ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 27ಕ್ಕೆ ಮುಂದೂಡಿಕೆ

Date:

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದ್ದು ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನವನ್ನು ನವೆಂಬರ್ 27ಕ್ಕೆ ಮುಂದೂಡಿದ್ದಾರೆ. ಅದಾನಿ ಹಗರಣ, ಮಣಿಪುರ ಹಿಂಸಾಚಾರ ಬಗ್ಗೆ ಸದನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಿದ್ದು ಗದ್ದಲದ ಬಳಿಕ ಕಲಾಪ ಮುಂದೂಡಲಾಗಿದೆ.

ಇನ್ನು “ಸ್ಪೀಕರ್ ಸದನವನ್ನು ಯಾಕೆ ಮುಂದೂಡಿದರು ಎಂಬುದು ತಿಳಿದಿಲ್ಲ” ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಹೇಳಿದ್ದಾರೆ. 

“ಮಣಿಪುರ ಹಿಂಸಾಚಾರದ ವಿಷಯವನ್ನು ಪ್ರಸ್ತಾಪಿಸಲು ನಾವು ಆಗ್ರಹಿಸಿದ್ದೇವೆ. ಮಣಿಪುರದಲ್ಲಿ ಅತ್ಯಾಚಾರ, ಕೊಲೆಗಳು ನಡೆಯುತ್ತಿವೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು ಉತ್ತರ ಭಾರತದಲ್ಲಿ ಮಾಲಿನ್ಯ ಅಧಿಕವಾಗಿದೆ. ಈ ಬಗ್ಗೆ ನಮಗೆ ಆತಂಕವಿದೆ. ಇದು ಅತೀ ಗಂಭೀರ ವಿಷಯಗಳಾಗಿವೆ” ಎಂದು ಕಾಂಗ್ರೆಸ್‌ನ ಪ್ರಮೋದ್ ತಿವಾರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಡಿ. 9ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಸಹಕಾರ ಮತ್ತು ಬೆಂಬಲ ನೀಡುವಂತೆ ಎಲ್ಲಾ ಪಕ್ಷದ ನಾಯಕರನ್ನು ವಿನಂತಿಸಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಚಳಿಗಾಲದ ಅಧಿವೇಶನವು ಡಿಸೆಂಬರ್ 20ರವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ, ವಕ್ಫ್ ತಿದ್ದುಪಡಿ ಮಸೂದೆ ಮತ್ತು ವಿಪತ್ತು ನಿರ್ವಹಣಾ (ತಿದ್ದುಪಡಿ) ಮಸೂದೆಗಳು ಚರ್ಚೆಗೆ ಬರುವ ಸಾಧ್ಯತೆಯಿದೆ. ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ ಮತ್ತು ರೈಲ್ವೆ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ. ರೈಲ್ವೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನೂ ಮಂಡಿಸಲಾಗುವುದು.

ಜೊತೆಗೆ ಈ ಅಧಿವೇಶನದಲ್ಲಿ ಸರ್ಕಾರವು ‘ಒಂದು ದೇಶ ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂಬ ಊಹಾಪೋಹಗಳಿವೆ. ಇತ್ತೀಚೆಗೆ ಒಂದು ದೇಶ ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...