ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

Date:

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಭಾರತದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮಹಿಳೆಯೊಬ್ಬರು ಸ್ಥಾನಪಡೆದಿದ್ದಾರೆ. ದೇಶದ ಮೊದಲ 10 ಬಿಲಿಯನೇರ್‌ಗಳ ಪಟ್ಟಿಯಲ್ಲಿ ರೋಶ್ನಿ ನಾಡರ್ ಮಲ್ಹೋತ್ರಾ ಅವರು 3ನೇ ಸ್ಥಾನ ಪಡೆದಿದ್ದಾರೆ. ಭಾರತ ಅತ್ಯಂತ ಶ್ರೀಮಂತ ಮಹಿಳೆ ಎಂದು ಕರೆಸಿಕೊಂಡಿದ್ದಾರೆ.

ಇತ್ತೀಚೆಗೆ ಬಿಡೆಗಡೆಯಾದ ‘M3M ಹುರುನ್ ಇಂಡಿಯಾ ರಿಚ್ ಲಿಸ್ಟ್-2025’ನಲ್ಲಿ ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ರೋಶ್ನಿ ನಾಡರ್ ಮಲ್ಹೋತ್ರಾ ಹೆಸರು ಕಾಣಿಸಿಕೊಂಡಿದೆ. HCL ಟೆಕ್ನಾಲಜೀಸ್‌ನ ಅಧ್ಯಕ್ಷೆ ರೋಶ್ನಿ ನಾಡರ್ ಮಲ್ಹೋತ್ರಾ ಅವರು 2.84 ಲಕ್ಷ ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಪಟ್ಟಿಯಲ್ಲಿ ಮೋದಿ ಅವರ ಅತ್ಯಾಪ್ತರಾದ ಮುಖೇಶ್‌ ಅಂಬಾನಿ ಮತ್ತು ಗೌತಮ್ ಅದಾನಿ ಕ್ರಮವಾಗಿ 1ನೇ ಮತ್ತು 2ನೇ ಸ್ಥಾನದಲ್ಲಿದ್ದಾರೆ. ಈ ಇಬ್ಬರ ನಂತರ, 3ನೇ ಸ್ಥಾನದಲ್ಲಿ ರೋಶ್ನಿ ಅವರಿದ್ದಾರೆ. ಅವರು ಅಗ್ರ 3ನೇ ಸ್ಥಾನಕ್ಕೆ ಏರಿರುವುದು ಭಾರತದ ಕಾರ್ಪೋರೇಟ್ ವಲಯದಲ್ಲಿ ಮಹಿಳಾ ನಾಯಕತ್ವವೂ ಪುರುಷರಿಗೆ ಸಮಾನವಾಗಿ ನಿಲ್ಲಲು ಸಾಧ್ಯ ಎಂಬುದನ್ನು ತೋರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಹೋತ್ರಾ ಅವರು ಕೆಲ್ಲಾಗ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನ ಪದವಿ ಪಡೆದವರಾಗಿದ್ದಾರೆ.  2020ರಲ್ಲಿ ಮಲ್ಹೋತ್ರಾ ಅವರಿಗೆ ಅವರ ತಂದೆ ಶಿವ್ ನಾಡರ್ ಅವರು HCL ಟೆಕ್ನಾಲಜೀಸ್‌ನ ಅಧ್ಯಕ್ಷ ಹುದ್ದೆಯನ್ನು ಬಿಟ್ಟುಕೊಟ್ಟರು. ಅಂದಿನಿಂದ ರೋಶ್ನಿ ಅವರೇ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. HCL ಸಂಸ್ಥೆಯು ಕ್ಲೌಡ್ ಕಂಪ್ಯೂಟಿಂಗ್, AI-ಚಾಲಿತ ಐಟಿ ಸಲೂಷನ್ಸ್‌, ಸೈಬರ್ ಭದ್ರತೆ ಹಾಗೂ ಉದ್ಯಮ ಸೇವೆಗಳಲ್ಲಿ ಹೆಚ್ಚಾಗಿ ಕೆಲಸ ಮಾಡುತ್ತಿದೆ. ಕಳೆದ ಈ ಐದು ವರ್ಷಗಳಲ್ಲಿ HCL ಸಂಸ್ಥೆಯು ಜಾಗತಿಕ ಐಟಿ ಸೇವೆಗಳನ್ನು ವಿಸ್ತರಿಸಿದೆ. ಜೊತೆಗೆ, ವಿಶ್ವದ ಅತ್ಯುತ್ತಮ ತಂತ್ರಜ್ಞಾನ ಕಂಪನಿಗಳಲ್ಲಿ ಒಂದಾಗಿ ಬೆಳೆದಿದೆ ಎಂದು ವರದಿಯಾಗಿದೆ.

