ನೀರೆಂದು ಭಾವಿಸಿ ಅಡುಗೆಗೆ ‘ಆ್ಯಸಿಡ್‌’ ಬಳಸಿದ ಮಹಿಳೆ; 6 ಮಂದಿ ಸ್ಥಿತಿ ಗಂಭೀರ

Date:

ಮಹಿಳೆಯೊಬ್ಬರು ಅಡುಗೆಗೆ ಬೆಳ್ಳಿಗೆ ಬಳಸುವ ಆ್ಯಸಿಡ್‌ ಬಳಕೆ ಮಾಡಿದ್ದು, ಆ ಆಹಾರವನ್ನು ಸೇವಿಸಿ ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯು ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಘಾಟಲ್‌ನಲ್ಲಿ ನಡೆದಿದೆ.

ಅಡುವೆ ಮಾಡುವ ವೇಳೆ, ಆ್ಯಸಿಡ್‌ಅನ್ನು ನೀರು ಎಂದು ಭಾವಿಸಿದ ಸಂಧು ಎಂಬ ಮಹಿಳೆ, ಅದನ್ನು ಬಳಸಿ ಅಡುಗೆ ಮಾಡಿದ್ದಾರೆ. ಆ್ಯಸಿಡ್‌ ಮಿಶ್ರಿತ ಊಟವನ್ನು ತಿಂದಿರುವ ಮೂವರು ಮಕ್ಕಳ ಸೇರಿ ಆರು ಮಂದಿ ಅಸ್ವಸ್ಥರಾಗಿದ್ದಾರೆ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆದಗೂ, ರೋಗಿಗಳ ಆರೋಗ್ಯ ಇನ್ನೂ ಚೇತರಿಕೆ ಕಂಡಿಲ್ಲ ಎಂದು ವರದಿಯಾಗಿದೆ.

ಸಂಧು ಅವರ ಕುಟುಂಬಸ್ಥರು ಬೆಳ್ಳಿ ಆಭರಣ ತಯಾರಿಸುವ ವ್ಯವಹಾರ ನಡೆಸುತ್ತಿದ್ದಾರೆ. ಬೆಳ್ಳಿ ವಸ್ತುಗಳಿಗೆ ಆ್ಯಸಿಡ್‌ ಬಳಸುವುದರಿಂದ, ಅದನ್ನು ನೀರು ಹಾಕುವ ಪಾತ್ರೆಯಲ್ಲಿ ಹಾಕಿಟ್ಟಿದ್ದರು. ಅದನ್ನು ನೀರು ಎಂದು ಭಾವಿಸಿದ್ದ ಮಹಿಳೆ, ಆ್ಯಸಿಡ್‌ಅನ್ನು ಅಡುಗೆಗೆ ಹಾಕಿದ್ದಾರೆ. ಅಡುಗೆಗೆ ಆ್ಯಸಿಡ್ ಬಳಸಿರುವುದು ಅನಾರೋಗ್ಯಕ್ಕೆ ತುತ್ತಾಗುವವರೆಗೂ ಆಕೆಗೂ ಗೊತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ್ಯಸಿಡ್‌ ಮಿಶ್ರಿತ ಊಟ ತಿಂದವರಿಗೆ ಹೊಟ್ಟೆ ನೋವು, ವಾಕರಿಕೆ ಹಾಗೂ ತಲೆತಿರುಗುವಿಕೆ ಸೇರಿದಂತೆ ನಾನಾ ಸಮಸ್ಯೆಗಳು ಕಾಣಿಸಿಕೊಂಡಿವೆ. ಬಳಿಕ, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದಾಗ, ಆಹಾರದಲ್ಲಿ ಆ್ಯಸಿಡ್‌ ಮಿಶ್ರಣವಾಗಿದ್ದರಿಂದ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...