ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆಗೆ ಕರೆದುಕೊಂಡು ಹೋದ ಪತಿ; ವಿಚ್ಛೇದನಕ್ಕೆ ಮುಂದಾದ ಪತ್ನಿ

Date:

ಮಧ್ಯಪ್ರದೇಶದ ಮಹಿಳೆಯೊಬ್ಬಳು ತನ್ನ ಗಂಡ ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆ ಹಾಗೂ ವಾರಣಾಸಿಗೆ ಕರೆದುಕೊಂಡು ಹೋಗಿದ್ದಕ್ಕೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ.

ಮಾಧ್ಯಮಗಳ ವರದಿಗಳ ಪ್ರಕಾರ, ಈ ಅಸಮಾನ್ಯ ಪ್ರಕರಣವು ಜನವರಿ 19ರಂದು ವರದಿಯಾಗಿದೆ. 10 ದಿನಗಳ  ಪ್ರವಾಸದಿಂದ ವಾಪಸಾದ ನಂತರ ಮಹಿಳೆಯು ಭೋಪಾಲ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾಳೆ.

ವಿಚ್ಛೇದನದ ಅರ್ಜಿಯಲ್ಲಿ ಮಹಿಳೆಯು, ತನ್ನ ಪತಿ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ವೇತನ ಪಡೆಯುತ್ತಿದ್ದಾರೆ. ನಾನು ಕೂಡ ಕೆಲಸ ಮಾಡುತ್ತಿದ್ದು ಉತ್ತಮ ಸಂಬಳ ಪಡೆಯುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಇಬ್ಬರು ವಿದೇಶಕ್ಕೆ ಹನಿಮೂನ್‌ಗೆ ಹೋಗುವುದು ದೊಡ್ಡ ವಿಷಯವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣಕಾಸಿನ ಯಾವುದೇ ನಿರ್ಬಂಧದ ಹೊರತಾಗಿಯೂ ಮಹಿಳೆಯ ಪತಿಯು ವಿದೇಶಕ್ಕೆ ಹನಿಮೂನ್‌ಗೆ ಕರೆದುಕೊಂಡು ಹೋಗಲು ನಿರಾಕರಿಸಿ ಭಾರತದಲ್ಲಿಯೇ ಇರುವ ಯಾವುದಾದರೂ ಸ್ಥಳಕ್ಕೆ ಕರೆದೊಯ್ಯಲು ಒತ್ತಾಯಿಸಿದ್ದ. ಇದಕ್ಕೆ ಕಾರಣ ತನ್ನ ಪೋಷಕರನ್ನು ಈತ ನೋಡಿಕೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ದಂಪತಿಗಳು ಗೋವಾ ಅಥವಾ ದಕ್ಷಿಣ ಭಾರತಕ್ಕೆ ಹೋಗಲು ಪರಸ್ಪರ ಒಪ್ಪಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಆದಾಗ್ಯೂ, ಮಹಿಳೆಯ ಪತಿ ತನ್ನ ಪತ್ನಿಗೆ ತಿಳಿಸದೆ ಅಯೋಧ್ಯೆ ಹಾಗೂ ವಾರಣಾಸಿಗೆ ವಿಮಾನವನ್ನು ಕಾಯ್ದಿರಿಸಿದ್ದ. ನಂತರ ಪತ್ನಿಗೆ ಒಂದು ದಿನ ಮೊದಲು, ತನ್ನ ತಾಯಿಯು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೂ ಮುನ್ನ ಅಯೋಧ್ಯೆ ನೋಡಬಯಸಿದ ಕಾರಣ ತಾನು ಪ್ರವಾಸದ ಯೋಜನೆಗಳನ್ನು ಬದಲಿಸಿರುವುದಾಗಿ ಹೇಳಿದ್ದ.

ಅಯೋಧ್ಯೆ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಆಕೆ ಯಾವುದೇ ವಿರೋಧ ವ್ಯಕ್ತಪಡಿಸದೆ ಗಂಡನೊಂದಿಗೆ ಪ್ರವಾಸಕ್ಕೆ ತೆರಳಿದ್ದಳು. ದೇವಸ್ಥಾನ ಪ್ರವಾಸದಿಂದ ಬಂದ ನಂತರದಲ್ಲಿ ತನ್ನ ಪತಿಯ ವಿರುದ್ಧ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ಅರ್ಜಿಯಲ್ಲಿ ತನ್ನ ಪತಿ ನನಗಿಂತ ತನ್ನ ಪೋಷಕರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದ ಎಂದು ತಿಳಿಸಿದ್ದಾಳೆ.

ಆದರೆ ಪತಿ ತನ್ನ ಹೇಳಿಕೆಯಲ್ಲಿ ಪತ್ನಿ ಸದಾ ಜಗಳವಾಡುತ್ತಿದ್ದಳು ಎಂದು ತಿಳಿಸಿದ್ದಾನೆ. ಪ್ರಸ್ತುತ ಇಬ್ಬರು ಭೋಪಾಲ್ ಕೌಟುಂಬಿಕ ನ್ಯಾಯಾಲಯದಲ್ಲಿ ಸಮಾಲೋಚನೆ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...