ಪಹಲ್ಗಾಮ್‌ ದಾಳಿ ನಡೆಸಿದ ಉಗ್ರರು ಪಾಕ್‌ನಿಂದ ಬಂದಿರುವುದಕ್ಕೆ ಪುರಾವೆಗಳಿಲ್ಲ: ಪಿ ಚಿದಂಬರಂ

Date:

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಆಪರೇಷನ್ ಸಿಂಧೂರ್ ಅನ್ನು ಕೇಂದ್ರ ಸರಕಾರ ನಿರ್ವಹಿಸಿದ ರೀತಿ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಗೃಹ ಸಚಿವ ಪಿ. ಚಿದಂಬರಂ ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಬಗ್ಗೆ ಸರಕಾರ ಸಾಕಷ್ಟು ಮಾಹಿತಿಯನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ.

ಭಯೋತ್ಪಾದಕ ದಾಳಿಕೋರರು ಎಲ್ಲಿದ್ದಾರೆ? ನೀವು ಅವರನ್ನು ಏಕೆ ಬಂಧಿಸಿಲ್ಲ ಅಥವಾ ಗುರುತಿಸಿಲ್ಲ? ದಾಳಿಕೋರರಿಗೆ ಆಶ್ರಯ ನೀಡಿದ ಕೆಲವು ಜನರನ್ನು ಬಂಧಿಸಲಾಗಿದೆ ಎಂಬ ಸುದ್ದಿಯಾಗಿತ್ತು. ಅವರಿಗೆ ಏನಾಯಿತು? ಎಂದು ಪಹಲ್ಗಾಮ್ ದಾಳಿ ಕುರಿತು ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಸಿಂಗಾಪುರಕ್ಕೆ ಹೋಗಿ ಕೆಲವು ಮಾಹಿತಿಯನ್ನು ನೀಡುತ್ತಾರೆ. ಉಪ ಸೇನಾ ಮುಖ್ಯಸ್ಥರು ಮುಂಬೈನಲ್ಲಿ ಹೇಳಿಕೆ ನೀಡುತ್ತಾರೆ. ಇಂಡೋನೇಷ್ಯಾದಲ್ಲಿ ನೌಕಾಪಡೆಯ ಕಿರಿಯ ಅಧಿಕಾರಿಯೊಬ್ಬರು ಹೇಳಿಕೆ ನೀಡುತ್ತಾರೆ. ಆದರೆ, ಪ್ರಧಾನಿ ಅಥವಾ ರಕ್ಷಣಾ ಸಚಿವರು ಅಥವಾ ವಿದೇಶಾಂಗ ಸಚಿವರು ಸಮಗ್ರವಾದ ಹೇಳಿಕೆಯನ್ನು ಏಕೆ ನೀಡುತ್ತಿಲ್ಲ? ಚಿದಂಬರಂ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು

ತನಿಖೆಯಲ್ಲಿ ಎನ್ಐಎ ಪಾತ್ರವನ್ನು ಅವರು ಪ್ರಶ್ನಿಸಿದರು. ಇಷ್ಟು ವಾರಗಳಲ್ಲಿ ಎನ್ಐಎ ಏನು ತನಿಖೆ ಮಾಡಿದೆ ಎಂಬುದನ್ನು ಬಹಿರಂಗಪಡಿಸಲು ಅವರು ಸಿದ್ಧರಿಲ್ಲ. ಅವರು ಭಯೋತ್ಪಾದಕರನ್ನು ಪತ್ತಹೆಚ್ಚಿದ್ದಾರಾ? ಅವರು ಎಲ್ಲಿಂದ ಬಂದರು? ಅವರು ಸ್ವದೇಶಿ ಭಯೋತ್ಪಾದಕರಾಗಿರಬಹುದು. ಅವರು ಪಾಕಿಸ್ತಾನದಿಂದ ಬಂದವರು ಎಂದು ನೀವು ಏಕೆ ಭಾವಿಸುತ್ತೀರಿ? ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

ಅವರು ಯುದ್ಧದಲ್ಲಿ ಸಂಭವಿಸಿದ ನಷ್ಟಗಳನ್ನು ಮರೆಮಾಡುತ್ತಿದ್ದಾರೆ. ಯುದ್ಧದಲ್ಲಿ ಎರಡೂ ಕಡೆಯೂ ನಷ್ಟ ಸಂಭವಿಸುತ್ತದೆ ಎಂದು ನಾನು ಒಂದು ಅಂಕಣದಲ್ಲಿ ಹೇಳಿದ್ದೆ. ಯುದ್ಧದಲ್ಲಿ ಭಾರತಕ್ಕೆ ನಷ್ಟವಾಗಿದೆಯಾ ಎಂಬುದನ್ನು ಸ್ಪಷ್ಟವಾಗಿ ತಿಳಿಸಿ ಎಂದು ಚಿದಂಬರಂ ಹೇಳಿದರು.

ಸಂಸತ್ತಿನಲ್ಲಿ ಸೋಮವಾರ ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಕುರಿತು ಚರ್ಚೆ ನಡೆಯಲಿದೆ. ಈ ಮಧ್ಯೆ ಚಿದಂಬರಂ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.

ಚಿದಂಬರಂ ಅವರ ಈ ಹೇಳಿಕೆಗಳ ಬಗ್ಗೆ ಹಲವು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...