ಗಮನಾರ್ಹವಾಗಿ, ಭಾರತದಲ್ಲಿ 284 ಶತಕೋಟ್ಯಾಧಿಪತಿಗಳು (ಬಿಲಿಯನೇರ್‌) ಇದ್ದಾರೆ. ಈ 284 ಬಿಲಿಯನೇರ್‌ಗಳ ಒಟ್ಟು ಸಂಪತ್ತು 98 ಟ್ರಿಲಿಯನ್ ರೂ. (98 ಲಕ್ಷ ಕೋಟಿ ರೂಪಾಯಿ) ಗಳಾಗಿದ್ದು, ಭಾರತದ ಒಟ್ಟು GDPಯ ಸುಮಾರು ಮೂರನೇ ಒಂದು ಭಾಗದಷ್ಟಿದೆ.

ಈ ಲೇಖನ ಓದಿದ್ದೀರಾ?: ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ: ‘Gen-Z’ ಪ್ರತಿಭಟನೆಯ ಭೀತಿ ಕಾರಣವೇ?

ಇದು, ಸಂಪತ್ತಿನ ಕ್ರೋಢೀಕರಣ ಮತ್ತು ಕೇಂದ್ರೀಕರಣವನ್ನು ಎತ್ತಿ ತೋರಿಸುತ್ತದೆ. ಭಾರತವು ಸುಮಾರು 140 ಕೋಟಿ ಜನಸಂಖ್ಯೆಯನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಈ ಬೃಹತ್ ಜನಸಂಖ್ಯೆಯಲ್ಲಿ ಕೇವಲ 284 ಮಂದಿ ಮಾತ್ರವೇ ಭಾರತದ 1/3ರಷ್ಟು ಸಂಪತ್ತನ್ನು ಹೊಂದಿದ್ದಾರೆ. ಅಲ್ಲದೆ, ಇವರ ಆಸ್ತಿಯು ಕೇಂದ್ರ ಸರ್ಕಾರದ ವಾರ್ಷಿಕ ಬಜೆಟ್‌ (2025-26ರಲ್ಲಿ 50.65 ಲಕ್ಷ ಕೋಟಿ ರೂ.) ಗಿಂತಲೂ ಎರಡು ಪಟ್ಟು ಹೆಚ್ಚಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಈ ಬೆರಳೆಣಿಕೆಯ ಬಂಡವಾಳ ಶಾಹಿಗಳ ಪರವಾಗಿಯೇ ನೀತಿಗಳನ್ನು ರೂಪಿಸುತ್ತಿದೆ. ಕಾರ್ಪೋರೇಟ್‌ಗಳ ಆದಾಯ ಮತ್ತು ಸಂಪತ್ತನ್ನು ಹೆಚ್ಚಿಸಲು ಅಗತ್ಯವಿರುವ ಒಪ್ಪಂದಗಳು, ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಭಾರತದ ಬಹುಸಂಖ್ಯಾತ ಬಡವರನ್ನು ಮತ್ತಷ್ಟು ಬಡವರನ್ನಾಗಿಸುತ್ತಿದೆ ಎಂಬ ಗಂಭೀರ ಆರೋಪಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...