ಪುಣೆ | ಜನನಿಬಿಡ ಪ್ರದೇಶದಲ್ಲಿ ಬಸ್‌ನೊಳಗೆ ಯುವತಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

Date:

ಪುಣೆ ನಗರದ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ವ್ಯಕ್ತಿಯೊಬ್ಬ 26 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ. ಕ್ರಿಮಿನಲ್ ದಾಖಲೆ ಹೊಂದಿರುವ ಆರೋಪಿ ಯುವತಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದು, ಸದ್ಯ ಪೊಲೀಸರು ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ ಎಂದು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ವಿರೋಧ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪುಣೆ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು ಈ ಅಪರಾಧಗಳನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಗೃಹ ಇಲಾಖೆಯನ್ನು ದೂಷಿಸಿದ್ದಾರೆ.

ಇದನ್ನು ಓದಿದ್ದೀರಾ? ಆಘಾತಕಾರಿ ಘಟನೆ | ಅತ್ಯಾಚಾರ ವಿರೋಧಿಸಿದಕ್ಕೆ ಬಾಲಕಿ ಮೇಲೆ ಮಾರಣಾಂತಿಕ ಹಲ್ಲೆ; ಕಾಮುಕ ಬಾಲಕ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಂಕಿತ ಆರೋಪಿ ದತ್ತಾತ್ರಯ ರಾಮದಾಸ್ ಗಡೆ (36) ವಿರುದ್ಧ ಕಳ್ಳತನ ಮತ್ತು ಸರಗಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಸ್ವರ್ಗೇಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಅತಿದೊಡ್ಡ ಬಸ್ ಜಂಕ್ಷನ್‌ಗಳಲ್ಲಿ ಸ್ವರ್ಗೇಟ್ ಒಂದಾಗಿದೆ. ಮಂಗಳವಾರ ಬೆಳಿಗ್ಗೆ 5.45ರ ಸುಮಾರಿಗೆ ಸತಾರಾ ಜಿಲ್ಲೆಯ ಫಾಲ್ಟನ್‌ಗೆ ಹೋಗುವ ಒಂದು ಪ್ಲಾಟ್‌ಫಾರ್ಮ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ “ದೀದಿ (ಸಹೋದರಿ) ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ” ಎಂದು ಹೇಳಿದನು ಎಂದು ವರದಿಯಾಗಿದೆ.

ಬಳಿಕ ಯುವತಿಯನ್ನು ಬೇರೆಡೆ ನಿಲ್ಲಿಸಿದ್ದ ಖಾಲಿಯಾಗಿದ್ದ ‘ಶಿವ ಶಾಹಿ’ ಎಸಿ ಬಸ್‌ ಬಳಿ ಕರೆದೊಯ್ದನು. ಬಸ್‌ನಲ್ಲಿ ಯಾವುದೇ ದೀಪ ಇಲ್ಲದ ಕಾರಣ ಬಸ್‌ನ ಒಳಗೆ ಹೋಗಲು ಯುವತಿ ಹಿಂಜರಿದಳು. ಆದರೆ ಆರೋಪಿ ಮನವೊಲಿಸಿ ಬಸ್‌ನೊಳಗೆ ಕರೆದೊಯ್ದನು. ಬಳಿಕ ಅತ್ಯಾಚಾರ ಎಸಗಿದನು ಎಂದು ಯುವತಿ ಪೊಲೀಸರಿಗೆ ತಿಳಿಸಿದಳು.

ಇದನ್ನು ಓದಿದ್ದೀರಾ? ಆಘಾತಕಾರಿ ಪ್ರಕರಣ | 300 ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ

ಪೊಲೀಸರು ಸಿಸಿಟಿವಿಯಲ್ಲಿ ಆರೋಪಿಯನ್ನು ಗುರುತಿಸಿದ್ದು, ಆತನನ್ನು ಪತ್ತೆಹಚ್ಚಲು ಹಲವು ತಂಡಗಳನ್ನು ರಚಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉಪ ಪೊಲೀಸ್ ಆಯುಕ್ತೆ ಸ್ಮಾರ್ತನಾ ಪಾಟೀಲ್, “ಘಟನೆ ನಡೆದಾಗ ನಿಲ್ದಾಣದ ಆವರಣದಲ್ಲಿ ಅನೇಕ ಜನರು ಮತ್ತು ಹಲವಾರು ಬಸ್‌ಗಳು ಇದ್ದವು” ಎಂದು ಹೇಳಿದರು.

ಘಟನೆಯ ನಂತರ ಮಹಿಳೆ ತಕ್ಷಣ ಪೊಲೀಸರನ್ನು ಸಂಪರ್ಕಿಸಿಲ್ಲ. ಬದಲಿಗೆ ಬಸ್‌ನಲ್ಲಿ ಪ್ರಯಾಣ ಮಾಡುವಾಗ ತನ್ನ ಸ್ನೇಹಿತನಿಗೆ ಕರೆ ಮಾಡಿ ತನ್ನ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ತಿಳಿಸಿದ್ದಾಳೆ. ಸ್ನೇಹಿತ ದೂರು ನೀಡುವಂತೆ ತಿಳಿಸಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾನೆ ಎಂದು ಡಿಸಿಪಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...