ತೆಲಂಗಾಣ | ಪರೀಕ್ಷೆಗೂ ಮುನ್ನ ಬುರ್ಖಾ ತೆಗೆಯಲು ಕಾಲೇಜು ಆಡಳಿತ ಸೂಚನೆ: ವಿದ್ಯಾರ್ಥಿನಿಯರ ಪ್ರತಿಭಟನೆ

Date:

  • ತೆಲಂಗಾಣ ಹೈದರಾಬಾದ್‌ ಸಂತೋಷ್‌ ನಗರದ ಕೆ.ವಿ.ರಂಗಾರೆಡ್ಡಿ ಕಾಲೇಜಿನಲ್ಲಿ ಘಟನೆ
  • ಘಟನೆಯ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಮೊಹಮ್ಮದ್ ಅಲಿ ಭರವಸೆ

ತೆಲಂಗಾಣ ರಾಜ್ಯದ ಹೈದರಾಬಾದ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ಮುನ್ನ ಬುರ್ಖಾ ತೆಗೆಯುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಕಾಲೇಜು ಆಡಳಿತದ ವಿರುದ್ಧ ವಿದ್ಯಾರ್ಥಿನಿಯರು ಶನಿವಾರ (ಜೂನ್ 17) ಪ್ರತಿಭಟಿಸಿದ್ದಾರೆ.

ಸಂತೋಷ್ ನಗರದಲ್ಲಿರುವ ಕೆ.ವಿ. ರಂಗಾರೆಡ್ಡಿ ಪದವಿ ಕಾಲೇಜಿನಲ್ಲಿ ಉರ್ದು ಮಾಧ್ಯಮದ ಪದವಿಯ ಮಧ್ಯಂತರ ಪೂರಕ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತೆಲಂಗಾಣ ಹೈದರಾಬಾದ್ ಕಾಲೇಜಿನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಬುರ್ಖಾಧಾರಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಪ್ರವೇಶ ನಿರಾಕರಿಸಿರುವುದು ವಿದ್ಯಾರ್ಥಿನಿಯರು ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಡ್ಡಾಯವಾಗಿ ಬುರ್ಖಾ ತೆಗೆದು ಪರೀಕ್ಷೆಗೆ ಹಾಜರಾಗಬೇಕು ಎಂಬ ನಿಯಮ ತೆಲಂಗಾಣ ರಾಜ್ಯದ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇಲ್ಲ. ಆದರೆ ಕೆ.ವಿ. ರಂಗಾರೆಡ್ಡಿ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ಪುರುಷ ಸಿಬ್ಬಂದಿಯ ಮುಂದೆಯೇ ಬುರ್ಖಾ ತೆಗೆಯುವಂತೆ ನಮ್ಮನ್ನು ಒತ್ತಾಯಿಸಲಾಯಿತು. ಸ್ವಲ್ಪ ಸಮಯ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಪರಿಗಣಿಸಲಿಲ್ಲ” ಎಂದು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ ಘಟನೆಯನ್ನು ಖಂಡಿಸಿದ್ದು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಸರ್ಕಾರ-ರಾಜ್ಯಪಾಲರ ನಡುವಿನ ತಿಕ್ಕಾಟಕ್ಕೆ ಕಾರಣವಾದ ಸೆಂಥಿಲ್‌ ಬಾಲಾಜಿ ಬಂಧನ

“ಕೆಲವು ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರು ಈ ರೀತಿ ಮಾಡುತ್ತಿದ್ದಾರೆ. ಆದರೆ, ಸಂಪೂರ್ಣವಾಗಿ ಜಾತ್ಯತೀತವಾಗಿರುವುದು ನಮ್ಮ ಧೋರಣೆಯಾಗಿದೆ” ಎಂದು ಹೇಳಿದ್ದಾರೆ.

“ಜನರು ತಾವು ಬಯಸಿದ ಬಟ್ಟೆಗಳನ್ನು ತೊಡಬಹುದು. ಆದರೆ, ಯುರೋಪಿಯನ್ನರ ಉಡುಪುಗಳನ್ನು ಧರಿಸುವುದು ಸರಿಯಲ್ಲ. ನಾವು ಮುಖ್ಯವಾಗಿ ಮಹಿಳೆಯರು ಭಾರತೀಯ ಉತ್ತಮ ಉಡುಪುಗಳನ್ನು ಧರಿಸಬೇಕು. ಬುರ್ಖಾ ಹಾಕಿಕೊಳ್ಳಬಾರದು ಎಂದು ಎಲ್ಲಿಯೂ ಬರೆದಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

“ಮಹಿಳೆಯರು ತುಂಡು ಬಟ್ಟೆ ಧರಿಸಿದರೆ ಆಗ ಸಮಸ್ಯೆಯಾಗಬಹುದು. ಅವರು ಪೂರ್ತಿ ಬಟ್ಟೆ ಧರಿಸುವುದರಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ” ಎಂದು ಸಚಿವ ಮೊಹಮ್ಮದ್‌ ಅಲಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...