ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು: ಮೀಸಲಾತಿ ಸಂಬಂಧ ಕೇಂದ್ರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

Date:

“ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು” ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಲೋಕಸಭೆ, ರಾಜ್ಯ ಶಾಸಕಾಂಗ ಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಸಂಸತ್ತಿನಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಆದೇಶಿಸುವ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿ ವಿಚಾರಣೆಯನ್ನು ಸೋಮವಾರ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ನಡೆಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಸಂವಿಧಾನದ ಪೀಠಿಕೆ ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಎಲ್ಲಾ ನಾಗರಿಕರು ಅರ್ಹರು ಎಂದು ಹೇಳುತ್ತದೆ. ಈ ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತರು ಯಾರು? ಅದು ಮಹಿಳೆಯರು. ಬಹುತೇಕ ಶೇಕಡ 48ರಷ್ಟು. ಇದು ಮಹಿಳೆಯ ರಾಜಕೀಯ ಸಮಾನತೆಯ ವಿಚಾರ” ಎಂದು ನ್ಯಾಯಮೂರ್ತಿ ನಾಗರತ್ನ ಮೌಖಿಕವಾಗಿ ಹೇಳಿದರು.

ಅದಾದ ಬಳಿಕ ನ್ಯಾಯಾಲಯವು ಹೊಸ ಸೀಮಾ ನಿರ್ಣಯ ಪ್ರಕ್ರಿಯೆ ನಡೆಸುವವರೆಗೆ ಕಾಯದೆ ಮಹಿಳಾ ಮೀಸಲಾತಿ ಮಸೂದೆ 2024 ಅನ್ನು ಜಾರಿಗೆ ತರುವಂತೆ ಕೋರಿ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೋಟಿಸ್ ನೀಡಿದ. ಠಾಕೂರ್ ಪರವಾಗಿ ಹಿರಿಯ ವಕೀಲೆ ಶೋಭಾ ಗುಪ್ತಾ ವಾದ ಮಂಡಿಸಿದ್ದಾರೆ.

“ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ನಮ್ಮ ದೇಶ ಸ್ವಾತಂತ್ರ್ಯ ಪಡೆದ 75 ವರ್ಷಗಳ ನಂತರ, ನಾವು (ಮಹಿಳೆಯರು) ಪ್ರಾತಿನಿಧ್ಯಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಬೇಕಾಗಿರುವುದು ದುರದೃಷ್ಟಕರ. ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮಾತ್ರ ಮೀಸಲಿಡಬೇಕಾಗಿದೆ. ಆದರೆ ಇಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವಾಗ ನ್ಯಾಯಾಲಯಕ್ಕೆ ಕೆಲವು ಮಿತಿಗಳಿವೆ” ಎಂದು ಗಮನಿಸಿದ ಪೀಠವು ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.

ಮಹಿಳಾ ಮೀಸಲಾತಿ ಮಸೂದೆಯನ್ನು 2023ರ ಸೆಪ್ಟೆಂಬರ್ 20ರಂದು ಲೋಕಸಭೆ ಮತ್ತು ಆ ವರ್ಷ ಸೆಪ್ಟೆಂಬರ್ 21ರಂದು ರಾಜ್ಯಸಭೆ ಅಂಗೀಕರಿಸಿದೆ. 2023ರ ಸೆಪ್ಟೆಂಬರ್ 28ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...