ಮಹಿಳೆಯರು ಮದ್ಯಪಾನ ಮಾಡುವುದು ಸಮಾಜಕ್ಕೆ ಹಾನಿ: ಪೊಲೀಸ್ ಅಧಿಕಾರಿ ವಿವಾದಾತ್ಮಕ ಹೇಳಿಕೆ

Date:

ಸಮಾನತೆ, ಸ್ವಾತಂತ್ರ್ಯ ಹಾಗೂ ಹಕ್ಕುಗಳ ಬಗ್ಗೆ ಹೆಚ್ಚು ಚರ್ಚೆಗಳು ಮತ್ತು ಹೋರಾಟಗಳು ನಡೆಯುತ್ತಿರುವ ಸಮಯದಲ್ಲಿಯೂ ಮಹಿಳೆಯರ ನಡವಳಿಕೆ, ಓಡಾಟದ ಕುರಿತು ಟೀಕೆಗಳು, ವಿವಾದಾತ್ಮಕ ಹೇಳಿಕೆಗಳು ವರದಿಯಾಗುತ್ತಿವೆ. ಇದೀಗ, ಪೊಲೀಸ್‌ ಅಧಿಕಾರಿಯೊಬ್ಬರು ಮಹಿಳೆಯರ ನಡೆವಳಿಕೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಆಕ್ರೋಶ-ಟೀಕೆಗೆ ಗುರಿಯಾಗಿದ್ದಾರೆ.

“ಮಹಿಳೆಯರು ಈಗ ಮದ್ಯಪಾನ ಮಾಡುತ್ತಿದ್ದಾರೆ ಮತ್ತು ಗಲಾಟೆ ನಡೆಸುತ್ತಿದ್ದಾರೆ. ಮಹಿಳೆಯರು ಮದ್ಯಪಾನ ಮಾಡುವುದು ಸಮಾಜಕ್ಕೆ ಹಾನಿ ಮಾಡುತ್ತದೆ” ಎಂದು ಪಶ್ಚಿಮ ಬಂಗಾಳದ ನಾಡಿಯಾ ಪ್ರದೇಶದ ರಣಘಾಟ್ ಪೊಲೀಸ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾಲ್ತು ಹಲ್ದಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅವರ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋದಲ್ಲಿ; “ಹುಡುಗರು ತಪ್ಪು ಕೆಲಸಗಳನ್ನು ಮಾಡುತ್ತಾರೆ. ಮಹಿಳೆಯರ ಕೆಲಸ ಹುಡುಗರು ತಪ್ಪು ಮಾಡದಂತೆ ತಡೆಯುವುದು. ಆದರೆ, ಈಗ ಮಹಿಳೆಯರು ಮದ್ಯಪಾನ ಮಾಡಿ ಗದ್ದಲ ಮಾಡುತ್ತಿದ್ದಾರೆ. ಇದು ಸಮಾಜಕ್ಕೆ ಹಾನಿಯನ್ನುಂಟುಮಾಡುತ್ತಿದೆ. ಸಮಾಜಕ್ಕೆ ಹುಚ್ಚು ಹಿಡಿದಂತಾಗುತ್ತದೆ” ಎಂದು ಅಧಿಕಾರಿ ಹೇಳುತ್ತಿರುವ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷದ ಕಾಳಿ ಪೂಜಾ ಮೆರವಣಿಗೆಗಳಲ್ಲಿ ಮದ್ಯಪಾನ ಮಾಡಿದವರಲ್ಲಿ ಯುವತಿಯರ ಪ್ರಮಾಣ ಅತ್ಯಧಿಕವಾಗಿದೆ ಎಂಬುದನ್ನು ಹೇಳಲು ನನಗೆ ನಾಚಿಕೆಯಾಗುತ್ತದೆ. ಹುಡುಗಿಯರು ಬೀದಿಗಳಲ್ಲಿ ನಿಂತು ಮದ್ಯ ಸೇವಿಸುತ್ತಿದ್ದಾರೆ. ಇದು ಮೆರವಣಿಗೆಯ ಸೌಂದರ್ಯವೇ? ನಾನು ಈ ಮೆರವಣಿಗೆಯನ್ನು ಖಂಡಿಸುತ್ತೇನೆ” ಎಂದು ಹಲ್ದಾರ್ ಹೇಳಿದ್ದಾರೆ.

“ಮನೆಯ ಮಹಿಳೆಯರು ಹೀಗಾದರೆ, ಸಮಾಜ ಎಲ್ಲಿಗೆ ಹೋಗುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆದಾಗ್ಯೂ, ಆ ಅಧಿಕಾರಿಯ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಮಾಡಿದ್ದೇನು? ಮಾಡಬೇಕಿರುವುದೇನು?

ಇತ್ತೀಚೆಗೆ, ಪಶ್ಚಿಮ ಬಂಗಾಳದ ದುರ್ಗಾಪುರದ ವೈದ್ಯಕೀಯ ಕಾಲೇಜಿನ ಬಳಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರದ ಬಗ್ಗೆ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ, ಪೊಲೀಸ್‌ ಅಧಿಕಾರಿಯ ವಿವಾದಾತ್ಮಕ ಹೇಳಿಕೆಯು ಆಕ್ರೋಶಕ್ಕೆ ಗುರಿತಯಾಗಿದೆ.

ಇನ್ನು, ವಿದ್ಯಾರ್ಥಿನಿಯ ಹತ್ಯೆ ಪ್ರಕರಣದ ಕುರಿತು ಮಾತನಾಡಿದ್ದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಡುರಾತ್ರಿಯಲ್ಲಿ ಹೆಣ್ಣುಕ್ಕಳು ಯಾಕೆ ಹೊರಗೆ ಬರಬೇಕು. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳು ರಾತ್ರಿ ಹೊರಬರದಂತೆ ಗಮನ ಹರಿಸಬೇಕು. ಅವರು ಹೊರಗೆ ಬರಲು ಬಿಡಬಾರದು. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು” ಎಂದು ಹೇಳಿದ್ದರು. ಮಮತಾ ಹೇಳಿಕೆಗಳು ವಿವಾದಕ್ಕೆ ಗುರಿಯಾಗಿದ್ದವು. ಟೀಕೆಗಳು ವ್ಯಕ್ತವಾಗಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...