ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಯಾವಾಗ ಮಾತನಾಡುತ್ತಾರೆ?: ಪ್ರಧಾನಿ ಮೌನದ ಬಗ್ಗೆ ಖರ್ಗೆ ಪ್ರಶ್ನೆ

Date:

ಯುಜಿಸಿ,ನೀಟ್‌ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಪ್ರತಿ ವರ್ಷ ನಡೆಸುವ ‘ಪರೀಕ್ಷೆ ಪೇ ಚರ್ಚಾ’ ದೊಡ್ಡ ತಮಾಷೆಯಾಗಿದ್ದು, ಮೋದಿ ಸರ್ಕಾರವು ‘ಸೋರಿಕೆ ಹಾಗೂ ಅಕ್ರಮಗಳಿಲ್ಲದೆ’ ಪರೀಕ್ಷೆ ನಡೆಸುವುದಕ್ಕೆ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿಯವರು ಯಾವ ರೀತಿಯ ಪರೀಕ್ಷೆ ಪೇ ಚರ್ಚಾ ನಡೆಸುತ್ತಾರೆ. ಪ್ರತಿ ದಿನವೂ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಮೋದಿ ಸರ್ಕಾರ ದೇಶದ ಶಿಕ್ಷಣ ಹಾಗೂ ನೇಮಕಾತಿ ವ್ಯವಸ್ಥೆಯನ್ನು ಹಾಳುಗೆಡವಿದೆ. ನೀಟ್‌, ಯುಜಿಸಿ, ಸಿಯುಇಟಿಯಲ್ಲಿ ಪ್ರಶ್ನೆ ಪತ್ರಿಕೆ, ಅಕ್ರಮ ಹಾಗೂ ವಂಚನೆಗಳು ನಿತ್ಯವು ಬಯಲಾಗುತ್ತಿವೆ. ಹೆಚ್ಚು ಪ್ರಚಾರ ಪಡೆದಿರುವ ರಾಷ್ಟ್ರೀಯ ನೇಮಕಾತಿ ಸಂಸ್ಥೆ(ಎನ್‌ಆರ್‌ಎ) ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಕಿಡಿಕಾರಿದರು.

“ಆಗಸ್ಟ್‌ 2020ರಲ್ಲಿ ಮೋದಿ ಎನ್‌ಆರ್‌ಎ ಬಗ್ಗೆ ಸಾಕಷ್ಟು ಪ್ರಚಾರದೊಂದಿಗೆ ಬಡಾಯಿ ಕೊಚ್ಚಿಕೊಂಡಿದ್ದರು. ಎನ್‌ಆರ್‌ಎ ಕೋಟ್ಯಂತರ ಯುವಕರಿಗೆ ವರದಾನವಾಗಿದೆ ಎಂದು ಹೇಳಿದ್ದರು. ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಅತ್ಯಮೂಲ್ಯ ಸಮಯ ಹಾಗೂ ಸಂಪನ್ಮೂಲ ಉಳಿಕೆಯೊಂದಿಗೆ ಹಲವು ಪರೀಕ್ಷೆಗಳನ್ನು ಕೈಗೊಂಡು ಪಾರದರ್ಶಕವಾಗಿರುತ್ತದೆ ಎಂದು ಹೇಳಿದ್ದರು. ಆದರೆ ನಾಲ್ಕು ವರ್ಷ ಕಳೆದರೂ ಒಂದೇಒಂದು ಪರೀಕ್ಷೆಯನ್ನು ಎನ್‌ಆರ್‌ಎ ಆಯೋಜಿಸಿಲ್ಲ” ಎಂದು ಖರ್ಗೆ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿಗೆ ಬೇಕಿರುವುದು ವಿಭಜನೆಗೂ ಮುಖ್ಯವಾಗಿ ಚುನಾವಣೆ

ಎನ್‌ಆರ್‌ಎ ಸಂಸ್ಥೆಗೆ 1517.57 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಆದರೆ ಡಿಸೆಂಬರ್‌ 2022ರವರೆಗೂ ಎನ್‌ಆರ್‌ಎ ಕೇವಲ 20 ಕೋಟಿ ರೂ. ಮಾತ್ರ ವೆಚ್ಚ ಮಾಡಿದೆ. ಈ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆಕೇಳಿದರೆ ಮೋದಿ ಸರ್ಕಾರ ಸಮರ್ಥನೆ ನೀಡುವ ಮೂಲಕ ಕಾಲಹರಣ ಮಾಡುತ್ತಲೇ ಇದೆ. ಎನ್‌ಆರ್‌ಎಯನ್ನು ಪರೀಕ್ಷೆಗಳನ್ನು ಕೈಗೊಳ್ಳುವ ಸಂಸ್ಥೆಯನ್ನಾಗಿ ಮಾಡದೆ ಕೆಳಹಂತದ ವಿದ್ಯಾರ್ಥಿಗಳನ್ನು ಪರೀಕ್ಷಿಸುವ ಏಜೆನ್ಸಿಯನ್ನಾಗಿ ಮಾಡಲಾಗಿದೆ ಎಂದು ಖರ್ಗೆ ಆರೋಪಿಸಿದರು.

“ಮೋದಿ ಸರ್ಕಾರ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡದೆ,ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಬಡ ಯುವಕರ ಮೀಸಲಾತಿ ಕಿತ್ತುಕೊಳ್ಳಲು ಯೋಜಿತ ಸಂಚು ರೂಪಿಸಿದೆ. ಆರ್‌ಟಿಐ ಮಾಹಿತಿಯ ಪ್ರಕಾರ ಪ್ರಧಾನಿ ಮೋದಿ ಅವರ ಪರೀಕ್ಷೆ ಪೇ ಚರ್ಚಾ ಕಾರ್ಯಕ್ರಮಕ್ಕೆ ಕಳೆದ 6 ವರ್ಷಗಳಲ್ಲಿ ಶೇ.175 ರಷ್ಟು ಅನುದಾನವನ್ನು ಹೆಚ್ಚಿಸಲಾಗಿದೆ. ಇಷ್ಟೆಲ್ಲ ನಡೆಸಿದರೂ ದೇಶಾದ್ಯಂತ ಪ್ರಾಮಾಣಿಕವಾಗಿ ಪರೀಕ್ಷೆ ನಡೆಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ” ಎಂದು ಖರ್ಗೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...