ರಾಜಸ್ಥಾನ | ಪೊಲೀಸ್ ರಕ್ಷಣೆ ಕೋರಿದ ಕೆಲವೇ ನಿಮಿಷಗಳಲ್ಲಿ ಎಸ್‌ಪಿ ಕಚೇರಿಯ ಹೊರಗೆ ಯುವತಿಯ ಅಪಹರಣ

Date:

ರಾಜಸ್ಥಾನದ ಭಿಲ್ವಾರಾದ ಕಲೆಕ್ಟರೇಟ್ ಸಂಕೀರ್ಣದ ಬಳಿ ಬುಧವಾರ ಹಾಡಹಗಲೇ ಯುವತಿಯೊಬ್ಬಳನ್ನು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಸಮೀಪದಿಂದಲೇ ಅಪಹರಣ ಮಾಡಲಾಗಿದೆ. ಯುವತಿ ಪೊಲೀಸ್ ರಕ್ಷಣೆ ಕೋರಿದ ಕೆಲವೇ ನಿಮಿಷಗಳಲ್ಲಿ ಎಸ್‌ಪಿ ಕಚೇರಿಯಿಂದ 50 ಮೀಟರ್ ದೂರದಲ್ಲೇ ಅತ್ಯಂತ ಹೆಚ್ಚಿನ ಭದ್ರತಾ ವಲಯಗಳಲ್ಲಿ ಒಂದಾದ ಭಿಲ್ವಾರದಲ್ಲಿ ಈ ಘಟನೆ ನಡೆದಿದೆ.

ಸಂಜೆ 6 ಗಂಟೆ ಸುಮಾರಿಗೆ ಕಪ್ಪು ಬಣ್ಣದ ಸ್ಕಾರ್ಪಿಯೋದಲ್ಲಿ ಬಂದವರು ಯುವತಿಯನ್ನು ಬಲವಂತವಾಗಿ ವಾಹನಕ್ಕೆ ಎಳೆದೊಯ್ದು ಅತಿ ವೇಗದಲ್ಲಿ ಪರಾರಿಯಾಗಿದ್ದಾರೆ. ಎಸ್‌ಪಿ ಕಚೇರಿಯ ಪ್ರದೇಶವನ್ನು ನಗರದಲ್ಲೇ ಅತಿ ಸುರಕ್ಷಿತ ಪ್ರದೇಶವೆಂದು ಪರಿಗಣಿಸಲಾಗುತ್ತದೆ. ಅಧಿಕ ಭದ್ರತೆ ಇರುವ ಪ್ರದೇಶದಲ್ಲೇ ಅಪಹರಣ ನಡೆದಿರುವುದು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಸಹಾಯ ಕೇಳುವ ನೆಪದಲ್ಲಿ ಮಕ್ಕಳ ಅಪಹರಣ; ಆರೋಪಿ ಮಹಿಳೆ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ವಾಹನವನ್ನು ತಡೆಯಲು ಪ್ರಯತ್ನಿಸಿದ್ದು ಆರೋಪಿಗಳು ತಮ್ಮ ವಾಹನದಿಂದ ಪೊಲೀಸರಿಗೆ ಡಿಕ್ಕಿ ಹೊಡಯಲು ಪ್ರಯತ್ನಿಸಿ ತಪ್ಪಿಸಿಕೊಂಡಿದ್ದಾರೆ. ಇನ್ನು ಸಮೀಪದಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲಾ ವಿಶೇಷ ಶಾಖೆಯ (ಡಿಎಸ್‌ಬಿ) ಎಎಸ್‌ಐ ಪ್ರತಾಪ್ ಸಿಂಗ್ ವಾಹನಕ್ಕೆ ಅಡ್ಡಲಾಗಿ ನಿಂತಿದ್ದು, ವಾಹನ ಮಾತ್ರ ವೇಗ ಕಡಿಮೆ ಮಾಡಿಲ್ಲ. ಪ್ರತಾಪ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದು, ಅವರ ಮೊಬೈಲ್‌ಗೆ ಮಾತ್ರ ಹಾನಿಯಾಗಿದೆ. ಇನ್ನು ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ವಕೀಲರು ಯುವತಿಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಅಪಹರಣ ಮಾಡಿದವರು ಆಕೆಯ ಪೋಷಕರ ಕುಟುಂಬಕ್ಕೆ ಸೇರಿದವರು ಎಂದು ಯುವತಿಯ ಅತ್ತೆ-ಮಾವ ಆರೋಪಿಸಿದ್ದಾರೆ. ಮಹಿಳೆ ಕೋರ್ಟ್‌ ವಿವಾಹವಾಗಿದ್ದು, ಈ ಹಿಂದೆ ತನ್ನ ಸಂಗಾತಿಯೊಂದಿಗೆ ಲಿವ್-ಇನ್‌ನಲ್ಲಿದ್ದರು. ಆದರೆ ಆಕೆಯ ಕುಟುಂಬ ಇದನ್ನು ವಿರೋಧಿಸಿತ್ತು. ಯುವತಿ ಈಗಾಗಲೇ ತನ್ನ ಪೋಷಕರ ಕುಟುಂಬದಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಬುಧವಾರ, ಪೊಲೀಸ್ ರಕ್ಷಣೆ ಕೋರಿ ಅಫಿಡವಿಟ್ ಸಲ್ಲಿಸಲು ಎಸ್‌ಪಿ ಕಚೇರಿಗೆ ಭೇಟಿ ನೀಡಿದ್ದರು. ಅಫಿಡವಿಟ್ ಸಲ್ಲಿಸಿ ಹಿಂತಿರುಗುತ್ತಿದ್ದಾಗ ಅಪಹರಣ ನಡೆದಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಾಸ್ ಜೈನ್, “ಜಿಲ್ಲೆಯಾದ್ಯಂತ ರಸ್ತೆ ತಡೆಗಳನ್ನು ಹಾಕಿ ಕಪ್ಪು ಸ್ಕಾರ್ಪಿಯೋವನ್ನು ವಶಕ್ಕೆ ಪಡೆದು ಯುವತಿಯನ್ನು ರಕ್ಷಿಸಲಾಗಿದೆ. ಹಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಪೊಲೀಸ್ ಕಚೇರಿಗಳಿರುವ ಪ್ರದೇಶದಲ್ಲೇ ಈ ಘಟನೆ ನಡೆದಿರುವುದರಿಂದ ಭಿಲ್ವಾರಾದಲ್ಲಿ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭಾರೀ ಭದ್ರತೆ ಇರುವ ಪ್ರದೇಶಗಳಲ್ಲಿಯೂ ಸಹ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...