ಅಮೇಥಿಯಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಕಿಶೋರ್ ಲಾಲ್ ಶರ್ಮಾ ಯಾರು?

Date:

1980ರ ದಶಕದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್‌ನಿಂದ ಹೊಸ ಹೆಸರು ಪ್ರಕಟವಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಕಿಶೋರ್‌ ಲಾಲ್‌ ಶರ್ಮಾ ಅವರನ್ನು ಈ ಬಾರಿ ಕಣಕ್ಕಿಳಿಸಲಾಗಿದೆ.

1980 ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ ನಂತರ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಕೂಡ ಈ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ರಾಜೀವ್‌ ಗಾಂಧಿ ನಾಲ್ಕು 1981 ರಿಂದ 1991ರವರೆಗೆ 4 ಬಾರಿ, 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಆಯ್ಕೆಯಾಗಿದ್ದರು.

ಇಂದಿರಾ ಗಾಂಧಿ ಕುಟುಂಬದ ಹೊರತಾಗಿ 1991 ಹಾಗೂ 1996ರಲ್ಲಿ ಸತೀಶ್ ಶರ್ಮಾ ಹೊರತುಪಡಿಸಿದರೆ,1998ರಲ್ಲಿ ಬಿಜೆಪಿಯಿಂದ ಸಂಜಯ್‌ ಸಿನ್ಹಾ ಹಾಗೂ 2019ರಲ್ಲಿ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರವರೆಗೂ ಅಮೇಥಿ ಪ್ರತಿನಿಧಿಸಿದ್ದ ರಾಹುಲ್‌ ಗಾಂಧಿ ಈ ಬಾರಿ ತಮ್ಮ ಕ್ಷೇತ್ರವನ್ನು ರಾಯ್‌ಬರೇಲಿಗೆ ಬದಲಾಯಿಸಿದ್ದಾರೆ. ಅಲ್ಲದೆ ಕೇರಳದ ವಯನಾಡುವಿನಿಂದಲೂ ಎರಡನೇ ಬಾರಿ ಸ್ಪರ್ಧೆಗಿಳಿದಿದ್ದಾರೆ. ಮೊದಲ ಬಾರಿಗೆ ಕಣಕ್ಕಿಳಿದಿರುವ ಕಿಶೋರ್‌ ಲಾಲ್‌ ಶರ್ಮಾ ಹೊರಗಿವನರಿಗೆ ಹೊಸ ಪರಿಚಯವಾದರೂ ಅಮೇಥಿ ಹಾಗೂ ರಾಯ್‌ಬರೇಲಿಯ ಜನತೆಗೆ ಹಳೆಯ ಪರಿಚಯ.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ರಾಯ್‌ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಕಣಕ್ಕೆ

ಕಿಶೋರ್‌ ಲಾಲ್‌ ಶರ್ಮಾ ಅವರು ಕಳೆದ 4 ದಶಕಗಳಿಂದ ಗಾಂಧಿ ಕುಟುಂಬಕ್ಕೆ ಅತ್ಯಂತ ಪರಮಾಪ್ತರು. ಮೂಲತಃ ಪಂಜಾಬ್‌ನ ಲೂಧಿಯಾನದವರಾದ ಕಿಶೋರ್‌ ಲಾಲ್‌ ಅವರು ರಾಜೀವ್‌ ಗಾಂಧಿ ಜೊತೆಗೆ ರಾಯ್‌ಬರೇಲಿ ಹಾಗೂ ಅಮೇಥಿಗೆ 1983ರಲ್ಲಿ ಕಾಲಿಟ್ಟರು.

ಗಾಂಧಿ ಕುಟುಂಬದೊಂದಿಗೆ ಹೆಚ್ಚು ನಿಕಟ ಹೊಂದಿದ್ದರೂ 1991ರಲ್ಲಿ ರಾಜೀವ್‌ ಗಾಂಧಿ ಮೃತರಾದ ನಂತರ ಮತ್ತಷ್ಟು ಹತ್ತಿರವಾದರು. ಕಿಶೋರ್‌ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳ ಪ್ರಮುಖ ನಾಯಕರಾಗಿ ಉಸ್ತುವಾರಿ ಕೂಡ ನೋಡಿಕೊಳ್ಳುತ್ತಿದ್ದರು.

ಗಾಂಧಿ ಕುಟುಂಬ ಈ ಕ್ಷೇತ್ರಗಳಲ್ಲಿ ಇಲ್ಲದ ಸಂದರ್ಭದಲ್ಲಿ ಆಗಾಗ ಭೇಟಿ ನೀಡಿ ಪಕ್ಷದ ಕಾರ್ಯಚಟುವಟಿಕೆಗಳನ್ನು ಹೆಚ್ಚಾಗಿ ನಿರ್ವಹಿಸುತ್ತಿದ್ದರು. ರಾಹುಲ್‌, ಸೋನಿಯಾ ಕ್ಷೇತ್ರಕ್ಕೆ ಆಗಮಿಸಿದಾಗಲೂ ಅವರ ಜೊತೆ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಬಿಹಾರ ಹಾಗೂ ಪಂಜಾಬ್‌ನಲ್ಲೂ ಕೂಡ ಕಿಶೋರ್‌ ಲಾಲ್‌ ಶರ್ಮಾ ಕೆಲಸ ಮಾಡಿದ್ದಾರೆ. ಸೋನಿಯಾ ಗಾಂಧಿ ರಾಯ್‌ಬರೇಲಿಗೆ ಕ್ಷೇತ್ರ ಬದಲಾಯಿಸಿದ ನಂತರ ಅವರೂ ಕೂಡ ಸ್ಥಳಾಂತರಗೊಂಡರು.

ಕೆ ಪಿ ಶರ್ಮಾ ಅಮೇಥಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸುವ ವೇಳೆ ಸುಮಾರು 50 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಂಡು ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಅಮೆಥಿ ಹಾಗೂ ರಾಯ್‌ಬರೇಲಿಯಲ್ಲಿ ಮೇ. 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್‌ ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿ 17ರಲ್ಲಿ ಸ್ಪರ್ಧಿಸುತ್ತಿದೆ. ಉಳಿದ 63 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷ ಕಣಕ್ಕಿಳಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...