ಓವೈಸಿ ಸಹೋದರರ ವಿರುದ್ಧ ಬಿಜೆಪಿಯ ನವನೀತ್ ರಾಣಾ ವಿವಾದಾತ್ಮಕ ಹೇಳಿಕೆ

Date:

ಎಐಎಂಐಎಂ ಪಕ್ಷದ ಓವೈಸಿ ಸಹೋದರರ ಬಗ್ಗೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ನವನೀತ್‌ ರಾಣಾ ವಿವಾದಾತ್ಮಕ ಹೇಳಿಕೆ ನೀಡಿರುವುದು ಎಲ್ಲಡೆ ಆಕ್ರೋಶಕ್ಕೆ ಕಾರಣವಾಗಿದೆ.

ಹೈದರಾಬಾದ್‌ನಲ್ಲಿ ಮಾತನಾಡಿರುವ ನವನೀತ್‌ ರಾಣಾ, ಪೊಲೀಸರನ್ನು 15 ಸೆಕೆಂಡ್‌ ಹಿಂದಕ್ಕೆ ಪಡೆದರೆ ಸಹೋದರರು ಎಲ್ಲಿಂದ ಆಗಮಿಸಿದರು ಎಲ್ಲಿಗೆ  ವಾಪಸ್‌ ಹೋದರು ಎಂಬುದನ್ನು ತಿಳಿಯದ ಹಾಗೆ ಮಾಡುತ್ತೇವೆ ಎಂದು ಓವೈಸಿ ಸಹೋದರರನ್ನು ಗುರಿಯಾಗಿಸಿಕೊಂಡು ಹೇಳಿದ್ದಾರೆ.

2019ರಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ವತಂತ್ರವಾಗಿ ಸಂಸದರಾಗಿ ಆಯ್ಕೆಯಾಗಿದ್ದು, ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವನೀತ್‌ ರಾಣಾಗೆ ತಿರುಗೇಟು ನೀಡಿರುವ ಅಸಾದುದ್ದೀನ್ ಓವೈಸಿ, “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಕೆಗೆ 15 ಸೆಕೆಂಡ್‌ ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಕೇವಲ 15 ಸೆಕೆಂಡ್ ಮಾತ್ರವಲ್ಲ, ಒಂದು ಗಂಟೆ ತೆಗೆದುಕೊಳ್ಳಿ. ನಾವು ಹೆದರಿಕೊಳ್ಳುವುದಿಲ್ಲ. ನಿಮ್ಮಿಂದ ಮಾನವೀಯತೆ ಹೇಗೆ ಕಳೆದುಹೋಗಿದೆ ಎಂಬುದನ್ನು ಸಹ ನಾವು ನೋಡ ಬಯಸುತ್ತೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

“ಪ್ರಧಾನಿಯೂ ನಿಮ್ಮವರೆ, ಆರ್‌ಎಸ್‌ಎಸ್‌ ಕೂಡ ನಿಮ್ಮವರೆ. ಮಾಡಿ ನಿಮ್ಮನ್ನು ಯಾರೂ ತಡೆಯುತ್ತಾರೆ. ಎಲ್ಲಿಗೆ ಬರಬೇಕೆಂದು ಹೇಳಿ ಅಲ್ಲಿಗೆ ಬರುತ್ತೇವೆ. ಅದನ್ನು  ಈಗಲೇ ಮಾಡಿ” ಎಂದು ಹೇಳಿದ್ದಾರೆ.

ನವನೀತ್‌ ಹೇಳಿಕೆಯನ್ನು ಖಂಡಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್‌ ಚೌಹಾಣ್, “ಇಂತಹ ವ್ಯಕ್ತಿಗಳು ಸಮಾಜಕ್ಕೆ ವಿಷಬೀಜ ಬಿತ್ತುತ್ತಿದ್ದಾರೆ. ಚುನಾವಣೆಯಲ್ಲಿ ಎಲ್ಲ ಬಿಜೆಪಿ ನಾಯಕರು ಇದನ್ನೇ ಮಾಡುತ್ತಿದ್ದಾರೆ” ಎಂದು ದೂರಿದರು.

ಅಸಾದುದ್ದೀನ್‌ ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿಯ ಮಾಧವಿ ಲತಾ ಕೂಡ ಈ ಹಿಂದೆ ಪ್ರಚಾರ ಕೈಗೊಳ್ಳುವ ಸಂದರ್ಭದಲ್ಲಿ ಮಸೀದಿಯನ್ನು ಬಿಲ್ಲುಬಾಣದಿಂದ ಕೆಡವುವ ಅಣಕು ಪ್ರದರ್ಶನ ಮಾಡಿದ್ದರು.

ಹೈದರಾಬಾದ್‌ ಲೋಕಸಭಾ ಕ್ಷೇತ್ರವು 6 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅಸಾದುದ್ದೀನ್‌ ಓವೈಸಿ 2004ರಿಂದ ಈ ಕ್ಷೇತ್ರದ ಸಂಸದರಾಗಿದ್ದಾರೆ. ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...