ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕೃತ್ಯವನ್ನು ವೀಕ್ಷಿಸುತ್ತಿದ್ದ ಸಂತ್ರಸ್ತೆಯ ವಿಕೃತ ಪತಿ

Date:

ತನ್ನ ಮೇಲೆ ತನ್ನ ಪತಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆ ಕೃತ್ಯವನ್ನು ತನ್ನ ಪತಿ ಸೌದಿಯಿಂದ ಆನ್‌ಲೈನ್‌ನಲ್ಲಿ ನೋಡುತ್ತಿದ್ದನು ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಮಹಿಳೆಯು ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ಪತಿಯೇ ಪ್ರಮುಖ ಆರೋಪಿಯೆಂದು ಉಲ್ಲೇಖಿಸಿದ್ದಾರೆ. ತನ್ನ ಪತಿ ಸೌದಿ ಅರೆಬಿಯಾದಲ್ಲಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲು ಆತನ ಸ್ನೇಹಿತರಿಗೆ ಆತನೇ ಅವಕಾಶ ಮಾಡಿಕೊಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ.

“ನನ್ನ ಮೇಲೆ ಪತಿಯ ಸ್ನೇಹಿತರು ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದಾರೆ. ನನ್ನ ಪತಿ ಹಣಕ್ಕಾಗಿ ನನ್ನ ಮೇಲೆ ಅತ್ಯಾಚಾರ ಎಸಗಲು ತನ್ನ ಸ್ನೇಹಿತರಿಗೆ ಅವಕಾಶ ನೀಡುತ್ತಿದ್ಧಾನೆ. ಅಲ್ಲದೆ, ನನ್ನ ಮೇಲಾಗುವ ಅತ್ಯಾಚಾರ ಕೃತ್ಯವನ್ನು ಸೌದಿ ಅರೇಬಿಯಾದಿಂದ ಆನ್‌ಲೈನ್‌ನಲ್ಲಿ ವೀಕ್ಷಿಸಿದ್ದಾನೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಮಣಿಪುರ ಹೊತ್ತಿ ಉರಿದಿದ್ದಕ್ಕೆ ಪ್ರಧಾನಿ ಮೋದಿ ಏಕೆ ಕ್ಷಮೆ ಕೇಳಬೇಕು?

ಸಂತ್ರಸ್ತೆಯು 2010ರಲ್ಲಿ ಬುಲಂದ್‌ಶಹರ್‌ನ ಗುಲಾತಿ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಚೆನ್ನಾಗಿತ್ತು. ದಂಪತಿಗಳು ನಾಲ್ಕು ಮಕ್ಕಳನ್ನು ಮಾಡಿಕೊಂಡಿದ್ದರು. ಮಹಿಳೆಯ ಪತಿ ಸೌದಿ ಅರೇಬಿಯಾದಲ್ಲಿ ಆಟೋಮೊಬೈಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಆದರೆ, ಎರಡು ವರ್ಷಗಳ ಹಿಂದೆ ತನ್ನ ಪತಿ ಇಬ್ಬರು ಸ್ನೇಹಿತರೊಂದಿಗೆ ಮನೆಗೆ ಬಂದಿದ್ದನು. ಅವರಿಗೆ ತನ್ನ ಮೇಲೆ ಅತ್ಯಾಚಾರ ಎಸಗಲು ಆಕೆಯ ಪತಿಯೇ ಅವಕಾಶ ನೀಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನ್ನ ಪತಿಯ ಆ ಇಬ್ಬರೂ ಪುರುಷರು ತಾನು ವಾಸವಾಗಿರುವ ಪ್ರದೇಶದಲ್ಲಿಯೇ ನೆಲೆಸಿದ್ದು, ಆಗ್ಗಾಗ್ಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯದಲ್ಲಿ ತನ್ನ ಪತಿಯ ಕುಮ್ಮಕ್ಕು ಇದೆ ಎಂದು ಸಂತ್ರಸ್ತೆ ವಿವರಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...