ಗೌಪ್ಯತೆಯ ಬದ್ದತೆ ಮುರಿಯಲು ಒತ್ತಾಯಿಸಿದರೆ ಭಾರತವನ್ನೇ ತೊರೆಯುತ್ತೇವೆ: ವಾಟ್ಸಾಪ್‌

Date:

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಚ್‌ ಎನ್‌ಕ್ರಿಪ್ಶನ್‌) – ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು – ಉಲ್ಲಂಘಿಸಲು ಒತ್ತಾಯಿಸಿದರೆ ದೇಶವನ್ನು ತೊರೆಯುವುದಾಗಿ ವಾಟ್ಸಾಪ್‌ ಹೇಳಿದೆ. ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಗೊಳಿಸುವುದಾಗಿ ಮೆಟಾ ಒಡೆತನದ ವಾಟ್ಸಾಪ್‌ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಯಂತ್ರಿಸುವ ‘ಮಾಹಿತಿ ತಂತ್ರಜ್ಞಾನ ನಿಯಮ ನಿಯಮಗಳು-2021’ಅನ್ನು ಪ್ರಶ್ನಿಸಿ 2021ರಲ್ಲಿಯೇ ವಾಟ್ಸಾಪ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ. “ಬಳಕೆದಾರರ ಖಾಸಗಿತನವನ್ನು ವೇದಿಕೆಯು ಉಲ್ಲಂಘಿಸುವಂತೆ ಒತ್ತಾಯಿಸಿದರೆ, ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನೇ ನಿಲ್ಲಿಸುತ್ತದೆ” ಎಂದು ವಾಟ್ಸಾಪ್‌ ಕಂಪನಿಯ ವಕೀಲ ತೇಜಸ್‌ ಕರಿಯಾ ಹೇಳಿದ್ದಾರೆ.

“ಖಾಸಗಿತನದ ಗೌಪ್ಯತೆಯ ಕಾರಣಕ್ಕಾಗಿ ಜನರು ವಾಟ್ಸಾಪ್‌ಅನ್ನು ಬಳಸುತ್ತಿದ್ದಾರೆ. ಕೇಂದ್ರ ಸರ್ಕಾರದ ಹೊಸ ನಿಯಮವು ಬಳಕೆದಾರರ ಗೌಪ್ಯತೆಯನ್ನು ಮುರಿಯುತ್ತದೆ. ವಾಟ್ಸಾಪ್‌ ಶತಕೋಟಿ ಸಂದೇಶಗಳನ್ನು ಸಂಗ್ರಹಿಸಬಹುದಾದ ವೇದಿಕೆಯಾಗಿದೆ. ವಾಟ್ಸಾಪ್‌ನಲ್ಲಿ ಯಾವುದೇ ಮಿತಿಯಿಲ್ಲಲ. ಹೀಗಾಗಿ, ನಮ್ಮ ಮೇಲೆ, ಬಳಕೆದಾರರ ಸಂದೇಶಗಳನ್ನು ಪದೇ ಪದೆ ಕೇಳಲಾಗುತ್ತದೆ” ಎಂದು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿ ಎರಡು ವಿಚಾರಗಳಿವೆ – ಒಂದು, ಬಳಕೆದಾರರ ಖಾಸಗಿತನ – ಗೌಪ್ಯತೆ. ಎರಡು, ಸರ್ಕಾರವು ಬಳಕೆದಾರರ ಸಂದೇಶಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದೆ. ಉದಾಹರಣೆಗೆ, ಭಯೋತ್ಪದಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬ ಆರೋಪದ ಮೇಲೆ ಆತನನ್ನು ಹಿಡಿಯಲು, ಆತ ಕಳುಹಿಸುವ ಸಂದೇಶಗಳಿಗಾಗಿ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತದೆ. ನಾವು ಬಳಕೆದಾರ ಮತ್ತು ಸರ್ಕಾರಗಳ ನಡುವೆ ಸಿಲುಕಿದ್ದೇವೆ. ಒಂದು ಸೂಚನೆಗಾಗಿ ನಾವು ನಮ್ಮ ಗೌಪ್ಯತೆಯ ನಿಲುವನ್ನು ಮುರಿಯಬೇಕೆ? ಈ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯವು ಪರಿಶೀಲಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಈ ನಿಯಮ ರೂಪಿಸಲು ಸರ್ಕಾರಕ್ಕೆ ಅವಕಾಶವಿಲ್ಲ” ಎಂದು ವಕೀಲರು ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...