೂರ್‌ ಮೂಲದ ರೀಮನ್ ಲ್ಯಾಬ್ಸ್ ಪ್ರೈ.ಲಿ. ಔಷಧ ಸಂಸ್ಥೆ ಕಾರಣವಿರಬಹುದು ಎಂದು ಅಧಿಕಾರಿಗಳು ಸಂದೇಹ ವ್ಯಕ್ತಪಡಿಸಿದ್ದರು. ಆದರೆ ರೀಮನ್ ಲ್ಯಾಬ್ಸ್ ಸಂಸ್ಥೆಯ ಅಧಿಕಾರಿಗಳು, ’ತಾವು ಕಟ್ಟುನಿಟ್ಟಾದ ಗುಣಮಟ್ಟದ ನಿಯಂತ್ರಣಗಳನ್ನು ಅನುಸರಿಸುತ್ತಿದ್ದು, ಕಳಂಕಿತ ಔಷಧವನ್ನು ತಯಾರಿಸುವ ಯಾವುದೇ ಸಾಧ್ಯತೆಯಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...